Homeಫ್ಯಾಕ್ಟ್‌ಚೆಕ್FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

“ಮಾಸಿಕ 8,500 ರೂಪಾಯಿ ಮತ್ತು ವಾರ್ಷಿಕವಾಗಿ 100,000 ರೂ. ಸಹಾಯಧನ ನೀಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಯ ಪೂರ್ವ ಭರವಸೆ ನೀಡಿದ್ದರು. ಈ ವಿಚಾರಕ್ಕೆ ಅವರು ಜನರಲ್ಲಿ ಕ್ಷಮೆ ಯಾಚಿಸಿದ್ದಾರೆ. ಈ ಸುಳ್ಳುಗಳ ಮೂಲಕ ಅವರು (ಕಾಂಗ್ರೆಸ್‌) ಸಾರ್ವತ್ರಿಕ ಚುನಾವಣೆಯಲ್ಲಿ 99 ಸೀಟ್ ಪಡೆದಿದೆ. ಇದು ಸ್ಪಷ್ಟವಾಗಿ ಜನರನ್ನು ದಾರಿತಪ್ಪಿಸುವ ಮೂಲಕ ನಡೆಸಿದ ಚುನಾವಣಾ ವಂಚನೆಯಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಪೋಸ್ಟ್‌ ಹಾಕಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಹೇಳಿದಂತೆ ರಾಹುಲ್ ಗಾಂಧಿ ಚುನಾವಣಾ ಪೂರ್ವ ಭಾಷಣಗಳಲ್ಲಿ ಧನ ಸಹಾಯದ ಭರವಸೆಗಳನ್ನು ನೀಡಿರುವುದು ಹೌದು. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೂ ಅದನ್ನು ಉಲ್ಲೇಖಿಸಿತ್ತು. ಆದರೆ, ಈ ವಿಚಾರಕ್ಕೆ ರಾಹುಲ್ ಗಾಂಧಿ ಕ್ಷಮೆ ಯಾಚಿಸಿದ್ದಾರಾ? ಎಂಬುವುದನ್ನು ನಾವು ಪರಿಶೀಲಿಸಿದ್ದೇವೆ.

ಜೂನ್‌ 4,2024ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ರಾಹುಲ್ ಗಾಂಧಿ ಚುನಾವಣಾ ಭರವಸೆಗಳಿಗಾಗಿ ಜನರ ಕ್ಷಮೆ ಯಾಚಿಸಿರುವುದು ಎಲ್ಲೂ ವರದಿಯಾಗಿಲ್ಲ. ತನ್ನ ಸಾಮಾಜಿಕ ಜಾಲತಾಣದ ಖಾತೆಗಳಲ್ಲೂ ರಾಹುಲ್ ಗಾಂಧಿ ಕ್ಷಮೆ ಯಾಚಿಸಿ ಪೋಸ್ಟ್ ಹಾಕಿಲ್ಲ.

ಇತ್ತೀಚೆಗೆ, ಮಹಿಳೆಯರು ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ ಎಂದು ಸುಳ್ಳು ಸುದ್ದಿಯೊಂದು ಹಬ್ಬಿತ್ತು. ಅದರಂತೆ ಇದೂ ಕೂಡ ಸುಳ್ಳು ಸುದ್ದಿ ಎಂಬುವುದು ಖಚಿತವಾಗಿದೆ.

ಚುನಾವಣೆಯ ಫಲಿತಾಂಶದ ಬಳಿಕ ಲಕ್ನೋದ ಕಾಂಗ್ರೆಸ್‌ ಕಚೇರಿ ಮುಂದೆ ಗ್ಯಾರಂಟಿ ಕಾರ್ಡ್‌ ಹಿಡಿದು ಕೆಲ ಮಹಿಳೆಯರು ಗುಂಪು ಸೇರಿದ್ದರು. ಮಾಧ್ಯಮದವರು ಕೇಳಿದ್ದಕ್ಕೆ ಕಾಂಗ್ರೆಸ್‌ ಚುನಾವಣಾ ಪೂರ್ವ ಭರವಸೆ ನೀಡಿದ್ದ ಗ್ಯಾರಂಟಿ ಹಣಕ್ಕಾಗಿ ಆಗಮಿಸಿದ್ದೇವೆ ಎಂದಿದ್ದರು.

ಈ ವೇಳೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಮಹ್ರೂಫ್ ಖಾನ್ ” ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದರೆ ಹಣ ನೀಡುವುದಾಗಿ ನಾವು ಭರವಸೆ ನೀಡಿದ್ದೆವು. ಅದನ್ನು ತಪ್ಪಾಗಿ ಅರ್ಥೈಸಿಕೊಂಡ ಕೆಲ ಮಹಿಳೆಯರು ಕಾಂಗ್ರೆಸ್‌ ಕಚೇರಿ ಬಳಿಗೆ ಆಗಮಿಸಿದ್ದಾರೆ. ಅವರಿಗೆ ನಾವು ತಿಳಿ ಹೇಳಿದ್ದೇವೆ ಎಂದಿದ್ದರು.

ಇದನ್ನು ಹೊರತುಪಡಿಸಿದರೆ, ಕಾಂಗ್ರೆಸ್‌ ಚುನಾವಣಾ ಪೂರ್ವ ಭರವಸೆ ನೀಡಿದ್ದ ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯಾಗಲಿ, ಇತರ ಕಾಂಗ್ರೆಸ್ ನಾಯಕರಾಗಲಿ ಕ್ಷಮೆಯಾಚನೆ ಮಾಡಿಲ್ಲ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...