Homeಫ್ಯಾಕ್ಟ್‌ಚೆಕ್FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು...

FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ರಾಜ್ಯಸಭಾ ಸಂಸದ ಮತ್ತು ವಕೀಲ ಮಜೀದ್ ಮೆಮನ್ 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಮೆಮನ್ ಅವರನ್ನು ರಾಜ್ಯಸಭೆ ಸಂಸದರನ್ನಾಗಿಸಿದರೆ, ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಉಜ್ವಲ್ ನಿಕಮ್‌ಗೆ ಬಿಜೆಪಿ ಲೋಕಸಭೆ ಟಿಕೆಟ್ ನೀಡಿದೆ ಎಂದೂ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ವಕೀಲ ಉಜ್ವಲ್ ನಿಕಮ್ ಅವರಿಗೆ ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ ಲೋಕಸಭೆಯ ಟಿಕೆಟ್‌ ನೀಡಿರುವುದು ಖಚಿತವಾಗಿದೆ. ವಕೀಲ ಉಜ್ವಲ್ ನಿಕಮ್ ಅವರು ಮುಂಬೈ 26/11 ಭಯೋತ್ಪಾದಕ ದಾಳಿಯ ವಿಚಾರಣೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿದ್ದರು. ಅಜ್ಮಲ್ ಕಸಬ್‌ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ಆದರೆ, ‘ಮಜೀದ್ ಮೆಮನ್’ ಅವರು ಕಸಬ್‌ ಪರ ವಾದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಹುಡುಕಿದಾಗ, ಮಜೀದ್ ಮೆಮನ್ ಅವರು ಅಜ್ಮಲ್ ಕಸಬ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ಲಭ್ಯವಾಗಿಲ್ಲ.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ, 26/11ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಅಜ್ಮಲ್ ಕಸಬ್ ಪರ ವಾದಿಸಲು ಯಾವುದೇ ವಕೀಲರು ಮುಂದೆ ಬಂದಿರಲಿಲ್ಲ. ಈ ಕಾರಣಕ್ಕೆ, ಪ್ರತಿ ಆರೋಪಿಯೂ ನ್ಯಾಯಯುತ ವಿಚಾರಣೆಗೆ ಒಳಗಾಗುವ ಹಕ್ಕಿದೆ ಮತ್ತು ಆರೋಪಿಯನ್ನು ಕನೂನಾತ್ಮಕ ವಕಾಲತ್ತು ವಹಿಸದಿರಲು ಅಸಾಧ್ಯ ಎಂಬ ಕಾರಣಕ್ಕಾಗಿ ಕೆಲ ವಕೀಲರನ್ನು ಕೋರ್ಟ್ ನೇಮಿಸಿತ್ತು. ಹೀಗೆ, ಕಸಬ್‌ನ ರಕ್ಷಣಾ ವಕೀಲರಾಗಿ ಅಬ್ಬಾಸ್ ಕಾಜ್ಮಿ ಅವರು ನೇಮಕಗೊಂಡರು. ಆದರೆ, ಕಾಜ್ಮಿ ಅವರು ಕಸಬ್‌ ಪರ ವಕಾಲತ್ತು ವಹಿಸಲು ನಿರಾಕರಿಸಿದ ಕಾರಣ, ಅಸಹಕಾರಕ್ಕಾಗಿ ಅವರನ್ನು ತೆಗೆದು ಹಾಕಲಾತ್ತು.

ಅಬ್ಬಾಸ್ ಕಾಜ್ಮಿಯವರ ಪದಚ್ಯುತಿ ನಂತರ ಕೆ.ಪಿ ಪವಾರ್, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಶಾ ಎಂಬ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಕಸಬ್‌ ಪರ ವಾದ ಮಾಡಿದ್ದರು ಮತ್ತು ವಕೀಲ ರಾಜು ರಾಮಚಂದ್ರನ್ ಅವರು ಕಸಬ್‌ನ ಮರಣದಂಡನೆಯ ವಿರುದ್ಧದ ಮೇಲ್ಮನವಿಯ ಸಂದರ್ಭದಲ್ಲಿ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಅಜ್ಮಲ್ ಕಸಬ್‌ಗೆ ಮರಣದಂಡನೆ ಶಿಕ್ಷೆಯ ಪರವಾಗಿ ಮಾಜಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಗೋಪಾಲ್ ಸುಬ್ರಮಣಿಯಂ ಅವರ ನೇತೃತ್ವದ ವಕೀಲ ತಂಡ ವಾದಿಸಿತ್ತು.

“ಕಸಬ್‌ ಪರ ನಾನು ನ್ಯಾಯಾಲಯದಲ್ಲಿ ಏಕೆ ವಾದಿಸುವುದಿಲ್ಲ” ಎಂದು ಮಜೀದ್‌ ಮೆಮನ್‌ ಬರೆದಿರುವ ಲೇಖನವನ್ನು ದಿ ಎಕನಾಮಿಕ್ ಟೈಮ್ಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸುದ್ದಿ ಸಂಸ್ಥೆಗಳು ಡಿಸೆಂಬರ್ 21, 2008 ರಂದು ಪ್ರಕಟಿಸಿದ್ದವು.

ಈ ಲೇಖನದಲ್ಲಿ, ಮೆಮನ್‌ ಅವರು ಅಜ್ಮಲ್‌ ಕಸಬ್‌ನ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು. ಕಸಬ್‌ ವಿರುದ್ಧ ಇರುವ ಸಾಕಷ್ಟು ಸಾಕ್ಷ್ಯಗಳನ್ನು ಉಲ್ಲೇಖಿಸಿ ಈ ಅಪರಾಧ ಮರಣ ದಂಡನೆಗೆ ಕಾರಣವಾಗುತ್ತದೆ ಎಂದು ಒತ್ತಿ ಹೇಳಿದ್ದರು. ಅಲ್ಲದೆ, ಅಜ್ಮಲ್‌ ಕಸಬ್‌ ವಕೀಲರನ್ನು ಹೊಂದುವುದು ಅವಶ್ಯಕ. ವಕೀಲರು ಇಲ್ಲದಿರುವುದು ವಿಚಾರಣೆಯ ನ್ಯಾಯಸಮ್ಮತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು. ಅದರ ಜೊತೆಗೆ ಅಜ್ಮಲ್‌ ಕಸಬ್‌ ಪರ ನಾನು ಕೋರ್ಟ್‌ನಲ್ಲಿ ವಾದ ಮಾಡಲ್ಲ. ಏಕೆಂದರೆ ಅವರ ಪ್ರಕರಣ ಸಮರ್ಥನೀಯವಲ್ಲ. ಅವನ ಅಪರಾಧವನ್ನು ನಾವೆಲ್ಲರೂ ನೋಡಿದ್ದೇವೆ ಎಂದು ತಮ್ಮ ಲೇಖನವನ್ನು ಮೆಮನ್‌ ಅಂತ್ಯಗೊಳಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಮಜೀದ್ ಮೆಮನ್ ಅವರು 26/11 ಮುಂಬೈ ದಾಳಿ ಪ್ರಕರಣದ ವಿಚಾರಣೆಯ ಯಾವುದೇ ಹಂತದಲ್ಲಿ ಆರೋಪಿ ಅಜ್ಮಲ್ ಕಸಬ್‌ನ ಕಾನೂನು ತಂಡದ ಭಾಗವಾಗಿರಲಿಲ್ಲ. ಅಬ್ಬಾಸ್ ಕಾಜ್ಮಿ, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಷಾ ಮುಂತಾದ ವಕೀಲರು ವಿವಿಧ ಹಂತಗಳಲ್ಲಿ ಕಸಬ್‌ನನ್ನು ಪ್ರತಿನಿಧಿಸಿದರು. ಕಸಬ್‌ ಪರ ವಾದಿಸುವುದಿಲ್ಲ ಎಂದು ಸ್ವತಃ ಮೆಮನ್‌ ಹೇಳಿದ್ದರು. ಹಾಗಾಗಿ ಮಜೀದ್ ಮೆಮನ್ ಅಜ್ಮಲ್ ಕಸಬ್‌ನ ಪರ ವಾದಿಸಿದ್ದರು ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...