Homeಫ್ಯಾಕ್ಟ್‌ಚೆಕ್Fact Check : 'ಮಹಿಳಾ ಮೀಸಲಾತಿ ಮಸೂದೆ'ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ...

Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

- Advertisement -
- Advertisement -

ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಏಪ್ರಿಲ್ 2ರಂದು ಮಂಡಿಯ ಬಾಲ್ಹ್ ಕಣಿವೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಕಂಗನಾ, “ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 30ರಷ್ಟು ಮೀಸಲಾತಿ ನೀಡುವ ‘ಮಹಿಳಾ ಮೀಸಲಾತಿ ಮಸೂದೆ’ಯಿಂದಾಗಿ ನನಗೆ ಬಿಜೆಪಿ ಟಿಕೆಟ್ ದೊರೆತಿದೆ” ಎಂದಿದ್ದರು.

 

View this post on Instagram

 

A post shared by Kangana Ranaut (@kanganaranaut)

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಕಂಗನಾ ರಣಾವತ್ ಅವರ ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶಿಲನೆ ನಡೆಸಿದಾಗ, ಕಂಗನಾ ಹೇಳಿರುವುದು ಒಂದು ಹಸಿ ಸುಳ್ಳು ಎಂಬುವುದು ಗೊತ್ತಾಗಿದೆ.

ಬಿಜೆಪಿ ಸರ್ಕಾರ ಕಳೆದ ವರ್ಷ ಸಂಸತ್‌ನಲ್ಲಿ ಅನುಮೋದನೆ ಪಡೆದುಕೊಂಡಿರುವ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಸಂಬಂಧಿತ ಕೀ ವರ್ಡ್ ಬಳಸಿ ನಾವು ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಸೆಪ್ಟೆಂಬರ್ 22, 2023ರಂದು ‘ದಿ ಹಿಂದೂ’ ಪತ್ರಿಕೆಯ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಸುದ್ದಿಯೊಂದು ನಮಗೆ ದೊರೆತಿದೆ.

‘Rajya Sabha clears women’s reservation bill unanimously’ ಎಂಬ ಶೀರ್ಷಿಕೆಯ ಈ ವರದಿಯಲ್ಲಿ “ಸೆಪ್ಟೆಂಬರ್ 20 ರಂದು ಲೋಕಸಭೆಯು ಅಂಗೀಕರಿಸಿದ ನಂತರ ಮಹಿಳಾ ಮೀಸಲಾತಿ ಮಸೂದೆ ಅಥವಾ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆಯ ನಂತರ, 2029 ರ ವೇಳೆಗೆ ಮಸೂದೆಯನ್ನು ಜಾರಿಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಸಂಸತ್‌ನಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯ ಪ್ರತಿಯನ್ನು ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ ಪ್ರಕಟಿಸಿದೆ. ಮಸೂದೆಯಲ್ಲೂ ಜನಗಣತಿ ನಡೆದು, ಕ್ಷೇತ್ರ ಪುನರ್ಗವಿಂಗಡೆ ಪ್ರಕ್ರಿಯೆ ಮುಗಿದ ಬಳಿಕ ಮಹಿಳಾ ಮೀಸಲಾತಿ ಮಸೂದೆ-2023 ಜಾರಿಯಾಗಲಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ.

ಸೆಪ್ಟೆಂಬರ್ 20, 2023ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯಲ್ಲಿ 2024ರ ಲೋಕಸಭೆ ಚುನಾವಣೆ ಬಳಿಕ, ಅತಿ ಶೀಘ್ರದಲ್ಲಿ ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡನೆ ಮಾಡುವುದಾಗಿ ಅಮಿತ್ ಶಾ ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಕ್ಷೇತ್ರ ಪುನರ್ವಿಂಗಡನೆ ದೇಶದ ಜನ ಸಂಖ್ಯೆಯನ್ನು ಆಧರಿಸಿದೆ. ಹಾಗಾಗಿ, ಮೊದಲು ಜನಗಣತಿ ನಡೆಸಿ ಬಳಿಕ ಕ್ಷೇತ್ರ ಪುನರ್ವಿಂಗಡನೆ ಮಾಡಲಾಗುತ್ತದೆ. 2002ರಲ್ಲಿ ಕೊನೆಯ ಬಾರಿಗೆ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡೆ ನಡೆದಿತ್ತು. ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. 2011ರಲ್ಲಿ ಜನಗಣತಿ ನಡೆದ ಬಳಿಕ 2021ರಲ್ಲಿ ನಡೆಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ 2024 ಆದರೂ, ಜನಗಣತಿ ನಡೆದಿಲ್ಲ. ಹಾಗಾಗಿ, ಈ ಬಾರಿ ಚುನಾವಣೆ ಮುಗಿದ ಬಳಿಕ ಜನಗಣತಿ ನಡೆಯುವ ಸಾಧ್ಯತೆ ಇದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆ ಇನ್ನೂ ಜಾರಿಯಾಗಿಲ್ಲ, ಹಾಗಾಗಿ, ಈ ಮಸೂದೆಯಿಂದಾಗಿ ತನಗೆ ಬಿಜೆಪಿ ಟಿಕೆಟ್ ಸಿಕ್ಕಿತು ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು.

ಇದನ್ನೂ ಓದಿ : Fact Check: 11 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ 1,91,000 ಕೋಟಿ ರೂ. ಸಾಲ ಮಾಡಿರುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...