Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

- Advertisement -
- Advertisement -

‘ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನನನ್ನು ಜಿಹಾದಿ ಎಂದು ಘೋಷಿಸಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರನಲ್ಲ’ ಎಂದು ಹೇಳಿದೆ ಎಂದು ಬರೆಯಲಾಗಿರುವ ಪೋಸ್ಟ್‌ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಪೋಸ್ಟ್‌ನಲ್ಲಿ ‘ಟಿಪ್ಪು ಸುಲ್ತಾನ್ ಹಿಂದೂಗಳನ್ನು ಹತ್ಯೆಗೈದ, ಅತ್ಯಾಚಾರ ಮಾಡಿದ, ಮತ್ತು ಮತಾಂತರ ಮಾಡುತ್ತಿದ್ದ’ ಎಂದು ಕೂಡ ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಅವರು ಹೇಳಿದ್ದಾರೆ’ ಎಂದು ಬರೆಯಲಾಗಿದೆ. ಪೋಸ್ಟ್‌ನಲ್ಲಿನ ಪ್ರತಿಪಾದನೆ ನಿಜವೆ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ಟಿಪ್ಪು ಸುಲ್ತಾನ್ ಜಿಹಾದಿ, ಅವರು ಹತ್ಯಾಕಾಂಡ, ಅತ್ಯಾಚಾರ ಮತ್ತು ಹಿಂದೂಗಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿದ್ದರು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಫ್ಯಾಕ್ಟ್‌ಚೆಕ್

ದಕ್ಷಿಣ ಕೊಡಗು ಮೂಲದ ಕೆ ಪಿ ಮಂಜುನಾಥ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ್ದ ಹೈಕೋರ್ಟ್‌, 2016ರಲ್ಲಿ ಟಿಪ್ಪು ಜಯಂತಿಯನ್ನು ಆಚರಿಸುವ ಕರ್ನಾಟಕ ಸರ್ಕಾರದ ಕ್ರಮದ ಬಗ್ಗೆ ಉತ್ತರ ಕೇಳಿತ್ತು. ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ಆಚರಿಸುವುದರ ಹಿಂದಿನ ರಾಜ್ಯ ಸರ್ಕಾರದ ತರ್ಕವೇನು ಎಂದು ಕೇಳಿತ್ತು. ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ, ‘ಟಿಪ್ಪು ಒಬ್ಬ ಸ್ವಾತಂತ್ರ್ಯ ಹೋರಾಟಗಾರನಲ್ಲ, ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಎದುರಾಳಿಗಳ ವಿರುದ್ಧ ಹೋರಾಡಿದ ರಾಜ’ ಎಂದು ಗಮನ ಸೆಳೆದಿದ್ದರು.

ಆದಾಗ್ಯೂ, 03 ನವೆಂಬರ್ 2016ರಂದು ಪ್ರಕರಣದ ಎರಡೂ ಕಡೆಯ ವಾದವನ್ನು ಆಲಿಸಿದ ನಂತರ, ಅರ್ಜಿದಾರರು ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗಳ ವಿರುದ್ಧ ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಲು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪ್ರಾತಿನಿಧ್ಯ ನೀಡುವಂತೆ ಸೂಚಿಸುವ ಮೂಲಕ ಅರ್ಜಿಯನ್ನು ವಜಾಗೊಳಿಸಿತ್ತು. ನ್ಯಾಯಾಲಯವು ಈ ತೀರ್ಪಿನಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳು ಪೋಸ್ಟ್‌ನಲ್ಲಿ ಆರೋಪಿಸಲಾಗಿರುವಂತೆ ಟಿಪ್ಪುವಿನ ವಿರುದ್ಧ ಯಾವುದೇ ಟೀಕೆಗಳನ್ನು ಮಾಡಿಲ್ಲ.

ಆ ವರ್ಷ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಸರ್ಕಾರ ಮುಂದಾಗಿತ್ತು. ಟಿಪ್ಪು ಸುಲ್ತಾನ್ 1785ರಲ್ಲಿ ತಮ್ಮ ಪೂರ್ವಜರನ್ನು ಕೊಂದರು ಎಂದು ಕೊಡಗು ಜನರು ನಂಬಿದ್ದಾರೆ. ಹೀಗಾಗಿ, ಈ ಕಾರ್ಯಕ್ರಮಗಳು ಸ್ಥಳೀಯ ಕೊಡಗು ಜನರನ್ನು ಕೆರಳಿಸಿತ್ತು. ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2015ರಲ್ಲಿ ಟಿಪ್ಪು ಸುಲ್ತಾನ್ ಜನ್ಮದಿನವನ್ನು ಆಚರಿಸುವುದಾಗಿ ಘೋಷಿಸಿದಾಗಿನಿಂದ ಪ್ರತಿ ನವೆಂಬರ್‌ನಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

 

ಆದಾಗ್ಯೂ ಜುಲೈ 2019ರಲ್ಲಿ, ಆಗ ಹೊಸದಾಗಿ ರಚನೆಯಾದ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿದೆ. ಅದರಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಪೋಸ್ಟ್‌ನಲ್ಲಿ ಹೇಳಿರುವಂತೆ ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್ ಅವರನ್ನು ಜಿಹಾದಿ ಅಥವಾ ಅತ್ಯಾಚಾರಿ ಎಂದು ಕರೆದಿಲ್ಲ. ಆದರೆ ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ ಅಷ್ಟೇ.


ಇದನ್ನೂ ಓದಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...