Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ 'ಹಿಂದೂ ವಿರೋಧಿ' ಹೇಳಿಕೆ ನೀಡಿದ್ದಾರೆ ಎಂಬುವುದು ಸುಳ್ಳು

FACT CHECK : ರಾಹುಲ್ ಗಾಂಧಿ ‘ಹಿಂದೂ ವಿರೋಧಿ’ ಹೇಳಿಕೆ ನೀಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಜುಲೈ 1ರಂದು ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದೂಗಳನ್ನು ‘ಹಿಂಸಾತ್ಮಕ’ ಎಂದಿದ್ದಾರೆ ಎಂದು ಆರೋಪಿಸಲಾಗಿದೆ.

ರಾಹುಲ್ ಗಾಂಧಿಯ ಭಾಷಣದ ತುಣುಕೊಂದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ” ತನ್ನನ್ನು ತಾನು ಹಿಂದೂ ಎಂದು ಕರೆದುಕೊಳ್ಳುವ ಪ್ರತಿಯೊಬ್ಬರನ್ನು ‘ಹಿಂಸಾತ್ಮಕ’ ಎಂದು ಕರೆಯುವ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್‌ಗೆ ಹಿಂದೂಗಳ ಮೇಲಿರುವ ದ್ವೇಷ ಮತ್ತು ತಿರಸ್ಕಾರ ಭಾವನೆಯನ್ನು ತೋರಿಸಿದ್ದಾರೆ. ಇದು ಅವರ ಇಂಡಿಯಾ ಒಕ್ಕೂಟದ ಪಾಲುದಾರರ ಹಿಂದೂ ದ್ವೇಷವನ್ನೂ ತೋರಿಸಿದೆ. “ಮೊಹಬ್ಬತ್ ಕಿ ದುಕಾನ್” ಎಂದು ಹೇಳಿಕೊಳ್ಳುವವರ ಬೂಟಾಟಿಕೆ ಬಹಿರಂಗವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಆರೋಗ್ಯ ಸಚಿವರ ಜೆಪಿ ನಡ್ಡಾ “ರಾಹುಲ್ ಗಾಂಧಿ ಅವರು ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಕ್ಕಾಗಿ ತಕ್ಷಣವೇ ಎಲ್ಲಾ ಹಿಂದೂಗಳ ಕ್ಷಮೆಯಾಚಿಸಬೇಕು. ಹಿಂದೂಗಳು ಭಯೋತ್ಪಾದಕರು ಎಂದು ವಿದೇಶಿ ರಾಜತಾಂತ್ರಿಕರಿಗೆ ಹೇಳುತ್ತಿದ್ದವರು ಇವರೇ. ಹಿಂದೂಗಳ ಮೇಲಿನ ಈ ಆಂತರಿಕ ದ್ವೇಷ ನಿಲ್ಲಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ರಾಹುಲ್ ಗಾಂಧಿ ಹೇಳಿಕೆಯ ಅರ್ಧ ವಿಡಿಯೋವನ್ನು ಹಂಚಿಕೊಂಡು ‘ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಾರೆ ಎಂಬಂತೆ’ ಬಿಂಬಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಚಿವರಾದ ನಿರ್ಮಲಾ ಸೀತಾರಾಮನ್, ಜೆ.ಪಿ ನಡ್ಡಾ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿರುವ ಆರೋಪಗಳ ಕುರಿತು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಮೂವರೂ ಕೂಡ ರಾಹುಲ್ ಗಾಂಧಿಯ ಭಾಷಣದ ಅಪೂರ್ಣ, ಎಡಿಟೆಡ್ ವಿಡಿಯೋಗಳನ್ನು ಹಂಚಿಕೊಂಡು ಸುಳ್ಳು ಆರೋಪ ಮಾಡಿರುವುದು ಗೊತ್ತಾಗಿದೆ.

ರಾಹುಲ್ ಗಾಂಧಿಯ ಭಾಷಣದ ಸಂಪೂರ್ಣ ವಿಡಿಯೋ ಗಮನಿಸಿದರೆ ಅದರಲ್ಲಿ ಅವರು “ಈ ದೇಶ ಅಹಿಂಸೆಯ ದೇಶ, ಈ ದೇಶ ಹೆದರಿಸುವ ದೇಶ ಅಲ್ಲ. ನಮ್ಮ ಎಲ್ಲಾ ಮಹಾಪುರುಷರು ಅಹಿಂಸೆಯ ಕುರಿತು ಮಾತನಾಡಿದ್ದಾರೆ. ಭಯ ದೂರವಾಗಿಸುವ ಬಗ್ಗೆ ಮಾತನಾಡಿದ್ದಾರೆ. ಹೆದರಬೇಡಿ, ಹೆದರಿಸಬೇಡಿ, ಭಗವಾನ್ ಶಿವ ಹೇಳುವುದೇನೆಂದರೆ ಹೆದರಬೇಡಿ, ಹೆದರಿಸಬೇಡಿ. ಅದಕ್ಕಾಗಿಯೇ ನಾವು ಅಭಯ ಮುದ್ರೆಯನ್ನು ತೋರಿಸುತ್ತೇವೆ. ಅಹಿಂಸೆಯ ಮಾತನಾಡುತ್ತಾರೆ, ತ್ರಿಶೂಲವನ್ನು ಭೂಮಿಯಲ್ಲಿ ಚುಚ್ಚಿ ಹೇಳುತ್ತಾರೆ. ಆದರೆ ಯಾವ ಜನರು ತಮ್ಮನ್ನು ತಾವು ಹಿಂದುಗಳು ಎಂದು ಕರೆದುಕೊಳ್ಳುತ್ತಿದ್ದಾರೆ ಅವರು 24 ಗಂಟೆ ಹಿಂಸೆ, ಹಿಂಸೆ, ಹಿಂಸೆ.. ದ್ವೇಷ, ದ್ವೇಷ, ದ್ವೇಷ, ಸುಳ್ಳು, ಸುಳ್ಳು.. ಸುಳ್ಳು . ಅಸಲಿಗೆ ನೀವು ಹಿಂದುಗಳೇ ಅಲ್ಲ” ಎಂದು ಹೇಳಿರುವುದು ಇದೆ.

ಮುಂದುವರೆದು “ಹಿಂದು ಧರ್ಮದಲ್ಲಿ ಸರಳವಾಗಿ ಬರೆದಿದ್ದಾರೆ. ಸತ್ಯದ ಪರವಾಗಿ ನಿಲ್ಲಬೇಕು, ಸತ್ಯಕ್ಕೆ ವಿಮುಖವಾಗಿರಬಾರದು, ಸತ್ಯಕ್ಕೆ ಹೆದರಿಕೊಳ್ಳಬಾರದು. ಅಹಿಂಸೆ ನಮ್ಮ ಪ್ರತೀಕವಾಗಿದೆ” ಎಂದು ಅಭಯ ಮುದ್ರೆಯನ್ನು ಬಿಜೆಪಿ ನಾಯಕರಿಗೆ ತೋರಿಸಿದ್ದಾರೆ.

ವಿಡಿಯೋ ಲಿಂಕ್ ಇಲ್ಲಿದೆ

ಈ ವೇಳೆ ಎದ್ದು ನಿಂತ ಪ್ರಧಾನಿ ನರೇಂದ್ರ ಮೋದಿಯವರು “ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಚಾರವಾಗಿದೆ” ಎಂದು ರಾಹುಲ್ ಗಾಂಧಿಯವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.

ವಿಡಿಯೋ ಲಿಂಕ್ ಇಲ್ಲಿದೆ

ಅದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿಯವರು “ಇಲ್ಲ, ಇಲ್ಲ..ನಾವು ಬಿಜೆಪಿ, ಆರ್‌ಆರ್‌ಎಸ್‌ ಬಗ್ಗೆ ಹೇಳಿದ್ದು. ನರೇಂದ್ರ ಮೋದಿ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ, ಕೇವಲ ಬಿಜೆಪಿ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ ಮತ್ತು ಆರ್‌ಎಸ್‌ಎಸ್‌ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ” ಎಂದಿದ್ದಾರೆ.

ನಾವು ನಡೆಸಿದ ಸತ್ಯಾಸತ್ಯತೆ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಮಾತನಾಡಿದ್ದಾರೆಯೇ ಹೊರತು, ಹಿಂದೂ ಸಮಾಜವನ್ನಲ್ಲ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...