Homeಫ್ಯಾಕ್ಟ್‌ಚೆಕ್Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ...

Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ‘ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ’ ನಡೆಸಿದೆ ಎಂಬ ಸುದ್ದಿ ನಿನ್ನೆ (ಮಾ.18) ಸಂಜೆಯಿಂದ ಹಬ್ಬಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಕನ್ನಡದ ಅನೇಕ ಮುಖ್ಯವಾಹಿನಿ ಮಾಧ್ಯಮಗಳು, ಬಿಜೆಪಿ ಪಕ್ಷ, ಅದರ ನಾಯಕರು ಮತ್ತು ಕೆಲ ಪತ್ರಕರ್ತರು ವಿಡಿಯೋ ಹಂಚಿಕೊಂಡು ಇದೇ ಪ್ರತಿಪಾದನೆಯನ್ನು ಮಾಡಿದ್ದಾರೆ.

ಕನ್ನಡ ಮಾಧ್ಯಮಗಳಾದ ಸುವರ್ಣ ನ್ಯೂಸ್, ವಿಸ್ತಾರ ನ್ಯೂಸ್, ಕನ್ನಡ ಪ್ರಭ, ಕನ್ನಡ ದುನಿಯಾ ಹಾಗೂ ಇತರ ವೆಬ್‌ಸೈಟ್‌ಗಳಲ್ಲಿ ಈ ಸುದ್ದಿ ಪ್ರಕಟಗೊಂಡಿದೆ.

‘ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಅಂತಾ ಯುವಕನಿಗೆ ಥಳಿತ: ಎಫ್‌ಐಅರ್‌ಗೆ ಪೊಲೀಸರು ಹಿಂದೇಟು? ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಸುವರ್ಣ ನ್ಯೂಸ್‌, “ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಆರೋಪ: ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ಪ್ರಭ, “ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘Assault Case : ಮೊಬೈಲ್‌ ಶಾಪ್‌ನಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್‌; ಯುವಕನ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದ ಪುಂಡರು’ ಎಂಬ ಶೀರ್ಷಿಕೆಯ ಸುದ್ದಿ ಪ್ರಕಟಿಸಿರುವ ವಿಸ್ತಾರ ನ್ಯೂಸ್, “Assault Case : ನಮಾಜ್‌ ಮಾಡುವಾಗ ಭಕ್ತಿಗೀತೆ ಹಾಕ್ತಿಯಾ ಎಂದು ಕಿರಿಕ್‌ ತೆಗೆದ ಕೆಲ ಪುಂಡ ಪೋಕರಿಗಳು ಯುವಕನನ್ನು ಎಳೆದಾಡಿ ಮನಬಂದಂತೆ ಹಲ್ಲೆ ಮಾಡಿದ್ದರು. ಇದೀಗ ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ಬೆಂಗಳೂರು: ಮೊಬೈಲ್ ಅಂಗಡಿ ಮಾಲೀಕನಿಗೆ ಮನಸ್ಸೋ ಇಚ್ಚೆ ಥಳಿಸಿದ ಗೂಂಡಾಗಳು’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ದುನಿಯಾ ವೆಬ್‌ಸೈಟ್‌, ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದಾರೆ. ಮೊಬೈಲ್ ಅಂಗಡಿ ಮಾಲೀನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ’ ಎಂದು ವರದಿ ಮಾಡಿದೆ.


ಸುದ್ದಿ ಲಿಂಕ್ ಇಲ್ಲಿದೆ 

“ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯನವರೇ? ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಡಿಯೋ ಜೊತೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಆಶೋಕ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್‌ನ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌.

ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ಬಿಜೆಪಿ ಕರ್ನಾಟಕ ವಿಡಿಯೋ ಜೊತೆ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

“ಅಝಾನ್ ಸಮಯದಲ್ಲಿ ಜೋರಾಗಿ ಸಂಗೀತ ಹಾಕಿದ್ದ ಅಂಗಡಿಯವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಹಾಗಾದರೆ, ದಿನಕ್ಕೆ 5 ಬಾರಿ ಜೋರಾಗಿ ಆಝಾನ್ ಕೂಗಬಹುದೇ? ಈ ರಂಝಾನ್ ಒಳ್ಳೆಯ ರಂಝಾನ್ ಆಗಲಿ ಎಂದು ನಾನು ಬಯಸುತ್ತೇನೆ. ಸಿದ್ದಣ್ಣ ಲೇಔಟ್ ಬಳಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ” ಎಂದು ಇಂಡಿಯಾ ಟುಡೇಯ ನಿರೂಪಕಿ ನಬೀಲಾ ಜಮಾಲ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಗಮನಿಸಿದ ಬಳಿಕ ನಾನುಗೌರಿ.ಕಾಂ ಪ್ರಕರಣದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಿನಾಂಕ 17 ಮಾರ್ಚ್‌ 2024ರಂದು ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪ್ರತಿ ನಮಗೆ ಲಭ್ಯವಾಗಿದೆ.

ಎಫ್‌ಐಆರ್ ಪ್ರತಿಯಲ್ಲಿ ಮುಖೇಶ್ ಎಂಬವರು ಹಲ್ಲೆ ಘಟನೆ ಸಂಬಂಧ ದೂರು ನೀಡಿದ್ದು, ನಂ.65 ಕೃಷ್ಣ ಟೆಲಿಕಾಂ ಶಾಪ್ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ಬೆಂಗಳೂರು ನಗರ ಇಲ್ಲಿ, ಸಂಜೆ 6 ಗಂಟೆಯಿಂದ 6:40ರ ನಡುವೆ ಘಟನೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಎಫ್‌ಐಆರ್‌ ಪ್ರತಿ

ಎಫ್‌ಐಆರ್‌ನಲ್ಲಿ ಹೇಳಿರುವಂತೆ, ‘ದೂರುದಾರ ಮುಖೇಶ್ ಅವರು ದಿನಾಂಕ 17 ಮಾರ್ಚ್ 2024ರಂದು ಸಂಜೆ 6:25ಕ್ಕೆ ಜುಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ನಂ.25 ಕೃಷ್ಣ ಟೆಲಿಕಾಂ ಅಂಗಡಿಯಲ್ಲಿರುವಾಗ ಸುಲೇಮಾನ್, ಶಾನವಾಜ್, ರೋಹಿತ್, ಡ್ಯಾನಿಶ್, ತರುಣಾ ಹಾಗೂ ಇತರರು ಸೇರಿಕೊಂಡು ಅಂಗಡಿಯ ಬಳಿ ಬಂದು “ಜೋರಾಗಿ ಸ್ಪೀಕರ್ ಏಕೆ ಹಾಕಿದ್ದೀಯ? ನಮಗೆ ತೊಂದರೆಯಾಗುತ್ತಿದೆ” ಎಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಏಕಾಏಕಿ ಶಾನವಾಜ್ ಕೈಯಿಂದ ಮುಖೇಶ್ ಅವರ ಮುಖಕ್ಕೆ ಗುದ್ದಿದ್ದಾನೆರ. ನಂತರ ಸುಲೇಮಾನ್ ಕೈಗಳಿಂದ ಹೊಡೆಯಲು ಶುರು ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ನಂತರ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆ ಎಳೆದು ಕೆಳಗೆ ಬೀಳಿಸಿ ರಕ್ತಸ್ರಾವ ಆಗುವ ರೀತಿಯಲ್ಲಿ ಹೊಡೆದಿದ್ದಾರೆ’ ಎಂದು ತಿಳಿಸಲಾಗಿದೆ.

ಎಫ್‌ಐಆರ್‌ ಪ್ರತಿ

ಮುಖೇಶ್ ಅವರು ಕೈ ಬರಹದಲ್ಲಿ ಕೊಟ್ಟಿರುವ ದೂರಿನಲ್ಲೂ “ಏಕೆ ಸೌಂಡ್ ಜೋರಾಗಿ ಹಾಕಿರುವೆ ನಮಗೆ ತೊಂದೆಯಾಗುತ್ತದೆ ಎಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಸ್ಪಷ್ಟವಾಗಿ ಬರೆದಿದ್ದಾರೆ.

ಹಲ್ಲೆಗೊಳಗಾದ ಮುಖೇಶ್ ಅವರು ನೀಡಿರುವ ಕೈ ಬರಹದ ದೂರಿನ ಪ್ರತಿ

ನಮಗೆ ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಿಲ್ಲ. ಎಫ್‌ಐಆರ್ ಪ್ರತಿಯಲ್ಲಿ ಆರು ಆರೋಪಿಗಳನ್ನು ಉಲ್ಲೇಖಿಸಲಾಗಿದ್ದು, ಈ ಪೈಕಿ ಐವರ ಹೆಸರಿದೆ. ಅದರಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ.

ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ನೀಡಿರುವ ದೂರಿನ ಪ್ರತಿ ಆಧಾರಲ್ಲಿ ಹೇಳುವುದಾದರೆ ಇದು ಲೌಡ್ ಸ್ಪೀಕರ್ ಇಟ್ಟಿರುವುದಕ್ಕಾಗಿ ನಡೆದ ಹಲ್ಲೆಯೇ ಹೊರತು, ನಮಾಝ್ ವೇಳೆ ಹನುಮಾನ್ ಚಾಲೀಸಾ ಇಟ್ಟಿದ್ದಕ್ಕೆ ಹಿಂದೂ ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ.

ಇದನ್ನೂ ಓದಿ : Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...