Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...