Homeಫ್ಯಾಕ್ಟ್‌ಚೆಕ್FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು...

FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ರಾಜ್ಯಸಭಾ ಸಂಸದ ಮತ್ತು ವಕೀಲ ಮಜೀದ್ ಮೆಮನ್ 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಮೆಮನ್ ಅವರನ್ನು ರಾಜ್ಯಸಭೆ ಸಂಸದರನ್ನಾಗಿಸಿದರೆ, ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಉಜ್ವಲ್ ನಿಕಮ್‌ಗೆ ಬಿಜೆಪಿ ಲೋಕಸಭೆ ಟಿಕೆಟ್ ನೀಡಿದೆ ಎಂದೂ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ವಕೀಲ ಉಜ್ವಲ್ ನಿಕಮ್ ಅವರಿಗೆ ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ ಲೋಕಸಭೆಯ ಟಿಕೆಟ್‌ ನೀಡಿರುವುದು ಖಚಿತವಾಗಿದೆ. ವಕೀಲ ಉಜ್ವಲ್ ನಿಕಮ್ ಅವರು ಮುಂಬೈ 26/11 ಭಯೋತ್ಪಾದಕ ದಾಳಿಯ ವಿಚಾರಣೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿದ್ದರು. ಅಜ್ಮಲ್ ಕಸಬ್‌ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ಆದರೆ, ‘ಮಜೀದ್ ಮೆಮನ್’ ಅವರು ಕಸಬ್‌ ಪರ ವಾದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಹುಡುಕಿದಾಗ, ಮಜೀದ್ ಮೆಮನ್ ಅವರು ಅಜ್ಮಲ್ ಕಸಬ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ಲಭ್ಯವಾಗಿಲ್ಲ.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ, 26/11ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಅಜ್ಮಲ್ ಕಸಬ್ ಪರ ವಾದಿಸಲು ಯಾವುದೇ ವಕೀಲರು ಮುಂದೆ ಬಂದಿರಲಿಲ್ಲ. ಈ ಕಾರಣಕ್ಕೆ, ಪ್ರತಿ ಆರೋಪಿಯೂ ನ್ಯಾಯಯುತ ವಿಚಾರಣೆಗೆ ಒಳಗಾಗುವ ಹಕ್ಕಿದೆ ಮತ್ತು ಆರೋಪಿಯನ್ನು ಕನೂನಾತ್ಮಕ ವಕಾಲತ್ತು ವಹಿಸದಿರಲು ಅಸಾಧ್ಯ ಎಂಬ ಕಾರಣಕ್ಕಾಗಿ ಕೆಲ ವಕೀಲರನ್ನು ಕೋರ್ಟ್ ನೇಮಿಸಿತ್ತು. ಹೀಗೆ, ಕಸಬ್‌ನ ರಕ್ಷಣಾ ವಕೀಲರಾಗಿ ಅಬ್ಬಾಸ್ ಕಾಜ್ಮಿ ಅವರು ನೇಮಕಗೊಂಡರು. ಆದರೆ, ಕಾಜ್ಮಿ ಅವರು ಕಸಬ್‌ ಪರ ವಕಾಲತ್ತು ವಹಿಸಲು ನಿರಾಕರಿಸಿದ ಕಾರಣ, ಅಸಹಕಾರಕ್ಕಾಗಿ ಅವರನ್ನು ತೆಗೆದು ಹಾಕಲಾತ್ತು.

ಅಬ್ಬಾಸ್ ಕಾಜ್ಮಿಯವರ ಪದಚ್ಯುತಿ ನಂತರ ಕೆ.ಪಿ ಪವಾರ್, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಶಾ ಎಂಬ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಕಸಬ್‌ ಪರ ವಾದ ಮಾಡಿದ್ದರು ಮತ್ತು ವಕೀಲ ರಾಜು ರಾಮಚಂದ್ರನ್ ಅವರು ಕಸಬ್‌ನ ಮರಣದಂಡನೆಯ ವಿರುದ್ಧದ ಮೇಲ್ಮನವಿಯ ಸಂದರ್ಭದಲ್ಲಿ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಅಜ್ಮಲ್ ಕಸಬ್‌ಗೆ ಮರಣದಂಡನೆ ಶಿಕ್ಷೆಯ ಪರವಾಗಿ ಮಾಜಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಗೋಪಾಲ್ ಸುಬ್ರಮಣಿಯಂ ಅವರ ನೇತೃತ್ವದ ವಕೀಲ ತಂಡ ವಾದಿಸಿತ್ತು.

“ಕಸಬ್‌ ಪರ ನಾನು ನ್ಯಾಯಾಲಯದಲ್ಲಿ ಏಕೆ ವಾದಿಸುವುದಿಲ್ಲ” ಎಂದು ಮಜೀದ್‌ ಮೆಮನ್‌ ಬರೆದಿರುವ ಲೇಖನವನ್ನು ದಿ ಎಕನಾಮಿಕ್ ಟೈಮ್ಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸುದ್ದಿ ಸಂಸ್ಥೆಗಳು ಡಿಸೆಂಬರ್ 21, 2008 ರಂದು ಪ್ರಕಟಿಸಿದ್ದವು.

ಈ ಲೇಖನದಲ್ಲಿ, ಮೆಮನ್‌ ಅವರು ಅಜ್ಮಲ್‌ ಕಸಬ್‌ನ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು. ಕಸಬ್‌ ವಿರುದ್ಧ ಇರುವ ಸಾಕಷ್ಟು ಸಾಕ್ಷ್ಯಗಳನ್ನು ಉಲ್ಲೇಖಿಸಿ ಈ ಅಪರಾಧ ಮರಣ ದಂಡನೆಗೆ ಕಾರಣವಾಗುತ್ತದೆ ಎಂದು ಒತ್ತಿ ಹೇಳಿದ್ದರು. ಅಲ್ಲದೆ, ಅಜ್ಮಲ್‌ ಕಸಬ್‌ ವಕೀಲರನ್ನು ಹೊಂದುವುದು ಅವಶ್ಯಕ. ವಕೀಲರು ಇಲ್ಲದಿರುವುದು ವಿಚಾರಣೆಯ ನ್ಯಾಯಸಮ್ಮತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು. ಅದರ ಜೊತೆಗೆ ಅಜ್ಮಲ್‌ ಕಸಬ್‌ ಪರ ನಾನು ಕೋರ್ಟ್‌ನಲ್ಲಿ ವಾದ ಮಾಡಲ್ಲ. ಏಕೆಂದರೆ ಅವರ ಪ್ರಕರಣ ಸಮರ್ಥನೀಯವಲ್ಲ. ಅವನ ಅಪರಾಧವನ್ನು ನಾವೆಲ್ಲರೂ ನೋಡಿದ್ದೇವೆ ಎಂದು ತಮ್ಮ ಲೇಖನವನ್ನು ಮೆಮನ್‌ ಅಂತ್ಯಗೊಳಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಮಜೀದ್ ಮೆಮನ್ ಅವರು 26/11 ಮುಂಬೈ ದಾಳಿ ಪ್ರಕರಣದ ವಿಚಾರಣೆಯ ಯಾವುದೇ ಹಂತದಲ್ಲಿ ಆರೋಪಿ ಅಜ್ಮಲ್ ಕಸಬ್‌ನ ಕಾನೂನು ತಂಡದ ಭಾಗವಾಗಿರಲಿಲ್ಲ. ಅಬ್ಬಾಸ್ ಕಾಜ್ಮಿ, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಷಾ ಮುಂತಾದ ವಕೀಲರು ವಿವಿಧ ಹಂತಗಳಲ್ಲಿ ಕಸಬ್‌ನನ್ನು ಪ್ರತಿನಿಧಿಸಿದರು. ಕಸಬ್‌ ಪರ ವಾದಿಸುವುದಿಲ್ಲ ಎಂದು ಸ್ವತಃ ಮೆಮನ್‌ ಹೇಳಿದ್ದರು. ಹಾಗಾಗಿ ಮಜೀದ್ ಮೆಮನ್ ಅಜ್ಮಲ್ ಕಸಬ್‌ನ ಪರ ವಾದಿಸಿದ್ದರು ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...