Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯ ದಿನವಾದ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳದ ಕಮ್ಯುನಿಸ್ಟ್ ಸರ್ಕಾರ ನಿರ್ಧರಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಬ್ಬಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭವನ್ನು ಜನರು ನೋಡದಂತೆ ತಡೆಯಲು ಕೇರಳ ಸರ್ಕಾರ ಹುನ್ನಾರ ಮಾಡಿದೆ ಎಂಬ ಅರ್ಥದಲ್ಲಿ ಸುದ್ದಿ ಹಂಚಿಕೊಳ್ಳಲಾಗ್ತಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಜನವರಿ 22ರಂದು ಕೇರಳ ಶಾಲಾ ಶಿಕ್ಷಕರ ಸಂಘದ (ಕೆಎಸ್‌ಟಿಎ) ಎರ್ನಾಕುಲಂ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ ಕೆ ಬಿಜು ‘ಜನವರಿಯಲ್ಲಿ ಟಿವಿ ಆನ್ ಮಾಡಬೇಡಿ’ ಎಂದು ಹೇಳಿದ್ದರು. ಆ ಬಳಿಕ ಈ ರೀತಿಯ ಸುದ್ದಿ ಹಂಚಿಕೊಳ್ಳಲಾಗ್ತಿದೆ ಎಂದು ನ್ಯೂಸ್ ಚೆಕ್ಕರ್ ಡಾಟ್ ಇನ್ ಎಂಬ ವೆಬ್‌ಸೈಟ್ ತಿಳಿಸಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಕೇರಳ ರಾಜ್ಯ ವಿದ್ಯುತ್ ಮಂಡಳಿ (ಕೆಎಸ್‌ಇಬಿ) ಜನವರಿ 22ರಂದು ಪ್ರಮುಖ ನಿರ್ವಹಣಾ ಕಾರ್ಯ ಕೈಗೊಂಡಿದೆ. ಈ ಕಾರಣದಿಂದ ರಾಜ್ಯಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಸುದ್ದಿಯಾಗಿದೆ.

ವಾಸ್ತವ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿದುಕೊಳ್ಳಲು ನಾನು ಗೌರಿ.ಕಾಂ “Electricity supply will remain closed in entire Kerala on January 22” ಎಂದು ಗೂಗಲ್‌ನಲ್ಲಿ ಕೀ ವರ್ಡ್‌ ಸರ್ಚ್ ಮಾಡಿದೆ. ಈ ವೇಳೆ ಕೇರಳ ಸರ್ಕಾರ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ನಿರ್ಧರಿಸಿದೆ ಎಂಬುವುದರ ಕುರಿತು ಯಾವುದೇ ಮುಖ್ಯ ವಾಹಿನಿ ಮಾಧ್ಯಮ ವರದಿಗಳು ದೊರೆತಿಲ್ಲ.

ಬಲಪಂಥೀಯ ಡಿಜಿಟಲ್ ಮಾಧ್ಯಮಗಳಾದ Opindia (ಓಪ್ ಇಂಡಿಯಾ), Organiser (ಆರ್ಗನೈಸರ್) ಜನವರಿ 22ರಂದು ಟಿವಿ ಆನ್‌ ಮಾಡಬೇಡಿ ಎಂದು ಪಿಕೆ ಬಿಜು ಅವರು ಹೇಳಿರುವುದಾಗಿ ಸುದ್ದಿ ಪ್ರಕಟಿಸಿವೆ. ಅವುಗಳು ಕೂಡ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತವಾಗಲಿದೆ ಎಂದು ಸ್ಪಷ್ಟವಾಗಿ ಹೇಳಿಲ್ಲ.

ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಜನವರಿ 22ರಂದು ವಿದ್ಯುತ್ ಕಡಿತದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.

ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆ ಲಿಂಕ್ 

“ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಸಾಮಾಜಿಕ ಮಾಧ್ಯಮ ತಂಡವನ್ನು ಸಂಪರ್ಕಿಸಿದ್ದೇವೆ. ಅವರು ಜನವರಿ 22ರಂದು ವಿದ್ಯುತ್ ಕಡಿತವಾಗಲಿದೆ ಎಂಬುವುದನ್ನು ನಿರಾಕರಿಸಿದ್ದಾರೆ. ಅಂದು ಯಾವುದೇ ನಿರ್ವಹಣಾ ಕಾರ್ಯ ಕೈಗೊಂಡಿಲ್ಲ ಎಂದು ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ” ಎಂದು ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ನ್ಯೂಸ್ ಚೆಕ್ಕರ್ ಡಾಟ್ ಇನ್ ತಿಳಿಸಿದೆ.

ನಾವು ಕೇರಳ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಪಿ ಎಂ ಮನೋಜ್ ಅವರನ್ನೂ ಸಂಪರ್ಕಿಸಿದ್ದೇವೆ. ಅವರೂ ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ ಎಂದು ನ್ಯೂಸ್ ಚೆಕ್ಕರ್ ಹೇಳಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಒಟ್ಟಿನಲ್ಲಿ, ಲಭ್ಯವಾದ ಮೂಲಗಳನ್ನು ಬಳಸಿಕೊಂಡು ನಾನುಗೌರಿ.ಕಾಂ ನಡೆಸಿದ ಪರಿಶೀಲನೆಯ ಪ್ರಕಾರ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆಯ ದಿನ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆ ಎಂಬ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...