Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

- Advertisement -
- Advertisement -

ಕನ್ವರ್ ಯಾತ್ರಿಗಳು ಸಾಗುವ ಮಾರ್ಗದಲ್ಲಿ ಬರುವ ಎಲ್ಲಾ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಇತ್ತೀಚೆಗೆ ಆದೇಶಿಸಿತ್ತು. ಈ ಆದೇಶ ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಹೊರಡಿಸಲಾಗಿದೆ ಎಂಬ ಎರಡೂ ರಾಜ್ಯ ಸರ್ಕಾರಗಳ ಆದೇಶ ಪ್ರಶ್ನಿಸಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಜುಲೈ 22ರಂದು ಸರ್ಕಾರಗಳ ಆದೇಶವನ್ನು ತಡೆ ಹಿಡಿದಿತ್ತು.

ಎಪಿಸಿಆರ್ ಅರ್ಜಿಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡುವ ವೇಳೆ ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರು ಮೌಖಿಕವಾಗಿ ತನ್ನ ಅನುಭವೊಂದನ್ನು ಬಿಚ್ಚಿಟ್ಟಿದ್ದರು. ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ, ಅದಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಕಾನೂನು ಸಂಬಂಧಿತ ಸುದ್ದಿಗಳ ವೆಬ್‌ಸೈಟ್‌ಗಳಾದ ಲೈವ್ ಲಾ ಮತ್ತು ಬಾರ್ & ಬೆಂಚ್ ನ್ಯಾಯಮೂರ್ತಿಗಳ ಹೇಳಿಕೆಯನ್ನು ವರದಿ ಮಾಡಿತ್ತು. ಅದರಲ್ಲಿ “ಕೇರಳದ ಒಂದು ನಗರದಲ್ಲಿ ಹಿಂದೂಗಳು ನಡೆಸುವ ವೆಜ್ ಹೋಟೆಲ್ ಒಂದಿದೆ, ಮುಸ್ಲಿಮರ ನಡೆಸುವ ವೆಜ್ ಹೋಟೆಲ್ ಒಂದಿದೆ. ಆ ರಾಜ್ಯದ ನ್ಯಾಯಾಧೀಶನಾಗಿದ್ದಾಗ ನಾನು, ಮುಸಲ್ಮಾನರು ನಡೆಸುತ್ತಿದ್ದ ಹೋಟೆಲ್‌ಗೆ ಹೋಗುತ್ತಿದ್ದೆ. ಅಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಕಾಯ್ದುಕೊಳ್ಳುತ್ತಿದ್ದರು” ಎಂದು ನ್ಯಾಯಮೂರ್ತಿ ಹೇಳಿದ್ದರು.

ಈ ಹೇಳಿಕೆಯನ್ನು ತಿರುಚಿದ ಕೆಲ ಬಲಂಥೀಯ ಎಕ್ಸ್‌ ಬಳಕೆದಾರರು ” ಹಾಗಾದರೆ, ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್‌ಗಳು ಮಾತ್ರ ಉತ್ತಮ ಸ್ವಚ್ಚತೆ ಹೊಂದಿದೆ. ಹಿಂದೂಗಳು ಸ್ವಚ್ಚ ಇಲ್ಲ ಎಂದರ್ಥವೇ?” ಎಂದು ಬರೆದುಕೊಂಡಿದ್ದರು.

ಸದಾ ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಮಿ.ಸಿನ್ಹಾ (@MrSinha_) ಎಂಬ ಎಕ್ಸ್‌ ಬಳಕೆದಾರ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು “ಹಾಗಾದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪ್ರಕಾರ, ಹಿಂದೂಗಳು ತಮ್ಮ ರೆಸ್ಟೋರೆಂಟ್‌ಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು (ಬಹುಶಃ ನೈರ್ಮಲ್ಯ) ಕಾಪಾಡುತ್ತಿಲ್ಲ.. ಮುಸ್ಲಿಮರು ಕಾಪಾಡುತ್ತಿದ್ದಾರಾ?”

“ಅಲ್ಲದೆ, ಅವರು ಮುಸ್ಲಿಮರ ರೆಸ್ಟೋರೆಂಟ್‌ಗಳಿಗೆ ಆದ್ಯತೆ ನೀಡುವುದರಿಂದ, ಎಲ್ಲಾ ಹಿಂದೂಗಳು ಅದೇ ರೀತಿ ಮಾಡಬೇಕೆಂದು ಬಯಸುತ್ತಿದ್ದಾರಾ? ಇದು ಎಲ್ಲಾ ಹಿಂದೂಗಳನ್ನು ಅನೈರ್ಮಲ್ಯ ಎಂದು ಘೋಷಿಸಿ ಅವರ ವಿರುದ್ಧ ಬಹಿಷ್ಕಾರದ ಕರೆ ಕೊಟ್ಟಂತೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ಅಜೀತ್ ಬಾರ್ತಿ (@ajeetbharti) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ವಾವ್ ಭಟ್ಟಿ ಜೀ! ಅವರ ವೈಯಕ್ತಿಕ ದೃಷ್ಟಿಕೋನಗಳು ಮುಸ್ಲಿಮರು ನಡೆಸುತ್ತಿರುವ ಪ್ರಪಂಚದ ಪ್ರತಿಯೊಂದು ರೆಸ್ಟೋರೆಂಟ್ ಅನ್ನು ಪ್ರತಿನಿಧಿಸುತ್ತವೆ. ಅಂತಹ ನ್ಯಾಯಾಧೀಶರು ಇದ್ದಾಗ ತೀರ್ಪು ಕೂಡ ಅಂತರಾಷ್ಟ್ರೀಯ ಗುಣಮಟ್ಟದಿಂದ ಕೂಡಿರುತ್ತದೆ. ನಾಲ್ಕು ವಿನಾಯಿತಿಗಳನ್ನು ತನ್ನಿ, ಅದನ್ನು ಪೀಠದಿಂದ ಹೇಳಿ, ಅಲ್ಲಿಗೆ ಮುಗೀತು” ಎಂದು ಬರೆದುಕೊಂಡಿದ್ದರು.

ಇವರಿಬ್ಬರೇ ಅಲ್ಲದೆ ಇನ್ನೂ ಅನೇಕರು ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ನ್ಯಾಯಮೂರ್ತಿಗಳು ಕೇರಳದ ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಒಂದರ ತಮ್ಮ ಅನುಭವವನ್ನು ಉದಾಹರಣೆಯಾಗಿ ಹೇಳಿದ್ದರು ಅಷ್ಟೆ. “ನಾನು ಹೋಗುತ್ತಿದ್ದ ಹೋಟೆಲ್ ಮಾಲೀಕ ದುಬೈನಿಂದ ಹಿಂದಿರುಗಿದವರು. ಆದ್ದರಿಂದ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಅವರು ಕಾಪಾಡಿಕೊಂಡಿದ್ದರು” ಎಂದಿದ್ದರು. ಈ ಮೂಲಕ ಮುಸ್ಲಿಂ ಮಾಲೀಕತ್ವದ ಹೋಟೆಲ್, ರೆಸ್ಟೋರೆಂಟ್‌ಗಳ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ಪ್ರಯತ್ನ ಮಾಡಿದ್ದರು.

ನ್ಯಾಯಮೂರ್ತಿಗಳು ಎಲ್ಲೂ “ಮುಸ್ಲಿಮರ ರೆಸ್ಟೋರೆಂಟ್‌, ಹೋಟೆಲ್‌ಗಳು ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿರುತ್ತದೆ. ಹಿಂದೂಗಳು ಆ ರೀತಿ ಇರುವುದಿಲ್ಲ” ಎಂದು ಹೇಳಿಲ್ಲ. ಹಿಂದೂಗಳ ಹೋಟೆಲ್‌ಗಳನ್ನು ಬಹಿಷ್ಕರಿಸುವ ಹೇಳಿಕೆಯನ್ನೂ ಅವರು ನೀಡಿಲ್ಲ.

ಈ ಕುರಿತು ಜುಲೈ 22ರಂದು ವಾರ್ತಾಭಾರತಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯ ಸ್ಕ್ರೀನ್ ಶಾಟ್ ಕೆಳಗಿದೆ

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು ಎಂಬ ಆದೇಶ ನೀಡಿರುವುದರ ಹಿಂದೆ ಮುಸ್ಲಿಮರನ್ನು ಗುರಿಯಾಗಿಸುವ ಉದ್ದೇಶ ಇದೆ ಎಂಬ ಆರೋಪ ಕೇಳಿ ಬಂದಿತ್ತು.

ಹೆಸರು ಪ್ರದರ್ಶಿಸಿದರೆ ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿ ಹಿಂದೂಗಳೋ? ಮುಸ್ಲಿಮರೋ ಎಂದು ಗೊತ್ತಾಗುತ್ತದೆ. ಈ ಮೂಲಕ ಕನ್ವರ್ ಯಾತ್ರಿಗಳು ಹಿಂದೂ ಹೋಟೆಲ್‌ಗಳನ್ನು ಗುರುತಿಸಿ ಅಲ್ಲಿಗೆ ಹೋಗುತ್ತಾರೆ. ಮುಸ್ಲಿಮರನ್ನು ಬಹಿಷ್ಕರಿಸುತ್ತಾರೆ ಎಂಬ ಕೆಟ್ಟ ಉದ್ದೇಶ ಸರ್ಕಾರದ ಆದೇಶದ ಹಿಂದೆ ಎಂದು ಅನೇಕರು ದೂರಿದ್ದರು.

ಹಾಗಾಗಿ, ವಿಚಾರಣೆ ವೇಳೆ “ಮುಸ್ಲಿಮರ ಹೋಟೆಲ್‌ ಅಂಗಡಿಗಳಲ್ಲಿ ಸ್ವಚ್ಚತೆ, ಗುಣಮಟ್ಟ ಎಲ್ಲವೂ ಇದೆ. ನಾನೂ ಮುಸ್ಲಿಮರ ವೆಜ್ ಹೋಟೆಲ್‌ಗಳಿಗೆ ಹೋಗುತ್ತಿದ್ದೆ” ಎಂದು ನ್ಯಾಯಮೂರ್ತಿ ಭಟ್ಟಿ ಅವರು ಸಾಂಧರ್ಬಿಕವಾಗಿ ಹೇಳಿದ್ದರು. ಆದರೆ, ಅದನ್ನು ತಿರುಚಿ, “ಮುಸ್ಲಿಮರ ಹೋಟೆಲ್ ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿದೆ. ಹಿಂದೂಗಳ ಹೋಟೆಲ್ ಸ್ವಚ್ಚತೆಯಿಂದ ಕೂಡಿಲ್ಲ ಎಂಬರ್ಥದಲ್ಲಿ ನ್ಯಾಯಮೂರ್ತಿಗಳು ಹೇಳಿಕೆ ನೀಡಿದ್ದಾರೆ” ಎಂದು ತಪ್ಪು ದಾರಿಗೆಳೆಯುವ ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...