Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ...

FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

“ಕರ್ನಾಟಕದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಹೋದಾಗ, ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ (ಲುಂಗಿ) ಪಂಚೆಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋದ ಘಟನೆ ನಡೆದಿದೆ. ಈಗ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸಲು ಪಾರಂಭಿಸಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ಪ್ರತಿಪಾದಿಸಿ ಎಂದು ಬರೆದುಕೊಂಡು ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

29 ಸೆಕೆಂಡ್‌ಗಳ ಅವಧಿಯ ಈ ವಿಡಿಯೋದಲ್ಲಿ ಪ್ರತಿಭಟನಾಕಾರರ ಗುಂಪೊಂದು ನೀಲಿ ಬಣ್ಣದ ಧ್ವಜಗಳನ್ನು ಹಿಡಿದು, ಘೋಷಣೆ ಕೂಗುತ್ತಾ ಬಂದು ವೃತ್ತವೊಂದರ ಬಳಿ ಪ್ರತಿಕೃತಿಯನ್ನು ದಹಿಸಲು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲು ಮುಂದಾದಾಗ, ಪಂಚೆ ಮತ್ತು ಬಟ್ಟೆಗೆ ಬೆಂಕಿ ತಗುಲಿ ಎಲ್ಲರೂ ದಿಕ್ಕಾಪಾಲಾಗಿ ಓಡಿ ಹೋಗುವುದನ್ನು ನೋಡಬಹುದು.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವಿಡಿಯೋ ಸ್ಕ್ರೀನ್ ಶಾಟ್ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ನಾವು ಹುಡುಕಾಡಿದಾಗ ವೆಬ್‌ಸೈಟ್‌ ಒಂದರಲ್ಲಿ “KSU march at pathanamthitta, fire accident” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕಾಣಿಸಿಕೊಂಡಿದೆ.

“KSU march at pathanamthitta, fire accident” ಎಂಬುವುದನ್ನು ನಾವು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಮಲಯಾಳಂನ ಏಷ್ಯಾನೆಟ್ ನ್ಯೂಸ್ (Asianetnews)5 ಜುಲೈ 2012ರಂದು ‘Lucky Fire Escape for KSU workers in Pathanamthitta’ ಎಂಬ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ ಹೇಳುವಂತೆ ಕೇರಳದ ಕೊಟ್ಟಾಯಂನ ಮಹಾತ್ಮ ಗಾಂಧಿ (ಎಂಜಿ) ವಿಶ್ವ ವಿದ್ಯಾನಿಲಯದ ಉಪ ಕುಲಪತಿ ವಿರುದ್ದ ಭಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ಪತ್ತನಂತಿಟ್ಟ ಜಿಲ್ಲಾ ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯ ಕೊನೆಯಲ್ಲಿ ಪತ್ತನಂತಿಟ್ಟದ ಸೆಂಟ್ರಲ್‌ ಜಂಕ್ಷನ್‌ನಲ್ಲಿ ಎಂ.ಜಿ ವಿವಿ ಉಪಕುಲಪತಿಯ ಪ್ರತಿಕೃತಿ ದಹಿಸಲು ಪ್ರತಿಭಟನಾನಿರತರು ಮುಂದಾಗಿದ್ದರು. ಈ ವೇಳೆ ಅವರ ಪಂಚೆಗೆ ಬೆಂಕಿ ತಗುಲಿದೆ. ಆಗ ಅಪಾಯದಿಂದ ತಪ್ಪಿಸಿಕೊಳ್ಳಲು ಅವರು ದಿಕ್ಕಾಪಾಲಾಗಿ ಓಡಿದ್ಧಾರೆ. ಕೆಲವರು ಪ್ರಾಣ ರಕ್ಷಣೆಗಾಗಿ ಬೆಂಕಿ ತಗುಲಿದ್ದ ತಮ್ಮ ಪಂಚೆ ಬಿಟ್ಟು ಓಡಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಜುಲೈ 24, 2012ರಂದು ಟೈಮ್ಸ್ ಆಫ್ ಇಂಡಿಯಾ “Petion Seeks statewide ban on effigy burning” ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ಈ ಸುದ್ದಿಯಲ್ಲಿ ಪ್ರತಿಭಟನೆಗಳ ವೇಳೆ ಪ್ರತಿಕೃತಿ ದಹಿಸುವುದಕ್ಕೆ ನಿಷೇಧ ಹೇರುವಂತೆ ಕೋರಿ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರ ಬಗ್ಗೆ ತಿಳಿಸಲಾಗಿತ್ತು. ಸುದ್ದಿಯಲ್ಲಿ ನಾವು ಮೇಲೆ ಉಲ್ಲೇಖಿಸಿದ ಪತ್ತನಂತಿಟ್ಟದ ಲುಂಗಿಗೆ ಬೆಂಕಿ ತಗುಲಿದೆ ಘಟನೆಯನ್ನು ಉಲ್ಲೇಖಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಕರ್ನಾಟಕದಲ್ಲಿ ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸುವಾಗ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಸುಳ್ಳು. ಕರ್ನಾಟಕದಲ್ಲಿ ಆ ರೀತಿಯ ಘಟನೆ ನಡೆದ ಬಗ್ಗೆ ಎಲ್ಲೂ ವರದಿಯಾಗಿಲ್ಲ.

ಇದನ್ನೂ ಓದಿ : FACT CHECK : ಹಿಂದೂಗಳ ಸಂಪತ್ತನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...