Homeಫ್ಯಾಕ್ಟ್‌ಚೆಕ್Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಈಗ ಕೋಮು ಬಣ್ಣ ಬಳಿಯಲಾಗಿದೆ.

Ritik (@ThenNowForeve) ಎಂಬ ಎಕ್ಸ್ ಬಳಕೆದಾರ ಪೊಲೀಸರು ರೆಕಾರ್ಡ್ ಮಾಡಿದ್ದೂ ಎನ್ನಲಾದ ಡ್ರೋನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ರಾಮನವಮಿಯ ಒಂದು ದಿನ ಮುಂಚೆ ರಾಂಚಿ ಪೊಲೀಸರು ಡ್ರೋನ್‌ಗಳ ಸಹಾಯದಿಂದ ಸುಮಾರು 10 ಮನೆಗಳ ಟೆರೇಸ್‌ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ. ಆ 10 ಮನೆಗಳು ಯಾವ ಸಮುದಾಯಕ್ಕೆ ಸೇರಿರಬಹುದು ನೀವೇ ಊಹಿಸಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Ajeet Bharti(@ajeetbharti) ಎಂಬ ಮತ್ತೋರ್ವ ಬಳಕೆದಾರ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಕೋಮು ವೈಷಮ್ಯ ಉತ್ತೇಜಿಸುವ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಬಿಜೆಪಿ ಮುಖಂಡ ನವೀನ್ ಜಿಂದಾಲ್ (@naveenjindalbjp)ರಾಂಚಿ ಪೊಲೀಸರದ್ದು ಎನ್ನಲಾದ ಡ್ರೋನ್ ವಿಡಿಯೋ ಹಂಚಿಕೊಂಡಿದ್ದು, “ರಾಮನವಮಿಗೂ ಮುನ್ನ ಮನೆಗಳ ಛಾವಣಿಯ ಮೇಲೆ ಕಲ್ಲುಗಳ ರಾಶಿ. ಇವು ಯಾವ “ಸಮುದಾಯದ” ಮನೆಗಳು? ರಾಂಚಿ ಪೊಲೀಸರು ಡ್ರೋನ್‌ಗಳನ್ನು ಬಳಸಿ ಕನಿಷ್ಠ 10 ಮನೆಗಳನ್ನು ಪತ್ತೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ವ್ಯಕ್ತಿಗಳು ಹಂಚಿಕೊಂಡಿರುವ ವಿಡಿಯೋದಲ್ಲಿ ಮನೆಗಳ ಮೇಲೆ ಡ್ರೋನ್ ಹಾರಿಸಿರುವುದು ಕಾಣಿಸುತ್ತಿದೆಯೇ ಹೊರತು, ಕಲ್ಲು ಸಂಗ್ರಹಿಸಿಟ್ಟಿರುವುದು ಕಂಡಿಲ್ಲ.

ಫ್ಯಾಕ್ಟ್‌ಚೆಕ್ : ರಾಮ ನವಮಿಗಿಂತ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟುರುವುದನ್ನು ರಾಂಚಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪೋಸ್ಟ್‌ ಹಾಕಿರುವ ಎಕ್ಸ್ ಬಳಕೆದಾರರು, ರಾಮನವಮಿ ಮೆರವಣಿಗೆಗಳ ಮೇಲೆ ಎಸೆಯಲು ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್‌ನಲ್ಲಿ “ಇದು ಯಾವ ಸಮುದಾಯದವರ ಮನೆ ಎಂದು ಊಹಿಸಿ” ಎನ್ನುವ ಮೂಲಕ ಮುಸ್ಲಿಮರ ಮನೆಗಳ ಮೇಲೆ ಕಲ್ಲುಗಳು ದೊರೆತಿವೆ ಎಂಬ ರೀತಿ ಕೋಮು ವೈಷಮ್ಯ ಹರಡಲು ಪ್ರಯತ್ನಿಸಿದ್ದಾರೆ.

ಆದರೆ, ಏಪ್ರಿಲ್ 16, 2024ರಂದು ಈ ಸಂಬಂಧ ಸ್ಪಷ್ಟೀಕರಣ ಕೊಟ್ಟಿರುವ ರಾಂಚಿ ಪೊಲೀಸರು, “ಮೆರವಣಿಗೆಗಳು ಸಾಗುವ ರಸ್ತೆಯ ಪಕ್ಕದ ಕಟ್ಟಡಗಳನ್ನು ಡ್ರೋನ್ ಬಳಸಿ ತಪಾಸಣೆ ನಡೆಸುವುದು ಸರ್ವೆ ಸಾಮಾನ್ಯ. ಇದು ಪೊಲೀಸರ ಭದ್ರತಾ ಕ್ರಮದ ಒಂದು ಭಾಗ. ಹಲವು ಜಿಲ್ಲೆಗಳಲ್ಲಿ ಇದನ್ನು ಮಾಡಲಾಗುತ್ತಿದ್ದು, ಯಾರದ್ದಾದರೂ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳು ಮುಂತಾದ ಯಾವುದೇ ನಿರ್ಮಾಣ ಸಾಮಗ್ರಿಗಳು ಇದ್ದರೆ, ಅದನ್ನು ತೆರವುಗೊಳಿಸಲು ಸಂಬಂಧಿಸಿದ ಮನೆ ಮಾಲೀಕರನ್ನು ಕೋರಲಾಗ್ತಿದೆ” ಎಂದಿದ್ದಾರೆ.

ಈ ಮೂಲಕ “ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟಿದಲ್ಲ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ತಂದಿಟ್ಟ ಸಾಮಗ್ರಿಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಡ್ರೋನ್ ಮೂಲಕ ತಪಾಸಣೆ ನಡೆಸುವುದು ಒಂದು ಸಾಮಾನ್ಯ ಪ್ರಕ್ರಿಯೆ. ಅಲ್ಲದೆ, ನಿರ್ದಿಷ್ಟ ಸಮುದಾಯದವರ ಮನೆಗಳ ಮೇಲೆ ಮಾತ್ರ ಕಲ್ಲು, ಮರಳು ದೊರೆತಿಲ್ಲ. ನಿರ್ದಿಷ್ಟ ಸಮುದಾಯದವರಿಗೆ ಮಾತ್ರ ನೋಟಿಸ್ ನೀಡಿಲ್ಲ ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ, ರಾಮನವಮಿಗಿಂತ ಮುಂಚಿತವಾಗಿ 10 ಮನೆಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆ ಮನೆಗಳು ನಿರ್ದಿಷ್ಟ ಸಮುದಾಯಕ್ಕೆ ಸೇರಿರುವಂತದ್ದು ಎಂಬ ಎಕ್ಸ್ ಬಳಕೆದಾರರ ವಾದ ಸುಳ್ಳು

ಈ ವಿಷಯದ ಕುರಿತು altnews.in ರಾಂಚಿ ಎಸ್‌ಎಸ್‌ಪಿ ಚಂದನ್‌ ಕುಮಾರ್‌ ಸಿನ್ಹಾ ಅವರೊಂದಿಗೆ ಮಾತನಾಡಿದ್ದು, “ಈ ವಿಷಯದಲ್ಲಿ ಯಾವುದೇ ಕೋಮು ಆಯಾಮವಿಲ್ಲ. ನೋಟಿಸ್ ಸ್ವೀಕರಿಸಿದ ಮನೆ ಮಾಲೀಕರು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಲ್ಲ. ಮೆರವಣಿಗೆ ಹೊರಡುವ ಮಾರ್ಗದ ಮೇಲ್ವಿಚಾರಣೆ ಮಾಡುವುದು ಮತ್ತು ನಡುವೆ ಬರುವ ಕಟ್ಟಡಗಳ ಮೇಲ್ಛಾವಣಿಯ ಮೇಲೆ ಕಲ್ಲು, ಇಟ್ಟಿಗೆ, ಮರಳಿನಂತಹ ನಿರ್ಮಾಣ ಸಾಮಗ್ರಿಗಳನ್ನು ಸಂಗ್ರಹಿಸಿಡದಂತೆ ಎಚ್ಚರಿಕೆ ವಹಿಸುವುದು ಆಡಳಿತದ ವಾಡಿಕೆಯ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ ಎಂದಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...