Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...