Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...