Homeಫ್ಯಾಕ್ಟ್‌ಚೆಕ್Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ...

Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ‘ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ’ ನಡೆಸಿದೆ ಎಂಬ ಸುದ್ದಿ ನಿನ್ನೆ (ಮಾ.18) ಸಂಜೆಯಿಂದ ಹಬ್ಬಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಕನ್ನಡದ ಅನೇಕ ಮುಖ್ಯವಾಹಿನಿ ಮಾಧ್ಯಮಗಳು, ಬಿಜೆಪಿ ಪಕ್ಷ, ಅದರ ನಾಯಕರು ಮತ್ತು ಕೆಲ ಪತ್ರಕರ್ತರು ವಿಡಿಯೋ ಹಂಚಿಕೊಂಡು ಇದೇ ಪ್ರತಿಪಾದನೆಯನ್ನು ಮಾಡಿದ್ದಾರೆ.

ಕನ್ನಡ ಮಾಧ್ಯಮಗಳಾದ ಸುವರ್ಣ ನ್ಯೂಸ್, ವಿಸ್ತಾರ ನ್ಯೂಸ್, ಕನ್ನಡ ಪ್ರಭ, ಕನ್ನಡ ದುನಿಯಾ ಹಾಗೂ ಇತರ ವೆಬ್‌ಸೈಟ್‌ಗಳಲ್ಲಿ ಈ ಸುದ್ದಿ ಪ್ರಕಟಗೊಂಡಿದೆ.

‘ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಅಂತಾ ಯುವಕನಿಗೆ ಥಳಿತ: ಎಫ್‌ಐಅರ್‌ಗೆ ಪೊಲೀಸರು ಹಿಂದೇಟು? ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಸುವರ್ಣ ನ್ಯೂಸ್‌, “ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಆರೋಪ: ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ಪ್ರಭ, “ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘Assault Case : ಮೊಬೈಲ್‌ ಶಾಪ್‌ನಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್‌; ಯುವಕನ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದ ಪುಂಡರು’ ಎಂಬ ಶೀರ್ಷಿಕೆಯ ಸುದ್ದಿ ಪ್ರಕಟಿಸಿರುವ ವಿಸ್ತಾರ ನ್ಯೂಸ್, “Assault Case : ನಮಾಜ್‌ ಮಾಡುವಾಗ ಭಕ್ತಿಗೀತೆ ಹಾಕ್ತಿಯಾ ಎಂದು ಕಿರಿಕ್‌ ತೆಗೆದ ಕೆಲ ಪುಂಡ ಪೋಕರಿಗಳು ಯುವಕನನ್ನು ಎಳೆದಾಡಿ ಮನಬಂದಂತೆ ಹಲ್ಲೆ ಮಾಡಿದ್ದರು. ಇದೀಗ ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ಬೆಂಗಳೂರು: ಮೊಬೈಲ್ ಅಂಗಡಿ ಮಾಲೀಕನಿಗೆ ಮನಸ್ಸೋ ಇಚ್ಚೆ ಥಳಿಸಿದ ಗೂಂಡಾಗಳು’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ದುನಿಯಾ ವೆಬ್‌ಸೈಟ್‌, ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದಾರೆ. ಮೊಬೈಲ್ ಅಂಗಡಿ ಮಾಲೀನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ’ ಎಂದು ವರದಿ ಮಾಡಿದೆ.


ಸುದ್ದಿ ಲಿಂಕ್ ಇಲ್ಲಿದೆ 

“ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯನವರೇ? ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಡಿಯೋ ಜೊತೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಆಶೋಕ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್‌ನ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌.

ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ಬಿಜೆಪಿ ಕರ್ನಾಟಕ ವಿಡಿಯೋ ಜೊತೆ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

“ಅಝಾನ್ ಸಮಯದಲ್ಲಿ ಜೋರಾಗಿ ಸಂಗೀತ ಹಾಕಿದ್ದ ಅಂಗಡಿಯವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಹಾಗಾದರೆ, ದಿನಕ್ಕೆ 5 ಬಾರಿ ಜೋರಾಗಿ ಆಝಾನ್ ಕೂಗಬಹುದೇ? ಈ ರಂಝಾನ್ ಒಳ್ಳೆಯ ರಂಝಾನ್ ಆಗಲಿ ಎಂದು ನಾನು ಬಯಸುತ್ತೇನೆ. ಸಿದ್ದಣ್ಣ ಲೇಔಟ್ ಬಳಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ” ಎಂದು ಇಂಡಿಯಾ ಟುಡೇಯ ನಿರೂಪಕಿ ನಬೀಲಾ ಜಮಾಲ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಗಮನಿಸಿದ ಬಳಿಕ ನಾನುಗೌರಿ.ಕಾಂ ಪ್ರಕರಣದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಿನಾಂಕ 17 ಮಾರ್ಚ್‌ 2024ರಂದು ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪ್ರತಿ ನಮಗೆ ಲಭ್ಯವಾಗಿದೆ.

ಎಫ್‌ಐಆರ್ ಪ್ರತಿಯಲ್ಲಿ ಮುಖೇಶ್ ಎಂಬವರು ಹಲ್ಲೆ ಘಟನೆ ಸಂಬಂಧ ದೂರು ನೀಡಿದ್ದು, ನಂ.65 ಕೃಷ್ಣ ಟೆಲಿಕಾಂ ಶಾಪ್ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ಬೆಂಗಳೂರು ನಗರ ಇಲ್ಲಿ, ಸಂಜೆ 6 ಗಂಟೆಯಿಂದ 6:40ರ ನಡುವೆ ಘಟನೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಎಫ್‌ಐಆರ್‌ ಪ್ರತಿ

ಎಫ್‌ಐಆರ್‌ನಲ್ಲಿ ಹೇಳಿರುವಂತೆ, ‘ದೂರುದಾರ ಮುಖೇಶ್ ಅವರು ದಿನಾಂಕ 17 ಮಾರ್ಚ್ 2024ರಂದು ಸಂಜೆ 6:25ಕ್ಕೆ ಜುಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ನಂ.25 ಕೃಷ್ಣ ಟೆಲಿಕಾಂ ಅಂಗಡಿಯಲ್ಲಿರುವಾಗ ಸುಲೇಮಾನ್, ಶಾನವಾಜ್, ರೋಹಿತ್, ಡ್ಯಾನಿಶ್, ತರುಣಾ ಹಾಗೂ ಇತರರು ಸೇರಿಕೊಂಡು ಅಂಗಡಿಯ ಬಳಿ ಬಂದು “ಜೋರಾಗಿ ಸ್ಪೀಕರ್ ಏಕೆ ಹಾಕಿದ್ದೀಯ? ನಮಗೆ ತೊಂದರೆಯಾಗುತ್ತಿದೆ” ಎಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಏಕಾಏಕಿ ಶಾನವಾಜ್ ಕೈಯಿಂದ ಮುಖೇಶ್ ಅವರ ಮುಖಕ್ಕೆ ಗುದ್ದಿದ್ದಾನೆರ. ನಂತರ ಸುಲೇಮಾನ್ ಕೈಗಳಿಂದ ಹೊಡೆಯಲು ಶುರು ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ನಂತರ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆ ಎಳೆದು ಕೆಳಗೆ ಬೀಳಿಸಿ ರಕ್ತಸ್ರಾವ ಆಗುವ ರೀತಿಯಲ್ಲಿ ಹೊಡೆದಿದ್ದಾರೆ’ ಎಂದು ತಿಳಿಸಲಾಗಿದೆ.

ಎಫ್‌ಐಆರ್‌ ಪ್ರತಿ

ಮುಖೇಶ್ ಅವರು ಕೈ ಬರಹದಲ್ಲಿ ಕೊಟ್ಟಿರುವ ದೂರಿನಲ್ಲೂ “ಏಕೆ ಸೌಂಡ್ ಜೋರಾಗಿ ಹಾಕಿರುವೆ ನಮಗೆ ತೊಂದೆಯಾಗುತ್ತದೆ ಎಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಸ್ಪಷ್ಟವಾಗಿ ಬರೆದಿದ್ದಾರೆ.

ಹಲ್ಲೆಗೊಳಗಾದ ಮುಖೇಶ್ ಅವರು ನೀಡಿರುವ ಕೈ ಬರಹದ ದೂರಿನ ಪ್ರತಿ

ನಮಗೆ ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಿಲ್ಲ. ಎಫ್‌ಐಆರ್ ಪ್ರತಿಯಲ್ಲಿ ಆರು ಆರೋಪಿಗಳನ್ನು ಉಲ್ಲೇಖಿಸಲಾಗಿದ್ದು, ಈ ಪೈಕಿ ಐವರ ಹೆಸರಿದೆ. ಅದರಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ.

ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ನೀಡಿರುವ ದೂರಿನ ಪ್ರತಿ ಆಧಾರಲ್ಲಿ ಹೇಳುವುದಾದರೆ ಇದು ಲೌಡ್ ಸ್ಪೀಕರ್ ಇಟ್ಟಿರುವುದಕ್ಕಾಗಿ ನಡೆದ ಹಲ್ಲೆಯೇ ಹೊರತು, ನಮಾಝ್ ವೇಳೆ ಹನುಮಾನ್ ಚಾಲೀಸಾ ಇಟ್ಟಿದ್ದಕ್ಕೆ ಹಿಂದೂ ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ.

ಇದನ್ನೂ ಓದಿ : Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...