Homeಫ್ಯಾಕ್ಟ್‌ಚೆಕ್Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ...

Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ‘ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ’ ನಡೆಸಿದೆ ಎಂಬ ಸುದ್ದಿ ನಿನ್ನೆ (ಮಾ.18) ಸಂಜೆಯಿಂದ ಹಬ್ಬಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಕನ್ನಡದ ಅನೇಕ ಮುಖ್ಯವಾಹಿನಿ ಮಾಧ್ಯಮಗಳು, ಬಿಜೆಪಿ ಪಕ್ಷ, ಅದರ ನಾಯಕರು ಮತ್ತು ಕೆಲ ಪತ್ರಕರ್ತರು ವಿಡಿಯೋ ಹಂಚಿಕೊಂಡು ಇದೇ ಪ್ರತಿಪಾದನೆಯನ್ನು ಮಾಡಿದ್ದಾರೆ.

ಕನ್ನಡ ಮಾಧ್ಯಮಗಳಾದ ಸುವರ್ಣ ನ್ಯೂಸ್, ವಿಸ್ತಾರ ನ್ಯೂಸ್, ಕನ್ನಡ ಪ್ರಭ, ಕನ್ನಡ ದುನಿಯಾ ಹಾಗೂ ಇತರ ವೆಬ್‌ಸೈಟ್‌ಗಳಲ್ಲಿ ಈ ಸುದ್ದಿ ಪ್ರಕಟಗೊಂಡಿದೆ.

‘ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಅಂತಾ ಯುವಕನಿಗೆ ಥಳಿತ: ಎಫ್‌ಐಅರ್‌ಗೆ ಪೊಲೀಸರು ಹಿಂದೇಟು? ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಸುವರ್ಣ ನ್ಯೂಸ್‌, “ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಆರೋಪ: ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ಪ್ರಭ, “ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘Assault Case : ಮೊಬೈಲ್‌ ಶಾಪ್‌ನಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್‌; ಯುವಕನ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದ ಪುಂಡರು’ ಎಂಬ ಶೀರ್ಷಿಕೆಯ ಸುದ್ದಿ ಪ್ರಕಟಿಸಿರುವ ವಿಸ್ತಾರ ನ್ಯೂಸ್, “Assault Case : ನಮಾಜ್‌ ಮಾಡುವಾಗ ಭಕ್ತಿಗೀತೆ ಹಾಕ್ತಿಯಾ ಎಂದು ಕಿರಿಕ್‌ ತೆಗೆದ ಕೆಲ ಪುಂಡ ಪೋಕರಿಗಳು ಯುವಕನನ್ನು ಎಳೆದಾಡಿ ಮನಬಂದಂತೆ ಹಲ್ಲೆ ಮಾಡಿದ್ದರು. ಇದೀಗ ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ಬೆಂಗಳೂರು: ಮೊಬೈಲ್ ಅಂಗಡಿ ಮಾಲೀಕನಿಗೆ ಮನಸ್ಸೋ ಇಚ್ಚೆ ಥಳಿಸಿದ ಗೂಂಡಾಗಳು’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ದುನಿಯಾ ವೆಬ್‌ಸೈಟ್‌, ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದಾರೆ. ಮೊಬೈಲ್ ಅಂಗಡಿ ಮಾಲೀನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ’ ಎಂದು ವರದಿ ಮಾಡಿದೆ.


ಸುದ್ದಿ ಲಿಂಕ್ ಇಲ್ಲಿದೆ 

“ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯನವರೇ? ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಡಿಯೋ ಜೊತೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಆಶೋಕ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್‌ನ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌.

ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ಬಿಜೆಪಿ ಕರ್ನಾಟಕ ವಿಡಿಯೋ ಜೊತೆ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

“ಅಝಾನ್ ಸಮಯದಲ್ಲಿ ಜೋರಾಗಿ ಸಂಗೀತ ಹಾಕಿದ್ದ ಅಂಗಡಿಯವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಹಾಗಾದರೆ, ದಿನಕ್ಕೆ 5 ಬಾರಿ ಜೋರಾಗಿ ಆಝಾನ್ ಕೂಗಬಹುದೇ? ಈ ರಂಝಾನ್ ಒಳ್ಳೆಯ ರಂಝಾನ್ ಆಗಲಿ ಎಂದು ನಾನು ಬಯಸುತ್ತೇನೆ. ಸಿದ್ದಣ್ಣ ಲೇಔಟ್ ಬಳಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ” ಎಂದು ಇಂಡಿಯಾ ಟುಡೇಯ ನಿರೂಪಕಿ ನಬೀಲಾ ಜಮಾಲ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಗಮನಿಸಿದ ಬಳಿಕ ನಾನುಗೌರಿ.ಕಾಂ ಪ್ರಕರಣದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಿನಾಂಕ 17 ಮಾರ್ಚ್‌ 2024ರಂದು ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪ್ರತಿ ನಮಗೆ ಲಭ್ಯವಾಗಿದೆ.

ಎಫ್‌ಐಆರ್ ಪ್ರತಿಯಲ್ಲಿ ಮುಖೇಶ್ ಎಂಬವರು ಹಲ್ಲೆ ಘಟನೆ ಸಂಬಂಧ ದೂರು ನೀಡಿದ್ದು, ನಂ.65 ಕೃಷ್ಣ ಟೆಲಿಕಾಂ ಶಾಪ್ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ಬೆಂಗಳೂರು ನಗರ ಇಲ್ಲಿ, ಸಂಜೆ 6 ಗಂಟೆಯಿಂದ 6:40ರ ನಡುವೆ ಘಟನೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಎಫ್‌ಐಆರ್‌ ಪ್ರತಿ

ಎಫ್‌ಐಆರ್‌ನಲ್ಲಿ ಹೇಳಿರುವಂತೆ, ‘ದೂರುದಾರ ಮುಖೇಶ್ ಅವರು ದಿನಾಂಕ 17 ಮಾರ್ಚ್ 2024ರಂದು ಸಂಜೆ 6:25ಕ್ಕೆ ಜುಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ನಂ.25 ಕೃಷ್ಣ ಟೆಲಿಕಾಂ ಅಂಗಡಿಯಲ್ಲಿರುವಾಗ ಸುಲೇಮಾನ್, ಶಾನವಾಜ್, ರೋಹಿತ್, ಡ್ಯಾನಿಶ್, ತರುಣಾ ಹಾಗೂ ಇತರರು ಸೇರಿಕೊಂಡು ಅಂಗಡಿಯ ಬಳಿ ಬಂದು “ಜೋರಾಗಿ ಸ್ಪೀಕರ್ ಏಕೆ ಹಾಕಿದ್ದೀಯ? ನಮಗೆ ತೊಂದರೆಯಾಗುತ್ತಿದೆ” ಎಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಏಕಾಏಕಿ ಶಾನವಾಜ್ ಕೈಯಿಂದ ಮುಖೇಶ್ ಅವರ ಮುಖಕ್ಕೆ ಗುದ್ದಿದ್ದಾನೆರ. ನಂತರ ಸುಲೇಮಾನ್ ಕೈಗಳಿಂದ ಹೊಡೆಯಲು ಶುರು ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ನಂತರ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆ ಎಳೆದು ಕೆಳಗೆ ಬೀಳಿಸಿ ರಕ್ತಸ್ರಾವ ಆಗುವ ರೀತಿಯಲ್ಲಿ ಹೊಡೆದಿದ್ದಾರೆ’ ಎಂದು ತಿಳಿಸಲಾಗಿದೆ.

ಎಫ್‌ಐಆರ್‌ ಪ್ರತಿ

ಮುಖೇಶ್ ಅವರು ಕೈ ಬರಹದಲ್ಲಿ ಕೊಟ್ಟಿರುವ ದೂರಿನಲ್ಲೂ “ಏಕೆ ಸೌಂಡ್ ಜೋರಾಗಿ ಹಾಕಿರುವೆ ನಮಗೆ ತೊಂದೆಯಾಗುತ್ತದೆ ಎಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಸ್ಪಷ್ಟವಾಗಿ ಬರೆದಿದ್ದಾರೆ.

ಹಲ್ಲೆಗೊಳಗಾದ ಮುಖೇಶ್ ಅವರು ನೀಡಿರುವ ಕೈ ಬರಹದ ದೂರಿನ ಪ್ರತಿ

ನಮಗೆ ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಿಲ್ಲ. ಎಫ್‌ಐಆರ್ ಪ್ರತಿಯಲ್ಲಿ ಆರು ಆರೋಪಿಗಳನ್ನು ಉಲ್ಲೇಖಿಸಲಾಗಿದ್ದು, ಈ ಪೈಕಿ ಐವರ ಹೆಸರಿದೆ. ಅದರಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ.

ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ನೀಡಿರುವ ದೂರಿನ ಪ್ರತಿ ಆಧಾರಲ್ಲಿ ಹೇಳುವುದಾದರೆ ಇದು ಲೌಡ್ ಸ್ಪೀಕರ್ ಇಟ್ಟಿರುವುದಕ್ಕಾಗಿ ನಡೆದ ಹಲ್ಲೆಯೇ ಹೊರತು, ನಮಾಝ್ ವೇಳೆ ಹನುಮಾನ್ ಚಾಲೀಸಾ ಇಟ್ಟಿದ್ದಕ್ಕೆ ಹಿಂದೂ ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ.

ಇದನ್ನೂ ಓದಿ : Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...