Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯ ದಿನವಾದ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳದ ಕಮ್ಯುನಿಸ್ಟ್ ಸರ್ಕಾರ ನಿರ್ಧರಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಬ್ಬಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭವನ್ನು ಜನರು ನೋಡದಂತೆ ತಡೆಯಲು ಕೇರಳ ಸರ್ಕಾರ ಹುನ್ನಾರ ಮಾಡಿದೆ ಎಂಬ ಅರ್ಥದಲ್ಲಿ ಸುದ್ದಿ ಹಂಚಿಕೊಳ್ಳಲಾಗ್ತಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಜನವರಿ 22ರಂದು ಕೇರಳ ಶಾಲಾ ಶಿಕ್ಷಕರ ಸಂಘದ (ಕೆಎಸ್‌ಟಿಎ) ಎರ್ನಾಕುಲಂ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ ಕೆ ಬಿಜು ‘ಜನವರಿಯಲ್ಲಿ ಟಿವಿ ಆನ್ ಮಾಡಬೇಡಿ’ ಎಂದು ಹೇಳಿದ್ದರು. ಆ ಬಳಿಕ ಈ ರೀತಿಯ ಸುದ್ದಿ ಹಂಚಿಕೊಳ್ಳಲಾಗ್ತಿದೆ ಎಂದು ನ್ಯೂಸ್ ಚೆಕ್ಕರ್ ಡಾಟ್ ಇನ್ ಎಂಬ ವೆಬ್‌ಸೈಟ್ ತಿಳಿಸಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಕೇರಳ ರಾಜ್ಯ ವಿದ್ಯುತ್ ಮಂಡಳಿ (ಕೆಎಸ್‌ಇಬಿ) ಜನವರಿ 22ರಂದು ಪ್ರಮುಖ ನಿರ್ವಹಣಾ ಕಾರ್ಯ ಕೈಗೊಂಡಿದೆ. ಈ ಕಾರಣದಿಂದ ರಾಜ್ಯಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಸುದ್ದಿಯಾಗಿದೆ.

ವಾಸ್ತವ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿದುಕೊಳ್ಳಲು ನಾನು ಗೌರಿ.ಕಾಂ “Electricity supply will remain closed in entire Kerala on January 22” ಎಂದು ಗೂಗಲ್‌ನಲ್ಲಿ ಕೀ ವರ್ಡ್‌ ಸರ್ಚ್ ಮಾಡಿದೆ. ಈ ವೇಳೆ ಕೇರಳ ಸರ್ಕಾರ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ನಿರ್ಧರಿಸಿದೆ ಎಂಬುವುದರ ಕುರಿತು ಯಾವುದೇ ಮುಖ್ಯ ವಾಹಿನಿ ಮಾಧ್ಯಮ ವರದಿಗಳು ದೊರೆತಿಲ್ಲ.

ಬಲಪಂಥೀಯ ಡಿಜಿಟಲ್ ಮಾಧ್ಯಮಗಳಾದ Opindia (ಓಪ್ ಇಂಡಿಯಾ), Organiser (ಆರ್ಗನೈಸರ್) ಜನವರಿ 22ರಂದು ಟಿವಿ ಆನ್‌ ಮಾಡಬೇಡಿ ಎಂದು ಪಿಕೆ ಬಿಜು ಅವರು ಹೇಳಿರುವುದಾಗಿ ಸುದ್ದಿ ಪ್ರಕಟಿಸಿವೆ. ಅವುಗಳು ಕೂಡ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತವಾಗಲಿದೆ ಎಂದು ಸ್ಪಷ್ಟವಾಗಿ ಹೇಳಿಲ್ಲ.

ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಜನವರಿ 22ರಂದು ವಿದ್ಯುತ್ ಕಡಿತದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.

ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆ ಲಿಂಕ್ 

“ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಸಾಮಾಜಿಕ ಮಾಧ್ಯಮ ತಂಡವನ್ನು ಸಂಪರ್ಕಿಸಿದ್ದೇವೆ. ಅವರು ಜನವರಿ 22ರಂದು ವಿದ್ಯುತ್ ಕಡಿತವಾಗಲಿದೆ ಎಂಬುವುದನ್ನು ನಿರಾಕರಿಸಿದ್ದಾರೆ. ಅಂದು ಯಾವುದೇ ನಿರ್ವಹಣಾ ಕಾರ್ಯ ಕೈಗೊಂಡಿಲ್ಲ ಎಂದು ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ” ಎಂದು ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ನ್ಯೂಸ್ ಚೆಕ್ಕರ್ ಡಾಟ್ ಇನ್ ತಿಳಿಸಿದೆ.

ನಾವು ಕೇರಳ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಪಿ ಎಂ ಮನೋಜ್ ಅವರನ್ನೂ ಸಂಪರ್ಕಿಸಿದ್ದೇವೆ. ಅವರೂ ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ ಎಂದು ನ್ಯೂಸ್ ಚೆಕ್ಕರ್ ಹೇಳಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಒಟ್ಟಿನಲ್ಲಿ, ಲಭ್ಯವಾದ ಮೂಲಗಳನ್ನು ಬಳಸಿಕೊಂಡು ನಾನುಗೌರಿ.ಕಾಂ ನಡೆಸಿದ ಪರಿಶೀಲನೆಯ ಪ್ರಕಾರ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆಯ ದಿನ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆ ಎಂಬ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...