Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ 'ಹಿಂದೂ ವಿರೋಧಿ' ಹೇಳಿಕೆ ನೀಡಿದ್ದಾರೆ ಎಂಬುವುದು ಸುಳ್ಳು

FACT CHECK : ರಾಹುಲ್ ಗಾಂಧಿ ‘ಹಿಂದೂ ವಿರೋಧಿ’ ಹೇಳಿಕೆ ನೀಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಜುಲೈ 1ರಂದು ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದೂಗಳನ್ನು ‘ಹಿಂಸಾತ್ಮಕ’ ಎಂದಿದ್ದಾರೆ ಎಂದು ಆರೋಪಿಸಲಾಗಿದೆ.

ರಾಹುಲ್ ಗಾಂಧಿಯ ಭಾಷಣದ ತುಣುಕೊಂದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ” ತನ್ನನ್ನು ತಾನು ಹಿಂದೂ ಎಂದು ಕರೆದುಕೊಳ್ಳುವ ಪ್ರತಿಯೊಬ್ಬರನ್ನು ‘ಹಿಂಸಾತ್ಮಕ’ ಎಂದು ಕರೆಯುವ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್‌ಗೆ ಹಿಂದೂಗಳ ಮೇಲಿರುವ ದ್ವೇಷ ಮತ್ತು ತಿರಸ್ಕಾರ ಭಾವನೆಯನ್ನು ತೋರಿಸಿದ್ದಾರೆ. ಇದು ಅವರ ಇಂಡಿಯಾ ಒಕ್ಕೂಟದ ಪಾಲುದಾರರ ಹಿಂದೂ ದ್ವೇಷವನ್ನೂ ತೋರಿಸಿದೆ. “ಮೊಹಬ್ಬತ್ ಕಿ ದುಕಾನ್” ಎಂದು ಹೇಳಿಕೊಳ್ಳುವವರ ಬೂಟಾಟಿಕೆ ಬಹಿರಂಗವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಆರೋಗ್ಯ ಸಚಿವರ ಜೆಪಿ ನಡ್ಡಾ “ರಾಹುಲ್ ಗಾಂಧಿ ಅವರು ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಕ್ಕಾಗಿ ತಕ್ಷಣವೇ ಎಲ್ಲಾ ಹಿಂದೂಗಳ ಕ್ಷಮೆಯಾಚಿಸಬೇಕು. ಹಿಂದೂಗಳು ಭಯೋತ್ಪಾದಕರು ಎಂದು ವಿದೇಶಿ ರಾಜತಾಂತ್ರಿಕರಿಗೆ ಹೇಳುತ್ತಿದ್ದವರು ಇವರೇ. ಹಿಂದೂಗಳ ಮೇಲಿನ ಈ ಆಂತರಿಕ ದ್ವೇಷ ನಿಲ್ಲಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ರಾಹುಲ್ ಗಾಂಧಿ ಹೇಳಿಕೆಯ ಅರ್ಧ ವಿಡಿಯೋವನ್ನು ಹಂಚಿಕೊಂಡು ‘ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಾರೆ ಎಂಬಂತೆ’ ಬಿಂಬಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಚಿವರಾದ ನಿರ್ಮಲಾ ಸೀತಾರಾಮನ್, ಜೆ.ಪಿ ನಡ್ಡಾ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿರುವ ಆರೋಪಗಳ ಕುರಿತು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಮೂವರೂ ಕೂಡ ರಾಹುಲ್ ಗಾಂಧಿಯ ಭಾಷಣದ ಅಪೂರ್ಣ, ಎಡಿಟೆಡ್ ವಿಡಿಯೋಗಳನ್ನು ಹಂಚಿಕೊಂಡು ಸುಳ್ಳು ಆರೋಪ ಮಾಡಿರುವುದು ಗೊತ್ತಾಗಿದೆ.

ರಾಹುಲ್ ಗಾಂಧಿಯ ಭಾಷಣದ ಸಂಪೂರ್ಣ ವಿಡಿಯೋ ಗಮನಿಸಿದರೆ ಅದರಲ್ಲಿ ಅವರು “ಈ ದೇಶ ಅಹಿಂಸೆಯ ದೇಶ, ಈ ದೇಶ ಹೆದರಿಸುವ ದೇಶ ಅಲ್ಲ. ನಮ್ಮ ಎಲ್ಲಾ ಮಹಾಪುರುಷರು ಅಹಿಂಸೆಯ ಕುರಿತು ಮಾತನಾಡಿದ್ದಾರೆ. ಭಯ ದೂರವಾಗಿಸುವ ಬಗ್ಗೆ ಮಾತನಾಡಿದ್ದಾರೆ. ಹೆದರಬೇಡಿ, ಹೆದರಿಸಬೇಡಿ, ಭಗವಾನ್ ಶಿವ ಹೇಳುವುದೇನೆಂದರೆ ಹೆದರಬೇಡಿ, ಹೆದರಿಸಬೇಡಿ. ಅದಕ್ಕಾಗಿಯೇ ನಾವು ಅಭಯ ಮುದ್ರೆಯನ್ನು ತೋರಿಸುತ್ತೇವೆ. ಅಹಿಂಸೆಯ ಮಾತನಾಡುತ್ತಾರೆ, ತ್ರಿಶೂಲವನ್ನು ಭೂಮಿಯಲ್ಲಿ ಚುಚ್ಚಿ ಹೇಳುತ್ತಾರೆ. ಆದರೆ ಯಾವ ಜನರು ತಮ್ಮನ್ನು ತಾವು ಹಿಂದುಗಳು ಎಂದು ಕರೆದುಕೊಳ್ಳುತ್ತಿದ್ದಾರೆ ಅವರು 24 ಗಂಟೆ ಹಿಂಸೆ, ಹಿಂಸೆ, ಹಿಂಸೆ.. ದ್ವೇಷ, ದ್ವೇಷ, ದ್ವೇಷ, ಸುಳ್ಳು, ಸುಳ್ಳು.. ಸುಳ್ಳು . ಅಸಲಿಗೆ ನೀವು ಹಿಂದುಗಳೇ ಅಲ್ಲ” ಎಂದು ಹೇಳಿರುವುದು ಇದೆ.

ಮುಂದುವರೆದು “ಹಿಂದು ಧರ್ಮದಲ್ಲಿ ಸರಳವಾಗಿ ಬರೆದಿದ್ದಾರೆ. ಸತ್ಯದ ಪರವಾಗಿ ನಿಲ್ಲಬೇಕು, ಸತ್ಯಕ್ಕೆ ವಿಮುಖವಾಗಿರಬಾರದು, ಸತ್ಯಕ್ಕೆ ಹೆದರಿಕೊಳ್ಳಬಾರದು. ಅಹಿಂಸೆ ನಮ್ಮ ಪ್ರತೀಕವಾಗಿದೆ” ಎಂದು ಅಭಯ ಮುದ್ರೆಯನ್ನು ಬಿಜೆಪಿ ನಾಯಕರಿಗೆ ತೋರಿಸಿದ್ದಾರೆ.

ವಿಡಿಯೋ ಲಿಂಕ್ ಇಲ್ಲಿದೆ

ಈ ವೇಳೆ ಎದ್ದು ನಿಂತ ಪ್ರಧಾನಿ ನರೇಂದ್ರ ಮೋದಿಯವರು “ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಚಾರವಾಗಿದೆ” ಎಂದು ರಾಹುಲ್ ಗಾಂಧಿಯವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.

ವಿಡಿಯೋ ಲಿಂಕ್ ಇಲ್ಲಿದೆ

ಅದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿಯವರು “ಇಲ್ಲ, ಇಲ್ಲ..ನಾವು ಬಿಜೆಪಿ, ಆರ್‌ಆರ್‌ಎಸ್‌ ಬಗ್ಗೆ ಹೇಳಿದ್ದು. ನರೇಂದ್ರ ಮೋದಿ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ, ಕೇವಲ ಬಿಜೆಪಿ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ ಮತ್ತು ಆರ್‌ಎಸ್‌ಎಸ್‌ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ” ಎಂದಿದ್ದಾರೆ.

ನಾವು ನಡೆಸಿದ ಸತ್ಯಾಸತ್ಯತೆ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಮಾತನಾಡಿದ್ದಾರೆಯೇ ಹೊರತು, ಹಿಂದೂ ಸಮಾಜವನ್ನಲ್ಲ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...