Homeಫ್ಯಾಕ್ಟ್‌ಚೆಕ್FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು...

FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ರಾಜ್ಯಸಭಾ ಸಂಸದ ಮತ್ತು ವಕೀಲ ಮಜೀದ್ ಮೆಮನ್ 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಮೆಮನ್ ಅವರನ್ನು ರಾಜ್ಯಸಭೆ ಸಂಸದರನ್ನಾಗಿಸಿದರೆ, ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಉಜ್ವಲ್ ನಿಕಮ್‌ಗೆ ಬಿಜೆಪಿ ಲೋಕಸಭೆ ಟಿಕೆಟ್ ನೀಡಿದೆ ಎಂದೂ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ವಕೀಲ ಉಜ್ವಲ್ ನಿಕಮ್ ಅವರಿಗೆ ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ ಲೋಕಸಭೆಯ ಟಿಕೆಟ್‌ ನೀಡಿರುವುದು ಖಚಿತವಾಗಿದೆ. ವಕೀಲ ಉಜ್ವಲ್ ನಿಕಮ್ ಅವರು ಮುಂಬೈ 26/11 ಭಯೋತ್ಪಾದಕ ದಾಳಿಯ ವಿಚಾರಣೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿದ್ದರು. ಅಜ್ಮಲ್ ಕಸಬ್‌ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ಆದರೆ, ‘ಮಜೀದ್ ಮೆಮನ್’ ಅವರು ಕಸಬ್‌ ಪರ ವಾದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಹುಡುಕಿದಾಗ, ಮಜೀದ್ ಮೆಮನ್ ಅವರು ಅಜ್ಮಲ್ ಕಸಬ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ಲಭ್ಯವಾಗಿಲ್ಲ.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ, 26/11ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಅಜ್ಮಲ್ ಕಸಬ್ ಪರ ವಾದಿಸಲು ಯಾವುದೇ ವಕೀಲರು ಮುಂದೆ ಬಂದಿರಲಿಲ್ಲ. ಈ ಕಾರಣಕ್ಕೆ, ಪ್ರತಿ ಆರೋಪಿಯೂ ನ್ಯಾಯಯುತ ವಿಚಾರಣೆಗೆ ಒಳಗಾಗುವ ಹಕ್ಕಿದೆ ಮತ್ತು ಆರೋಪಿಯನ್ನು ಕನೂನಾತ್ಮಕ ವಕಾಲತ್ತು ವಹಿಸದಿರಲು ಅಸಾಧ್ಯ ಎಂಬ ಕಾರಣಕ್ಕಾಗಿ ಕೆಲ ವಕೀಲರನ್ನು ಕೋರ್ಟ್ ನೇಮಿಸಿತ್ತು. ಹೀಗೆ, ಕಸಬ್‌ನ ರಕ್ಷಣಾ ವಕೀಲರಾಗಿ ಅಬ್ಬಾಸ್ ಕಾಜ್ಮಿ ಅವರು ನೇಮಕಗೊಂಡರು. ಆದರೆ, ಕಾಜ್ಮಿ ಅವರು ಕಸಬ್‌ ಪರ ವಕಾಲತ್ತು ವಹಿಸಲು ನಿರಾಕರಿಸಿದ ಕಾರಣ, ಅಸಹಕಾರಕ್ಕಾಗಿ ಅವರನ್ನು ತೆಗೆದು ಹಾಕಲಾತ್ತು.

ಅಬ್ಬಾಸ್ ಕಾಜ್ಮಿಯವರ ಪದಚ್ಯುತಿ ನಂತರ ಕೆ.ಪಿ ಪವಾರ್, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಶಾ ಎಂಬ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಕಸಬ್‌ ಪರ ವಾದ ಮಾಡಿದ್ದರು ಮತ್ತು ವಕೀಲ ರಾಜು ರಾಮಚಂದ್ರನ್ ಅವರು ಕಸಬ್‌ನ ಮರಣದಂಡನೆಯ ವಿರುದ್ಧದ ಮೇಲ್ಮನವಿಯ ಸಂದರ್ಭದಲ್ಲಿ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಅಜ್ಮಲ್ ಕಸಬ್‌ಗೆ ಮರಣದಂಡನೆ ಶಿಕ್ಷೆಯ ಪರವಾಗಿ ಮಾಜಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಗೋಪಾಲ್ ಸುಬ್ರಮಣಿಯಂ ಅವರ ನೇತೃತ್ವದ ವಕೀಲ ತಂಡ ವಾದಿಸಿತ್ತು.

“ಕಸಬ್‌ ಪರ ನಾನು ನ್ಯಾಯಾಲಯದಲ್ಲಿ ಏಕೆ ವಾದಿಸುವುದಿಲ್ಲ” ಎಂದು ಮಜೀದ್‌ ಮೆಮನ್‌ ಬರೆದಿರುವ ಲೇಖನವನ್ನು ದಿ ಎಕನಾಮಿಕ್ ಟೈಮ್ಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸುದ್ದಿ ಸಂಸ್ಥೆಗಳು ಡಿಸೆಂಬರ್ 21, 2008 ರಂದು ಪ್ರಕಟಿಸಿದ್ದವು.

ಈ ಲೇಖನದಲ್ಲಿ, ಮೆಮನ್‌ ಅವರು ಅಜ್ಮಲ್‌ ಕಸಬ್‌ನ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು. ಕಸಬ್‌ ವಿರುದ್ಧ ಇರುವ ಸಾಕಷ್ಟು ಸಾಕ್ಷ್ಯಗಳನ್ನು ಉಲ್ಲೇಖಿಸಿ ಈ ಅಪರಾಧ ಮರಣ ದಂಡನೆಗೆ ಕಾರಣವಾಗುತ್ತದೆ ಎಂದು ಒತ್ತಿ ಹೇಳಿದ್ದರು. ಅಲ್ಲದೆ, ಅಜ್ಮಲ್‌ ಕಸಬ್‌ ವಕೀಲರನ್ನು ಹೊಂದುವುದು ಅವಶ್ಯಕ. ವಕೀಲರು ಇಲ್ಲದಿರುವುದು ವಿಚಾರಣೆಯ ನ್ಯಾಯಸಮ್ಮತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು. ಅದರ ಜೊತೆಗೆ ಅಜ್ಮಲ್‌ ಕಸಬ್‌ ಪರ ನಾನು ಕೋರ್ಟ್‌ನಲ್ಲಿ ವಾದ ಮಾಡಲ್ಲ. ಏಕೆಂದರೆ ಅವರ ಪ್ರಕರಣ ಸಮರ್ಥನೀಯವಲ್ಲ. ಅವನ ಅಪರಾಧವನ್ನು ನಾವೆಲ್ಲರೂ ನೋಡಿದ್ದೇವೆ ಎಂದು ತಮ್ಮ ಲೇಖನವನ್ನು ಮೆಮನ್‌ ಅಂತ್ಯಗೊಳಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಮಜೀದ್ ಮೆಮನ್ ಅವರು 26/11 ಮುಂಬೈ ದಾಳಿ ಪ್ರಕರಣದ ವಿಚಾರಣೆಯ ಯಾವುದೇ ಹಂತದಲ್ಲಿ ಆರೋಪಿ ಅಜ್ಮಲ್ ಕಸಬ್‌ನ ಕಾನೂನು ತಂಡದ ಭಾಗವಾಗಿರಲಿಲ್ಲ. ಅಬ್ಬಾಸ್ ಕಾಜ್ಮಿ, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಷಾ ಮುಂತಾದ ವಕೀಲರು ವಿವಿಧ ಹಂತಗಳಲ್ಲಿ ಕಸಬ್‌ನನ್ನು ಪ್ರತಿನಿಧಿಸಿದರು. ಕಸಬ್‌ ಪರ ವಾದಿಸುವುದಿಲ್ಲ ಎಂದು ಸ್ವತಃ ಮೆಮನ್‌ ಹೇಳಿದ್ದರು. ಹಾಗಾಗಿ ಮಜೀದ್ ಮೆಮನ್ ಅಜ್ಮಲ್ ಕಸಬ್‌ನ ಪರ ವಾದಿಸಿದ್ದರು ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...