Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯ ದಿನವಾದ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳದ ಕಮ್ಯುನಿಸ್ಟ್ ಸರ್ಕಾರ ನಿರ್ಧರಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಬ್ಬಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭವನ್ನು ಜನರು ನೋಡದಂತೆ ತಡೆಯಲು ಕೇರಳ ಸರ್ಕಾರ ಹುನ್ನಾರ ಮಾಡಿದೆ ಎಂಬ ಅರ್ಥದಲ್ಲಿ ಸುದ್ದಿ ಹಂಚಿಕೊಳ್ಳಲಾಗ್ತಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಜನವರಿ 22ರಂದು ಕೇರಳ ಶಾಲಾ ಶಿಕ್ಷಕರ ಸಂಘದ (ಕೆಎಸ್‌ಟಿಎ) ಎರ್ನಾಕುಲಂ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ ಕೆ ಬಿಜು ‘ಜನವರಿಯಲ್ಲಿ ಟಿವಿ ಆನ್ ಮಾಡಬೇಡಿ’ ಎಂದು ಹೇಳಿದ್ದರು. ಆ ಬಳಿಕ ಈ ರೀತಿಯ ಸುದ್ದಿ ಹಂಚಿಕೊಳ್ಳಲಾಗ್ತಿದೆ ಎಂದು ನ್ಯೂಸ್ ಚೆಕ್ಕರ್ ಡಾಟ್ ಇನ್ ಎಂಬ ವೆಬ್‌ಸೈಟ್ ತಿಳಿಸಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಕೇರಳ ರಾಜ್ಯ ವಿದ್ಯುತ್ ಮಂಡಳಿ (ಕೆಎಸ್‌ಇಬಿ) ಜನವರಿ 22ರಂದು ಪ್ರಮುಖ ನಿರ್ವಹಣಾ ಕಾರ್ಯ ಕೈಗೊಂಡಿದೆ. ಈ ಕಾರಣದಿಂದ ರಾಜ್ಯಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಸುದ್ದಿಯಾಗಿದೆ.

ವಾಸ್ತವ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿದುಕೊಳ್ಳಲು ನಾನು ಗೌರಿ.ಕಾಂ “Electricity supply will remain closed in entire Kerala on January 22” ಎಂದು ಗೂಗಲ್‌ನಲ್ಲಿ ಕೀ ವರ್ಡ್‌ ಸರ್ಚ್ ಮಾಡಿದೆ. ಈ ವೇಳೆ ಕೇರಳ ಸರ್ಕಾರ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ನಿರ್ಧರಿಸಿದೆ ಎಂಬುವುದರ ಕುರಿತು ಯಾವುದೇ ಮುಖ್ಯ ವಾಹಿನಿ ಮಾಧ್ಯಮ ವರದಿಗಳು ದೊರೆತಿಲ್ಲ.

ಬಲಪಂಥೀಯ ಡಿಜಿಟಲ್ ಮಾಧ್ಯಮಗಳಾದ Opindia (ಓಪ್ ಇಂಡಿಯಾ), Organiser (ಆರ್ಗನೈಸರ್) ಜನವರಿ 22ರಂದು ಟಿವಿ ಆನ್‌ ಮಾಡಬೇಡಿ ಎಂದು ಪಿಕೆ ಬಿಜು ಅವರು ಹೇಳಿರುವುದಾಗಿ ಸುದ್ದಿ ಪ್ರಕಟಿಸಿವೆ. ಅವುಗಳು ಕೂಡ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತವಾಗಲಿದೆ ಎಂದು ಸ್ಪಷ್ಟವಾಗಿ ಹೇಳಿಲ್ಲ.

ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಜನವರಿ 22ರಂದು ವಿದ್ಯುತ್ ಕಡಿತದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.

ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆ ಲಿಂಕ್ 

“ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಸಾಮಾಜಿಕ ಮಾಧ್ಯಮ ತಂಡವನ್ನು ಸಂಪರ್ಕಿಸಿದ್ದೇವೆ. ಅವರು ಜನವರಿ 22ರಂದು ವಿದ್ಯುತ್ ಕಡಿತವಾಗಲಿದೆ ಎಂಬುವುದನ್ನು ನಿರಾಕರಿಸಿದ್ದಾರೆ. ಅಂದು ಯಾವುದೇ ನಿರ್ವಹಣಾ ಕಾರ್ಯ ಕೈಗೊಂಡಿಲ್ಲ ಎಂದು ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ” ಎಂದು ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ನ್ಯೂಸ್ ಚೆಕ್ಕರ್ ಡಾಟ್ ಇನ್ ತಿಳಿಸಿದೆ.

ನಾವು ಕೇರಳ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಪಿ ಎಂ ಮನೋಜ್ ಅವರನ್ನೂ ಸಂಪರ್ಕಿಸಿದ್ದೇವೆ. ಅವರೂ ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ ಎಂದು ನ್ಯೂಸ್ ಚೆಕ್ಕರ್ ಹೇಳಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಒಟ್ಟಿನಲ್ಲಿ, ಲಭ್ಯವಾದ ಮೂಲಗಳನ್ನು ಬಳಸಿಕೊಂಡು ನಾನುಗೌರಿ.ಕಾಂ ನಡೆಸಿದ ಪರಿಶೀಲನೆಯ ಪ್ರಕಾರ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆಯ ದಿನ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆ ಎಂಬ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...