Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ...

FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

“ಕರ್ನಾಟಕದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಹೋದಾಗ, ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ (ಲುಂಗಿ) ಪಂಚೆಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋದ ಘಟನೆ ನಡೆದಿದೆ. ಈಗ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸಲು ಪಾರಂಭಿಸಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ಪ್ರತಿಪಾದಿಸಿ ಎಂದು ಬರೆದುಕೊಂಡು ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

29 ಸೆಕೆಂಡ್‌ಗಳ ಅವಧಿಯ ಈ ವಿಡಿಯೋದಲ್ಲಿ ಪ್ರತಿಭಟನಾಕಾರರ ಗುಂಪೊಂದು ನೀಲಿ ಬಣ್ಣದ ಧ್ವಜಗಳನ್ನು ಹಿಡಿದು, ಘೋಷಣೆ ಕೂಗುತ್ತಾ ಬಂದು ವೃತ್ತವೊಂದರ ಬಳಿ ಪ್ರತಿಕೃತಿಯನ್ನು ದಹಿಸಲು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲು ಮುಂದಾದಾಗ, ಪಂಚೆ ಮತ್ತು ಬಟ್ಟೆಗೆ ಬೆಂಕಿ ತಗುಲಿ ಎಲ್ಲರೂ ದಿಕ್ಕಾಪಾಲಾಗಿ ಓಡಿ ಹೋಗುವುದನ್ನು ನೋಡಬಹುದು.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವಿಡಿಯೋ ಸ್ಕ್ರೀನ್ ಶಾಟ್ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ನಾವು ಹುಡುಕಾಡಿದಾಗ ವೆಬ್‌ಸೈಟ್‌ ಒಂದರಲ್ಲಿ “KSU march at pathanamthitta, fire accident” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕಾಣಿಸಿಕೊಂಡಿದೆ.

“KSU march at pathanamthitta, fire accident” ಎಂಬುವುದನ್ನು ನಾವು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಮಲಯಾಳಂನ ಏಷ್ಯಾನೆಟ್ ನ್ಯೂಸ್ (Asianetnews)5 ಜುಲೈ 2012ರಂದು ‘Lucky Fire Escape for KSU workers in Pathanamthitta’ ಎಂಬ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ ಹೇಳುವಂತೆ ಕೇರಳದ ಕೊಟ್ಟಾಯಂನ ಮಹಾತ್ಮ ಗಾಂಧಿ (ಎಂಜಿ) ವಿಶ್ವ ವಿದ್ಯಾನಿಲಯದ ಉಪ ಕುಲಪತಿ ವಿರುದ್ದ ಭಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ಪತ್ತನಂತಿಟ್ಟ ಜಿಲ್ಲಾ ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯ ಕೊನೆಯಲ್ಲಿ ಪತ್ತನಂತಿಟ್ಟದ ಸೆಂಟ್ರಲ್‌ ಜಂಕ್ಷನ್‌ನಲ್ಲಿ ಎಂ.ಜಿ ವಿವಿ ಉಪಕುಲಪತಿಯ ಪ್ರತಿಕೃತಿ ದಹಿಸಲು ಪ್ರತಿಭಟನಾನಿರತರು ಮುಂದಾಗಿದ್ದರು. ಈ ವೇಳೆ ಅವರ ಪಂಚೆಗೆ ಬೆಂಕಿ ತಗುಲಿದೆ. ಆಗ ಅಪಾಯದಿಂದ ತಪ್ಪಿಸಿಕೊಳ್ಳಲು ಅವರು ದಿಕ್ಕಾಪಾಲಾಗಿ ಓಡಿದ್ಧಾರೆ. ಕೆಲವರು ಪ್ರಾಣ ರಕ್ಷಣೆಗಾಗಿ ಬೆಂಕಿ ತಗುಲಿದ್ದ ತಮ್ಮ ಪಂಚೆ ಬಿಟ್ಟು ಓಡಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಜುಲೈ 24, 2012ರಂದು ಟೈಮ್ಸ್ ಆಫ್ ಇಂಡಿಯಾ “Petion Seeks statewide ban on effigy burning” ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ಈ ಸುದ್ದಿಯಲ್ಲಿ ಪ್ರತಿಭಟನೆಗಳ ವೇಳೆ ಪ್ರತಿಕೃತಿ ದಹಿಸುವುದಕ್ಕೆ ನಿಷೇಧ ಹೇರುವಂತೆ ಕೋರಿ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರ ಬಗ್ಗೆ ತಿಳಿಸಲಾಗಿತ್ತು. ಸುದ್ದಿಯಲ್ಲಿ ನಾವು ಮೇಲೆ ಉಲ್ಲೇಖಿಸಿದ ಪತ್ತನಂತಿಟ್ಟದ ಲುಂಗಿಗೆ ಬೆಂಕಿ ತಗುಲಿದೆ ಘಟನೆಯನ್ನು ಉಲ್ಲೇಖಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಕರ್ನಾಟಕದಲ್ಲಿ ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸುವಾಗ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಸುಳ್ಳು. ಕರ್ನಾಟಕದಲ್ಲಿ ಆ ರೀತಿಯ ಘಟನೆ ನಡೆದ ಬಗ್ಗೆ ಎಲ್ಲೂ ವರದಿಯಾಗಿಲ್ಲ.

ಇದನ್ನೂ ಓದಿ : FACT CHECK : ಹಿಂದೂಗಳ ಸಂಪತ್ತನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...