Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...