Homeಫ್ಯಾಕ್ಟ್‌ಚೆಕ್Fact Check: ಪಿ.ವಿ ನರಸಿಂಹ ರಾವ್‌ರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿದ್ದಾರೆ ಎಂಬುವುದು ಸುಳ್ಳು

Fact Check: ಪಿ.ವಿ ನರಸಿಂಹ ರಾವ್‌ರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ ಶನಿವಾರ (ಮಾ.30) ಮಾಜಿ ಪ್ರಧಾನಿಗಳಾದ ಪಿ.ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್, ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಮತ್ತು ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರಿಗೆ ಘೋಷಿಸಲಾಗಿದ್ದ ಮರಣೋತ್ತರ ಪ್ರಶಸ್ತಿಯನ್ನು ಅವರ ಮಗ ಪಿ.ವಿ ಪ್ರಭಾಕರ್ ರಾವ್ ಅವರು ಸ್ವೀಕರಿಸಿದ್ದಾರೆ.

ಪಿ.ವಿ ನರಸಿಂಹರಾವ್ ಅವರ ಪ್ರಶಸ್ತಿಯನ್ನು ನೀಡುವಾಗ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ‘ಚಪ್ಪಾಳೆ ತಟ್ಟಿಲ್ಲ’ ಎಂದು ಪ್ರತಿಪಾದಿಸಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು “ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟದೆ ಸುಮ್ಮನೆ ಕೂರುವ ಮೂಲಕ ಪಿ.ವಿ ನರಸಿಂಹರಾವ್ ಅವರಿಗೆ ಅವಮಾನ ಮಾಡಿದ್ದಾರೆ, ಕಾಂಗ್ರೆಸ್‌ನ ಸಂಸ್ಕೃತಿ ತೋರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, “ಸೋನಿಯಾ ಗಾಂಧಿಯವರ ಸೂಚನೆಯಂತೆ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್: ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಕೀ ವರ್ಡ್‌ ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ ಎಂಬ ವಾದಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಧ್ಯಮಗಳು ವರದಿ ಪ್ರಕಟಿಸಿರುವುದು ಕಂಡು ಬಂದಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್‌ 30ರಂದು ಅದೇ ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನರಸಿಂಹ ರಾವ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪಿ.ವಿ ಪ್ರಭಾಕರ್ ರಾವ್ ಅವರು ತಂದೆಯ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ವಿಡಿಯೋವನ್ನು ರಾಷ್ಟ್ರಪತಿಗಳ ಅಧಿಕೃತ ಯೂಟ್ಯೂಬ್ ಖಾತೆಯಲ್ಲಿ ಮಾರ್ಚ್‌ 31ರಂದು ಅಪ್ಲೋಡ್‌ ಮಾಡಲಾಗಿದ್ದು, ಅದನ್ನು ಸರಿಯಾಗಿ ಗಮನಿಸಿದಾಗ ನಮಗೆ ಸತ್ಯ ಗೊತ್ತಾಗಿದೆ. ಒಟ್ಟು 41 ಸೆಕೆಂಡ್‌ನ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟುವ ದೃಶ್ಯವಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ರಾಷ್ಟ್ರಪತಿಗಳ ಯೂಟ್ಯೂಬ್‌ನಲ್ಲಿರುವ ವಿಡಿಯೋದಲ್ಲಿ ಪಿ.ವಿ ಪ್ರಭಾಕರ್ ಅವರ ಹೆಸರು ಕರೆಯುವಾಗ ಮಲ್ಲಿಕಾರ್ಜುನ ಖರ್ಗೆ ಮೊದಲು ಚಪ್ಪಾಳೆ ತಟ್ಟಿ ಸುಮ್ಮನಾಗಿದ್ದಾರೆ. ಆದರೆ, ಇನ್ನುಳಿದ ನಾಯಕರಾದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಇವರೆಲ್ಲ ಚಪ್ಪಾಳೆ ತಟ್ಟುವುದನ್ನು ಮುಂದುವರೆಸಿದ್ದಾರೆ. ಖರ್ಗೆ ಅವರು ಚಪ್ಪಾಳೆ ತಟ್ಟಿ ಸುಮ್ಮನಾದಾಗ ತೆಗೆದ ಫೋಟೋವನ್ನು ತಪ್ಪಾಗಿ ಹಂಚಿಕೊಂಡು, ಅವರು ಚಪ್ಪಾಳೆ ತಟ್ಟಿಲ್ಲ ಎನ್ನಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ

ಮಾರ್ಚ್‌ 30ರಂದು ದೂರ ದರ್ಶನದ ಯೂಟ್ಯೂಬ್ ಚಾನೆಲ್‌ನಲ್ಲೂ ಪ್ರಭಾಕರ್ ಅವರು ಪ್ರಶಸ್ತಿ ಸ್ವೀಕರಿಸಿದ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲೂ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟುವ ದೃಶ್ಯವಿದೆ. ಹಾಗಾಗಿ , ಪಿ.ವಿ ನರಸಿಂಹ ರಾವ್ ಅವರ ಪ್ರಶಸ್ತಿ ಪ್ರದಾನ ಮಾಡುವಾಗ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ ಎನ್ನುವುದು ಸುಳ್ಳು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...