Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಭಾರತದ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ 2021ರ ಮೊದಲ ತ್ರೈಮಾಸಿಕ ಏಪ್ರಿಲ್-ಜೂನ್ ಅವಧಿಯಲ್ಲಿ 23.9ರ ಋಣಾತ್ಮಕ ಕುಸಿತ ಕಾಣುವ ಮೂಲಕ ಮಹಾ ಆರ್ಥಿಕ ಕುಸಿತಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು ಅನುಭವಿಸುತ್ತಿದ್ದರೆ, ಭಾರತವು 2020 ರಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಸ್ಥಾನಮಾನವನ್ನು ಉಳಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಪಕ್ಷದ ಫೇಸ್‌ಬುಕ್‌ನಲ್ಲಿ ಆಗಸ್ಟ್ 23 ರಂದು ಪೋಸ್ಟ್ ಮಾಡಿದೆ. ಅದು ನಿಜವೇ?

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಪೋಸ್ಟ್‌ನಲ್ಲಿನ ಚಿತ್ರದಲ್ಲಿ ಮಾಹಿತಿ ಮೂಲ ಐಎಂಎಫ್ ಎಂದು ನಮೂದಿಸಿದೆ. ಅದರ ಆಧಾರದಲ್ಲಿ ಐಎಂಎಫ್‌ ಈ ಕುರಿತು ಹುಡುಕಿದಾಗ 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಿರುವ ವರ್ಲ್ಡ್ ಎಕಾನಾಮಿಕ್ ಔಟ್‌ಲುಕ್ ವರದಿ ಕಾಣುತ್ತದೆ. ಅದರಲ್ಲಿ ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ವಿಶ್ವದ ಹಲವು ಆರ್ಥಿಕತೆಗಳ ಬೆಳವಣಿಗೆ ದರವನ್ನು ಅಂದಾಜಿಸಲಾಗಿದೆ.

ಆದರೆ 2020ರ ಜೂನ್ ತಿಂಗಳಿನಲ್ಲಿ ಐಎಂಎಫ್ ಮತ್ತೊಂದು ವರದಿಯನ್ನು ಬಿಡುಗಡೆಗೊಳಿಸಿದೆ. ಆ ವರದಿಯಲ್ಲಿ 2020ರ ಭಾರತದ ಜಿಡಿಪಿ ಬೆಳವಣಿಗೆಯು -4.5 ಕ್ಕೆ ಕುಸಿದಿದ್ದು, ಚೀನಾ ಮಾತ್ರವೇ ಸಕರಾತ್ಮಕ (1.0) ಬೆಳವಣಿಗೆ ಹೊಂದಿದೆ ದೇಶವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿನ ಪ್ರತಿಪಾದನೆ ಹಿಂದಿನದೇ ಹೊರತು ಇತ್ತೀಚಿನದಲ್ಲ ಎಂದು ಹೇಳಬಹುದಾಗಿದೆ.

ಇನ್ನು ಬಿಜೆಪಿಯು ಆಗಸ್ಟ್ 23 ರಂದು ಈ ರೀತಿ ಭಾರತದ ಜಿಡಿಪಿ ಮಾತ್ರ ಸಕರಾತ್ಮಕವಾಗಿದೆ ಎಂದು ಪೋಸ್ಟ್ ಮಾಡಿದೆ. ಆದರೆ ಅದೇ ಆಗಸ್ಟ್ 31 ರಂದು ಅಂದರೆ ಒಂದು ವಾರದ ನಂತರ ಭಾರತದ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ 2021ರ ಮೊದಲ ತ್ರೈಮಾಸಿಕ ಏಪ್ರಿಲ್-ಜೂನ್ ಅವಧಿಯಲ್ಲಿ 23.9ರ ಋಣಾತ್ಮಕ ಕುಸಿತ ಕಾಣುವ ಮೂಲಕ ಮಹಾ ಆರ್ಥಿಕ ಕುಸಿತಕ್ಕೆ ಸಾಕ್ಷಿಯಾಗಿದೆ.

1996 ರಿಂದಲೂ ತ್ರೈಮಾಸಿಕ ಜಿಡಿಪಿ ಅಂಕಿಅಂಶ ಬಿಡುಗಡೆ ಮಾಡುತ್ತಿದ್ದರೂ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಜಿಡಿಪಿ ಕುಸಿತ ಕಂಡಿದೆ. ಈ ರೀತಿಯ ಕುಸಿತಕ್ಕೆ ಕೊರೊನಾ ಲಾಕ್‌ಡೌನ್‌ ಕಾರಣ ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಮೋದಿಯವರು ಕೈಗೊಂಡ ನೋಟು ಅಮಾನ್ಯೀಕರಣ, ಜಿಎಸ್‌ಟಿ ಸೇರಿದಂತೆ ಮುಂದಾಲೋಚನೆಯಿಲ್ಲದ ಕ್ರಮಗಳು ಹಾಗೂ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿರುವುದು ಇಂದಿನ ಮಹಾಕುಸಿತಕ್ಕೆ ಕಾರಣ ಎಂದು ದೂರಿದ್ದಾರೆ.

ಸಿಕ್ಕಿದ್ದೇಚಾನ್ಸ್ ಅಂತ ಎಲ್ಲವನ್ನೂ ಸೇರಿಸಿ ದೂಡಿದ್ದು!- – – – – – – – – – ಈವತ್ತು ಪತ್ರಿಕೆಗಳಲ್ಲಿ GDP ಕುಸಿತದ ವರದಿಯ “ಸ್ಪಿನ್”…

Posted by Rajaram Tallur on Monday, August 31, 2020

ಹಾಗಾಗಿ ಜಿಡಿಪಿ ಪಾತಾಳ ಸೇರುತ್ತಿದ್ದರೂ ಬಿಜೆಪಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ನಾವೇ ವಿಶ್ವಗುರು ಎಂದು ಹೇಳಿಕೊಳ್ಳುತ್ತಿರುವುದು ಸಂಪೂರ್ಣ ಸುಳ್ಳಾಗಿದೆ.


ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...