Homeಫ್ಯಾಕ್ಟ್‌ಚೆಕ್Fact Check: ಪಿ.ವಿ ನರಸಿಂಹ ರಾವ್‌ರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿದ್ದಾರೆ ಎಂಬುವುದು ಸುಳ್ಳು

Fact Check: ಪಿ.ವಿ ನರಸಿಂಹ ರಾವ್‌ರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ ಶನಿವಾರ (ಮಾ.30) ಮಾಜಿ ಪ್ರಧಾನಿಗಳಾದ ಪಿ.ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್, ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಮತ್ತು ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರಿಗೆ ಘೋಷಿಸಲಾಗಿದ್ದ ಮರಣೋತ್ತರ ಪ್ರಶಸ್ತಿಯನ್ನು ಅವರ ಮಗ ಪಿ.ವಿ ಪ್ರಭಾಕರ್ ರಾವ್ ಅವರು ಸ್ವೀಕರಿಸಿದ್ದಾರೆ.

ಪಿ.ವಿ ನರಸಿಂಹರಾವ್ ಅವರ ಪ್ರಶಸ್ತಿಯನ್ನು ನೀಡುವಾಗ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ‘ಚಪ್ಪಾಳೆ ತಟ್ಟಿಲ್ಲ’ ಎಂದು ಪ್ರತಿಪಾದಿಸಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು “ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟದೆ ಸುಮ್ಮನೆ ಕೂರುವ ಮೂಲಕ ಪಿ.ವಿ ನರಸಿಂಹರಾವ್ ಅವರಿಗೆ ಅವಮಾನ ಮಾಡಿದ್ದಾರೆ, ಕಾಂಗ್ರೆಸ್‌ನ ಸಂಸ್ಕೃತಿ ತೋರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, “ಸೋನಿಯಾ ಗಾಂಧಿಯವರ ಸೂಚನೆಯಂತೆ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್: ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಕೀ ವರ್ಡ್‌ ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ ಎಂಬ ವಾದಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಧ್ಯಮಗಳು ವರದಿ ಪ್ರಕಟಿಸಿರುವುದು ಕಂಡು ಬಂದಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್‌ 30ರಂದು ಅದೇ ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನರಸಿಂಹ ರಾವ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪಿ.ವಿ ಪ್ರಭಾಕರ್ ರಾವ್ ಅವರು ತಂದೆಯ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ವಿಡಿಯೋವನ್ನು ರಾಷ್ಟ್ರಪತಿಗಳ ಅಧಿಕೃತ ಯೂಟ್ಯೂಬ್ ಖಾತೆಯಲ್ಲಿ ಮಾರ್ಚ್‌ 31ರಂದು ಅಪ್ಲೋಡ್‌ ಮಾಡಲಾಗಿದ್ದು, ಅದನ್ನು ಸರಿಯಾಗಿ ಗಮನಿಸಿದಾಗ ನಮಗೆ ಸತ್ಯ ಗೊತ್ತಾಗಿದೆ. ಒಟ್ಟು 41 ಸೆಕೆಂಡ್‌ನ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟುವ ದೃಶ್ಯವಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ರಾಷ್ಟ್ರಪತಿಗಳ ಯೂಟ್ಯೂಬ್‌ನಲ್ಲಿರುವ ವಿಡಿಯೋದಲ್ಲಿ ಪಿ.ವಿ ಪ್ರಭಾಕರ್ ಅವರ ಹೆಸರು ಕರೆಯುವಾಗ ಮಲ್ಲಿಕಾರ್ಜುನ ಖರ್ಗೆ ಮೊದಲು ಚಪ್ಪಾಳೆ ತಟ್ಟಿ ಸುಮ್ಮನಾಗಿದ್ದಾರೆ. ಆದರೆ, ಇನ್ನುಳಿದ ನಾಯಕರಾದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಇವರೆಲ್ಲ ಚಪ್ಪಾಳೆ ತಟ್ಟುವುದನ್ನು ಮುಂದುವರೆಸಿದ್ದಾರೆ. ಖರ್ಗೆ ಅವರು ಚಪ್ಪಾಳೆ ತಟ್ಟಿ ಸುಮ್ಮನಾದಾಗ ತೆಗೆದ ಫೋಟೋವನ್ನು ತಪ್ಪಾಗಿ ಹಂಚಿಕೊಂಡು, ಅವರು ಚಪ್ಪಾಳೆ ತಟ್ಟಿಲ್ಲ ಎನ್ನಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ

ಮಾರ್ಚ್‌ 30ರಂದು ದೂರ ದರ್ಶನದ ಯೂಟ್ಯೂಬ್ ಚಾನೆಲ್‌ನಲ್ಲೂ ಪ್ರಭಾಕರ್ ಅವರು ಪ್ರಶಸ್ತಿ ಸ್ವೀಕರಿಸಿದ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲೂ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟುವ ದೃಶ್ಯವಿದೆ. ಹಾಗಾಗಿ , ಪಿ.ವಿ ನರಸಿಂಹ ರಾವ್ ಅವರ ಪ್ರಶಸ್ತಿ ಪ್ರದಾನ ಮಾಡುವಾಗ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ ಎನ್ನುವುದು ಸುಳ್ಳು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...