Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...