Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...