Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

- Advertisement -
- Advertisement -

ಕನ್ವರ್ ಯಾತ್ರಿಗಳು ಸಾಗುವ ಮಾರ್ಗದಲ್ಲಿ ಬರುವ ಎಲ್ಲಾ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಇತ್ತೀಚೆಗೆ ಆದೇಶಿಸಿತ್ತು. ಈ ಆದೇಶ ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಹೊರಡಿಸಲಾಗಿದೆ ಎಂಬ ಎರಡೂ ರಾಜ್ಯ ಸರ್ಕಾರಗಳ ಆದೇಶ ಪ್ರಶ್ನಿಸಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಜುಲೈ 22ರಂದು ಸರ್ಕಾರಗಳ ಆದೇಶವನ್ನು ತಡೆ ಹಿಡಿದಿತ್ತು.

ಎಪಿಸಿಆರ್ ಅರ್ಜಿಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡುವ ವೇಳೆ ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರು ಮೌಖಿಕವಾಗಿ ತನ್ನ ಅನುಭವೊಂದನ್ನು ಬಿಚ್ಚಿಟ್ಟಿದ್ದರು. ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ, ಅದಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಕಾನೂನು ಸಂಬಂಧಿತ ಸುದ್ದಿಗಳ ವೆಬ್‌ಸೈಟ್‌ಗಳಾದ ಲೈವ್ ಲಾ ಮತ್ತು ಬಾರ್ & ಬೆಂಚ್ ನ್ಯಾಯಮೂರ್ತಿಗಳ ಹೇಳಿಕೆಯನ್ನು ವರದಿ ಮಾಡಿತ್ತು. ಅದರಲ್ಲಿ “ಕೇರಳದ ಒಂದು ನಗರದಲ್ಲಿ ಹಿಂದೂಗಳು ನಡೆಸುವ ವೆಜ್ ಹೋಟೆಲ್ ಒಂದಿದೆ, ಮುಸ್ಲಿಮರ ನಡೆಸುವ ವೆಜ್ ಹೋಟೆಲ್ ಒಂದಿದೆ. ಆ ರಾಜ್ಯದ ನ್ಯಾಯಾಧೀಶನಾಗಿದ್ದಾಗ ನಾನು, ಮುಸಲ್ಮಾನರು ನಡೆಸುತ್ತಿದ್ದ ಹೋಟೆಲ್‌ಗೆ ಹೋಗುತ್ತಿದ್ದೆ. ಅಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಕಾಯ್ದುಕೊಳ್ಳುತ್ತಿದ್ದರು” ಎಂದು ನ್ಯಾಯಮೂರ್ತಿ ಹೇಳಿದ್ದರು.

ಈ ಹೇಳಿಕೆಯನ್ನು ತಿರುಚಿದ ಕೆಲ ಬಲಂಥೀಯ ಎಕ್ಸ್‌ ಬಳಕೆದಾರರು ” ಹಾಗಾದರೆ, ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್‌ಗಳು ಮಾತ್ರ ಉತ್ತಮ ಸ್ವಚ್ಚತೆ ಹೊಂದಿದೆ. ಹಿಂದೂಗಳು ಸ್ವಚ್ಚ ಇಲ್ಲ ಎಂದರ್ಥವೇ?” ಎಂದು ಬರೆದುಕೊಂಡಿದ್ದರು.

ಸದಾ ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಮಿ.ಸಿನ್ಹಾ (@MrSinha_) ಎಂಬ ಎಕ್ಸ್‌ ಬಳಕೆದಾರ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು “ಹಾಗಾದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪ್ರಕಾರ, ಹಿಂದೂಗಳು ತಮ್ಮ ರೆಸ್ಟೋರೆಂಟ್‌ಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು (ಬಹುಶಃ ನೈರ್ಮಲ್ಯ) ಕಾಪಾಡುತ್ತಿಲ್ಲ.. ಮುಸ್ಲಿಮರು ಕಾಪಾಡುತ್ತಿದ್ದಾರಾ?”

“ಅಲ್ಲದೆ, ಅವರು ಮುಸ್ಲಿಮರ ರೆಸ್ಟೋರೆಂಟ್‌ಗಳಿಗೆ ಆದ್ಯತೆ ನೀಡುವುದರಿಂದ, ಎಲ್ಲಾ ಹಿಂದೂಗಳು ಅದೇ ರೀತಿ ಮಾಡಬೇಕೆಂದು ಬಯಸುತ್ತಿದ್ದಾರಾ? ಇದು ಎಲ್ಲಾ ಹಿಂದೂಗಳನ್ನು ಅನೈರ್ಮಲ್ಯ ಎಂದು ಘೋಷಿಸಿ ಅವರ ವಿರುದ್ಧ ಬಹಿಷ್ಕಾರದ ಕರೆ ಕೊಟ್ಟಂತೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ಅಜೀತ್ ಬಾರ್ತಿ (@ajeetbharti) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ವಾವ್ ಭಟ್ಟಿ ಜೀ! ಅವರ ವೈಯಕ್ತಿಕ ದೃಷ್ಟಿಕೋನಗಳು ಮುಸ್ಲಿಮರು ನಡೆಸುತ್ತಿರುವ ಪ್ರಪಂಚದ ಪ್ರತಿಯೊಂದು ರೆಸ್ಟೋರೆಂಟ್ ಅನ್ನು ಪ್ರತಿನಿಧಿಸುತ್ತವೆ. ಅಂತಹ ನ್ಯಾಯಾಧೀಶರು ಇದ್ದಾಗ ತೀರ್ಪು ಕೂಡ ಅಂತರಾಷ್ಟ್ರೀಯ ಗುಣಮಟ್ಟದಿಂದ ಕೂಡಿರುತ್ತದೆ. ನಾಲ್ಕು ವಿನಾಯಿತಿಗಳನ್ನು ತನ್ನಿ, ಅದನ್ನು ಪೀಠದಿಂದ ಹೇಳಿ, ಅಲ್ಲಿಗೆ ಮುಗೀತು” ಎಂದು ಬರೆದುಕೊಂಡಿದ್ದರು.

ಇವರಿಬ್ಬರೇ ಅಲ್ಲದೆ ಇನ್ನೂ ಅನೇಕರು ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ನ್ಯಾಯಮೂರ್ತಿಗಳು ಕೇರಳದ ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಒಂದರ ತಮ್ಮ ಅನುಭವವನ್ನು ಉದಾಹರಣೆಯಾಗಿ ಹೇಳಿದ್ದರು ಅಷ್ಟೆ. “ನಾನು ಹೋಗುತ್ತಿದ್ದ ಹೋಟೆಲ್ ಮಾಲೀಕ ದುಬೈನಿಂದ ಹಿಂದಿರುಗಿದವರು. ಆದ್ದರಿಂದ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಅವರು ಕಾಪಾಡಿಕೊಂಡಿದ್ದರು” ಎಂದಿದ್ದರು. ಈ ಮೂಲಕ ಮುಸ್ಲಿಂ ಮಾಲೀಕತ್ವದ ಹೋಟೆಲ್, ರೆಸ್ಟೋರೆಂಟ್‌ಗಳ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ಪ್ರಯತ್ನ ಮಾಡಿದ್ದರು.

ನ್ಯಾಯಮೂರ್ತಿಗಳು ಎಲ್ಲೂ “ಮುಸ್ಲಿಮರ ರೆಸ್ಟೋರೆಂಟ್‌, ಹೋಟೆಲ್‌ಗಳು ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿರುತ್ತದೆ. ಹಿಂದೂಗಳು ಆ ರೀತಿ ಇರುವುದಿಲ್ಲ” ಎಂದು ಹೇಳಿಲ್ಲ. ಹಿಂದೂಗಳ ಹೋಟೆಲ್‌ಗಳನ್ನು ಬಹಿಷ್ಕರಿಸುವ ಹೇಳಿಕೆಯನ್ನೂ ಅವರು ನೀಡಿಲ್ಲ.

ಈ ಕುರಿತು ಜುಲೈ 22ರಂದು ವಾರ್ತಾಭಾರತಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯ ಸ್ಕ್ರೀನ್ ಶಾಟ್ ಕೆಳಗಿದೆ

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು ಎಂಬ ಆದೇಶ ನೀಡಿರುವುದರ ಹಿಂದೆ ಮುಸ್ಲಿಮರನ್ನು ಗುರಿಯಾಗಿಸುವ ಉದ್ದೇಶ ಇದೆ ಎಂಬ ಆರೋಪ ಕೇಳಿ ಬಂದಿತ್ತು.

ಹೆಸರು ಪ್ರದರ್ಶಿಸಿದರೆ ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿ ಹಿಂದೂಗಳೋ? ಮುಸ್ಲಿಮರೋ ಎಂದು ಗೊತ್ತಾಗುತ್ತದೆ. ಈ ಮೂಲಕ ಕನ್ವರ್ ಯಾತ್ರಿಗಳು ಹಿಂದೂ ಹೋಟೆಲ್‌ಗಳನ್ನು ಗುರುತಿಸಿ ಅಲ್ಲಿಗೆ ಹೋಗುತ್ತಾರೆ. ಮುಸ್ಲಿಮರನ್ನು ಬಹಿಷ್ಕರಿಸುತ್ತಾರೆ ಎಂಬ ಕೆಟ್ಟ ಉದ್ದೇಶ ಸರ್ಕಾರದ ಆದೇಶದ ಹಿಂದೆ ಎಂದು ಅನೇಕರು ದೂರಿದ್ದರು.

ಹಾಗಾಗಿ, ವಿಚಾರಣೆ ವೇಳೆ “ಮುಸ್ಲಿಮರ ಹೋಟೆಲ್‌ ಅಂಗಡಿಗಳಲ್ಲಿ ಸ್ವಚ್ಚತೆ, ಗುಣಮಟ್ಟ ಎಲ್ಲವೂ ಇದೆ. ನಾನೂ ಮುಸ್ಲಿಮರ ವೆಜ್ ಹೋಟೆಲ್‌ಗಳಿಗೆ ಹೋಗುತ್ತಿದ್ದೆ” ಎಂದು ನ್ಯಾಯಮೂರ್ತಿ ಭಟ್ಟಿ ಅವರು ಸಾಂಧರ್ಬಿಕವಾಗಿ ಹೇಳಿದ್ದರು. ಆದರೆ, ಅದನ್ನು ತಿರುಚಿ, “ಮುಸ್ಲಿಮರ ಹೋಟೆಲ್ ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿದೆ. ಹಿಂದೂಗಳ ಹೋಟೆಲ್ ಸ್ವಚ್ಚತೆಯಿಂದ ಕೂಡಿಲ್ಲ ಎಂಬರ್ಥದಲ್ಲಿ ನ್ಯಾಯಮೂರ್ತಿಗಳು ಹೇಳಿಕೆ ನೀಡಿದ್ದಾರೆ” ಎಂದು ತಪ್ಪು ದಾರಿಗೆಳೆಯುವ ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...