Homeಫ್ಯಾಕ್ಟ್‌ಚೆಕ್Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದ ಹಳೆಯ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಮನಮೋಹನ್ ಸಿಂಗ್ ಅವರು ಭಾರತದ ಪ್ರಧಾನಿಯಾಗಿದ್ದರೂ ಕೂಡ, ಅವರಿಗೆ ಗೌರವ ಕೊಡದೆ ಸೋನಿಯಾ ಗಾಂಧಿಯವರು ಹಸೀನಾ ಜೊತೆ ಮಾತುಕತೆ ನಡೆಸಿದ್ದಾರೆ” ಎಂದು ಹೇಳಲಾಗಿದೆ.

ಜಿತೇಂದ್ರ ಪ್ರತಾಪ್ ಸಿಂಗ್‘ ಎಂಬ ಎಕ್ಸ್ ಬಳಕೆದಾರ ವೈರಲ್ ಪೋಟೋ ಹಂಚಿಕೊಂಡಿದ್ದು, “ಒಮ್ಮೆ ನಮ್ಮ ದೇಶದ ಕಾಂಗ್ರೆಸ್ ಪ್ರಧಾನಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಒಬ್ಬ ಮಾಮೂಲಿ ಮಂತ್ರಿಯಂತೆ ಪಕ್ಕದಲ್ಲಿ ಕೂತಿರುವ ರೀತಿ ನೋಡಿ” ಎಂದು ಬರೆದುಕೊಂಡಿದ್ದಾರೆ.

‘ಲಲಿತ್ ಕಿಶೋರ್ ಭಾರದ್ವಾಜ್’ ಫೇಸ್‌ಬುಕ್ ಬಳಕೆದಾರ ವೈರಲ್ ಫೋಟೋವನ್ನು ಹಂಚಿಕೊಂಡಿದ್ದು, ಇದೇ ರೀತಿಯ ಪ್ರತಿಪಾದನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್: ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅಕ್ಟೋಬರ್ 6, 2019ರಂದು ಟೈಮ್ಸ್ ಆಫ್‌ ಇಂಡಿಯಾದಲ್ಲಿ ಪ್ರಕಟಗೊಂಡ ಸುದ್ದಿಯೊಂದು ಲಭ್ಯವಾಗಿದೆ. ಆ ಸುದ್ದಿಯಲ್ಲಿ “ಬಾಂಗ್ಲಾದೇಶದ ಸ್ವಾತಂತ್ರ್ಯತೋತ್ಸವದ 50ನೇ ವರ್ಷಾಚರಣೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನೀಡಿರುವ ಆಹ್ವಾನವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ವೀಕರಿಸಿದ್ದಾರೆ. ಶೇಖ್ ಹಸೀನಾ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಆಹ್ವಾನ ನೀಡಿದ್ದಾರೆ” ಎಂದು ಹೇಳಲಾಗಿದೆ.

ಅಕ್ಟೋಬರ್ 6, 2019ರಂದು ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲೂ ವೈರಲ್ ಫೋಟೋ ಪೋಸ್ಟ್ ಮಾಡಿತ್ತು. ಅದರಲ್ಲಿ, “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ಆನಂದ್ ಶರ್ಮಾ ಸೇರಿದಂತೆ ಕಾಂಗ್ರೆಸ್ ನಿಯೋಗ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿತು” ಎಂದು ತಿಳಿಸಿಲಾಗಿದೆ.

ಮಾರ್ಚ್ 2023ರಲ್ಲಿ ಇದೇ ಫೋಟೋ ವೈರಲ್ ಆಗಿತ್ತು. ಆ ಸಂದರ್ಭದಲ್ಲಿ ಬೂಮ್ ಹಿಂದಿ ವೆಬ್‌ಸೈಟ್‌ ಈ ಕುರಿತು ಫ್ಯಾಕ್ಟ್‌ಚೆಕ್ ಮಾಡಿತ್ತು. ಅದರಲ್ಲಿ” ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ. ಅದು 2019ರ ಫೋಟೋ. ಫೋಟೋದಲ್ಲಿರುವಂತೆ ಶೇಖ್ ಹಸೀನಾ ಬಳಿ ಪ್ರಧಾನಿ ಮನಮೋಹನ್ ಸಿಂಗ್ ಬದಲು ಸೋನಿಯಾ ಗಾಂಧಿ ಕುಳಿತಿದ್ದಾರೆ. ಈ ಮೂಲಕ ಪ್ರಧಾನಿಗೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಆದರೆ, 2019ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಹುದ್ದೆಯಲ್ಲಿ ಇರಲಿಲ್ಲ” ಎಂದು ಹೇಳಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ಫೋಟೋ 2019ರದ್ದು. ಭಾರತಕ್ಕೆ ಆಗಮಿಸಿದ್ದ ಶೇಖ್ ಹಸೀನಾ ಅವರನ್ನು ಕಾಂಗ್ರೆಸ್‌ ನಿಯೋಗ ಭೇಟಿ ಮಾಡಿತ್ತು. ಆ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆಯಲ್ಲಿ ಇರಲಿಲ್ಲ. ಹಾಗಾಗಿ, ಸೋನಿಯಾ ಗಾಂಧಿ ಪ್ರಧಾನಿಯನ್ನು ಮೂಲೆಗುಂಪು ಮಾಡಿ ಮುಂಬದಿ ಕುರ್ಚಿಯಲ್ಲಿ ಕುಳಿತಿದ್ದರು ಎನ್ನುವ ವಾದ ಸುಳ್ಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...