Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

- Advertisement -
- Advertisement -

ಕನ್ವರ್ ಯಾತ್ರಿಗಳು ಸಾಗುವ ಮಾರ್ಗದಲ್ಲಿ ಬರುವ ಎಲ್ಲಾ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಇತ್ತೀಚೆಗೆ ಆದೇಶಿಸಿತ್ತು. ಈ ಆದೇಶ ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಹೊರಡಿಸಲಾಗಿದೆ ಎಂಬ ಎರಡೂ ರಾಜ್ಯ ಸರ್ಕಾರಗಳ ಆದೇಶ ಪ್ರಶ್ನಿಸಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಜುಲೈ 22ರಂದು ಸರ್ಕಾರಗಳ ಆದೇಶವನ್ನು ತಡೆ ಹಿಡಿದಿತ್ತು.

ಎಪಿಸಿಆರ್ ಅರ್ಜಿಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡುವ ವೇಳೆ ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರು ಮೌಖಿಕವಾಗಿ ತನ್ನ ಅನುಭವೊಂದನ್ನು ಬಿಚ್ಚಿಟ್ಟಿದ್ದರು. ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ, ಅದಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಕಾನೂನು ಸಂಬಂಧಿತ ಸುದ್ದಿಗಳ ವೆಬ್‌ಸೈಟ್‌ಗಳಾದ ಲೈವ್ ಲಾ ಮತ್ತು ಬಾರ್ & ಬೆಂಚ್ ನ್ಯಾಯಮೂರ್ತಿಗಳ ಹೇಳಿಕೆಯನ್ನು ವರದಿ ಮಾಡಿತ್ತು. ಅದರಲ್ಲಿ “ಕೇರಳದ ಒಂದು ನಗರದಲ್ಲಿ ಹಿಂದೂಗಳು ನಡೆಸುವ ವೆಜ್ ಹೋಟೆಲ್ ಒಂದಿದೆ, ಮುಸ್ಲಿಮರ ನಡೆಸುವ ವೆಜ್ ಹೋಟೆಲ್ ಒಂದಿದೆ. ಆ ರಾಜ್ಯದ ನ್ಯಾಯಾಧೀಶನಾಗಿದ್ದಾಗ ನಾನು, ಮುಸಲ್ಮಾನರು ನಡೆಸುತ್ತಿದ್ದ ಹೋಟೆಲ್‌ಗೆ ಹೋಗುತ್ತಿದ್ದೆ. ಅಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಕಾಯ್ದುಕೊಳ್ಳುತ್ತಿದ್ದರು” ಎಂದು ನ್ಯಾಯಮೂರ್ತಿ ಹೇಳಿದ್ದರು.

ಈ ಹೇಳಿಕೆಯನ್ನು ತಿರುಚಿದ ಕೆಲ ಬಲಂಥೀಯ ಎಕ್ಸ್‌ ಬಳಕೆದಾರರು ” ಹಾಗಾದರೆ, ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್‌ಗಳು ಮಾತ್ರ ಉತ್ತಮ ಸ್ವಚ್ಚತೆ ಹೊಂದಿದೆ. ಹಿಂದೂಗಳು ಸ್ವಚ್ಚ ಇಲ್ಲ ಎಂದರ್ಥವೇ?” ಎಂದು ಬರೆದುಕೊಂಡಿದ್ದರು.

ಸದಾ ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಮಿ.ಸಿನ್ಹಾ (@MrSinha_) ಎಂಬ ಎಕ್ಸ್‌ ಬಳಕೆದಾರ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು “ಹಾಗಾದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪ್ರಕಾರ, ಹಿಂದೂಗಳು ತಮ್ಮ ರೆಸ್ಟೋರೆಂಟ್‌ಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು (ಬಹುಶಃ ನೈರ್ಮಲ್ಯ) ಕಾಪಾಡುತ್ತಿಲ್ಲ.. ಮುಸ್ಲಿಮರು ಕಾಪಾಡುತ್ತಿದ್ದಾರಾ?”

“ಅಲ್ಲದೆ, ಅವರು ಮುಸ್ಲಿಮರ ರೆಸ್ಟೋರೆಂಟ್‌ಗಳಿಗೆ ಆದ್ಯತೆ ನೀಡುವುದರಿಂದ, ಎಲ್ಲಾ ಹಿಂದೂಗಳು ಅದೇ ರೀತಿ ಮಾಡಬೇಕೆಂದು ಬಯಸುತ್ತಿದ್ದಾರಾ? ಇದು ಎಲ್ಲಾ ಹಿಂದೂಗಳನ್ನು ಅನೈರ್ಮಲ್ಯ ಎಂದು ಘೋಷಿಸಿ ಅವರ ವಿರುದ್ಧ ಬಹಿಷ್ಕಾರದ ಕರೆ ಕೊಟ್ಟಂತೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ಅಜೀತ್ ಬಾರ್ತಿ (@ajeetbharti) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ವಾವ್ ಭಟ್ಟಿ ಜೀ! ಅವರ ವೈಯಕ್ತಿಕ ದೃಷ್ಟಿಕೋನಗಳು ಮುಸ್ಲಿಮರು ನಡೆಸುತ್ತಿರುವ ಪ್ರಪಂಚದ ಪ್ರತಿಯೊಂದು ರೆಸ್ಟೋರೆಂಟ್ ಅನ್ನು ಪ್ರತಿನಿಧಿಸುತ್ತವೆ. ಅಂತಹ ನ್ಯಾಯಾಧೀಶರು ಇದ್ದಾಗ ತೀರ್ಪು ಕೂಡ ಅಂತರಾಷ್ಟ್ರೀಯ ಗುಣಮಟ್ಟದಿಂದ ಕೂಡಿರುತ್ತದೆ. ನಾಲ್ಕು ವಿನಾಯಿತಿಗಳನ್ನು ತನ್ನಿ, ಅದನ್ನು ಪೀಠದಿಂದ ಹೇಳಿ, ಅಲ್ಲಿಗೆ ಮುಗೀತು” ಎಂದು ಬರೆದುಕೊಂಡಿದ್ದರು.

ಇವರಿಬ್ಬರೇ ಅಲ್ಲದೆ ಇನ್ನೂ ಅನೇಕರು ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ನ್ಯಾಯಮೂರ್ತಿಗಳು ಕೇರಳದ ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಒಂದರ ತಮ್ಮ ಅನುಭವವನ್ನು ಉದಾಹರಣೆಯಾಗಿ ಹೇಳಿದ್ದರು ಅಷ್ಟೆ. “ನಾನು ಹೋಗುತ್ತಿದ್ದ ಹೋಟೆಲ್ ಮಾಲೀಕ ದುಬೈನಿಂದ ಹಿಂದಿರುಗಿದವರು. ಆದ್ದರಿಂದ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಅವರು ಕಾಪಾಡಿಕೊಂಡಿದ್ದರು” ಎಂದಿದ್ದರು. ಈ ಮೂಲಕ ಮುಸ್ಲಿಂ ಮಾಲೀಕತ್ವದ ಹೋಟೆಲ್, ರೆಸ್ಟೋರೆಂಟ್‌ಗಳ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ಪ್ರಯತ್ನ ಮಾಡಿದ್ದರು.

ನ್ಯಾಯಮೂರ್ತಿಗಳು ಎಲ್ಲೂ “ಮುಸ್ಲಿಮರ ರೆಸ್ಟೋರೆಂಟ್‌, ಹೋಟೆಲ್‌ಗಳು ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿರುತ್ತದೆ. ಹಿಂದೂಗಳು ಆ ರೀತಿ ಇರುವುದಿಲ್ಲ” ಎಂದು ಹೇಳಿಲ್ಲ. ಹಿಂದೂಗಳ ಹೋಟೆಲ್‌ಗಳನ್ನು ಬಹಿಷ್ಕರಿಸುವ ಹೇಳಿಕೆಯನ್ನೂ ಅವರು ನೀಡಿಲ್ಲ.

ಈ ಕುರಿತು ಜುಲೈ 22ರಂದು ವಾರ್ತಾಭಾರತಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯ ಸ್ಕ್ರೀನ್ ಶಾಟ್ ಕೆಳಗಿದೆ

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು ಎಂಬ ಆದೇಶ ನೀಡಿರುವುದರ ಹಿಂದೆ ಮುಸ್ಲಿಮರನ್ನು ಗುರಿಯಾಗಿಸುವ ಉದ್ದೇಶ ಇದೆ ಎಂಬ ಆರೋಪ ಕೇಳಿ ಬಂದಿತ್ತು.

ಹೆಸರು ಪ್ರದರ್ಶಿಸಿದರೆ ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿ ಹಿಂದೂಗಳೋ? ಮುಸ್ಲಿಮರೋ ಎಂದು ಗೊತ್ತಾಗುತ್ತದೆ. ಈ ಮೂಲಕ ಕನ್ವರ್ ಯಾತ್ರಿಗಳು ಹಿಂದೂ ಹೋಟೆಲ್‌ಗಳನ್ನು ಗುರುತಿಸಿ ಅಲ್ಲಿಗೆ ಹೋಗುತ್ತಾರೆ. ಮುಸ್ಲಿಮರನ್ನು ಬಹಿಷ್ಕರಿಸುತ್ತಾರೆ ಎಂಬ ಕೆಟ್ಟ ಉದ್ದೇಶ ಸರ್ಕಾರದ ಆದೇಶದ ಹಿಂದೆ ಎಂದು ಅನೇಕರು ದೂರಿದ್ದರು.

ಹಾಗಾಗಿ, ವಿಚಾರಣೆ ವೇಳೆ “ಮುಸ್ಲಿಮರ ಹೋಟೆಲ್‌ ಅಂಗಡಿಗಳಲ್ಲಿ ಸ್ವಚ್ಚತೆ, ಗುಣಮಟ್ಟ ಎಲ್ಲವೂ ಇದೆ. ನಾನೂ ಮುಸ್ಲಿಮರ ವೆಜ್ ಹೋಟೆಲ್‌ಗಳಿಗೆ ಹೋಗುತ್ತಿದ್ದೆ” ಎಂದು ನ್ಯಾಯಮೂರ್ತಿ ಭಟ್ಟಿ ಅವರು ಸಾಂಧರ್ಬಿಕವಾಗಿ ಹೇಳಿದ್ದರು. ಆದರೆ, ಅದನ್ನು ತಿರುಚಿ, “ಮುಸ್ಲಿಮರ ಹೋಟೆಲ್ ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿದೆ. ಹಿಂದೂಗಳ ಹೋಟೆಲ್ ಸ್ವಚ್ಚತೆಯಿಂದ ಕೂಡಿಲ್ಲ ಎಂಬರ್ಥದಲ್ಲಿ ನ್ಯಾಯಮೂರ್ತಿಗಳು ಹೇಳಿಕೆ ನೀಡಿದ್ದಾರೆ” ಎಂದು ತಪ್ಪು ದಾರಿಗೆಳೆಯುವ ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...