Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...