Homeಫ್ಯಾಕ್ಟ್‌ಚೆಕ್FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು...

FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಯ ಫಲಾನುಭವಿಗಳು ಎಂದು ಪತ್ರಿಕೆಯಲ್ಲಿ ಜಾಹೀರಾತಿನ ರೂಪದಲ್ಲಿ ಪ್ರಕಟಗೊಂಡ ವಿದ್ಯಾರ್ಥಿಗಳ ಫೋಟೋವನ್ನು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದಾರೆ.

Bharathiya Citizen(@LawAcademics)  ಎಂಬ ಎಕ್ಸ್‌ ಬಳಕೆದಾರರು ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದು, “ಫೋಟೋದಲ್ಲಿರುವುದು ನೀಟ್ ಪ್ರವೇಶ ಪ್ರಶ್ನೆ ಪತ್ರಿಕೆ ಸೋರಿಕೆ ಫಲಾನುಭವಿಗಳು. ಇವರು ಯಾವ ಧರ್ಮದವರು ಎಂದು ಸುಮ್ನೆ ನೋಡಿ. ಎಲ್ಲರೂ ಮುಸ್ಲಿಮರು” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಮತ್ತು ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ (@sureshchavhanke)ಕೂಡ ಪತ್ರಿಕೆಯ ಜಾಹೀರಾತಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು” ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು/ಟಾಪರ್‌ಗಳ ಪಟ್ಟಿಯಲ್ಲಿರುವ ಫೋಟೋಗಳನ್ನು ನೋಡಿ. ನೀವು ಇದನ್ನು ಪರೀಕ್ಷಾ ಜಿಹಾದ್ ಎಂದೂ ಕರೆಯಬಹುದು” ಎಂದು ಬರೆದುಕೊಂಡಿದ್ದಾರೆ.

ತನ್ನನ್ನು ತಾನು ಇಂಜಿನಿಯರ್, ವಕೀಲ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿರುವ ಎಕ್ಸ್‌ ಪ್ರೀಮಿಯಂ ಬಳಕೆದಾರ ANUPAM MISHRA(@scribe9104)ಮೇಲೆ ಇಬ್ಬರು ಮಾಡಿದಂತೆ ಆರೋಪಿಸಿ ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ 2.67 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 4,900 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ಇನ್ನೂ ಅನೇಕರು ಇದೇ ರೀತಿಯ ಆರೋಪಗಳನ್ನು ಮಾಡಿ ಪತ್ರಿಕೆಯ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪತ್ರಿಕಾ ಜಾಹೀರಾತಿನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ನೀಟ್ ಟಾಪರ್‌ಗಳಿಗೆ ಅಭಿನಂದನೆ ಕೋರಿ ಕೇರಳದ ಕೋಚಿಂಗ್ ಸೆಂಟರ್‌ ಒಂದು ನೀಡಿರುವ ಜಾಹೀರಾತಿನ ಫೋಟೋ ಎಂದು ತಿಳಿದು ಬಂದಿದೆ.

ಜಾಹೀರಾತಿನಲ್ಲಿ ಹೆಚ್ಚಾಗಿ ಮುಸ್ಲಿಂ ವಿದ್ಯಾರ್ಥಿಗಳ ಫೋಟೋ, ಹೆಸರು ಇರುವುದರಿಂದ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, “ನೀಟ್ ಪ್ರಶ್ನೆ ಪತ್ರಿಕೆಯ ಫಲಾನುಭವಿಗಳು ಇವರೇ” ಎಂಬ ರೀತಿಯಲ್ಲಿ ಕೋಮು ದ್ವೇಷದ, ಸುಳ್ಳು ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

@LawAcademics ಹಾಕಿರುವ ಪೋಸ್ಟ್ ಅನ್ನು ಕೇರಳ ಪೊಲೀಸರಿಗೆ ಟ್ಯಾಗ್ ಮಾಡಿರುವ زماں(@Delhiite) ಎಂಬ ಬಳಕೆದಾರ” ಕೇರಳ ಪೊಲೀಸರೇ ನೋಡಿ, ಈ ಬಳಕೆದಾರ ನಿಮ್ಮ ರಾಜ್ಯವನ್ನು ಅವಮಾನಿಸುತ್ತಿದ್ದಾರೆ ಎಂದಿದ್ದಾರೆ.

“ಇದು ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ ನೀಡಿರುವ ಪತ್ರಿಕಾ ಜಾಹೀರಾತಾಗಿದೆ. ಪ್ರತಿ ವರ್ಷವೂ ಈ ಸಂಸ್ಥೆಯಿಂದ ವಿದ್ಯಾರ್ಥಿಗಳು ನೀಟ್‌ ಮತ್ತು ಜೆಇಇಯಲ್ಲಿ ಆಯ್ಕೆಯಾಗುತ್ತಿದ್ದಾರೆ. ನೀವು ಮೋದಿಯನ್ನು ಆಯ್ಕೆ ಮಾಡಿದ್ದೀರಿ, ಅವರು ಅಧ್ಯಯನವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಮತ್ಸರ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ಗೂ ಟ್ಯಾಗ್‌ ಮಾಡಿ “ನೋಡಿ ನಿಮ್ಮ ಸಂಸ್ಥೆಯನ್ನು ಅವಮಾನಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿ” ಎಂದು ಕೋರಿದ್ದಾರೆ.

ನಾವು ಪತ್ರಿಕಾ ಜಾಹೀರಾತಿನ ಮೂಲ ಪ್ರತಿ ಹುಡುಕಿದಾಗ ಮಾತೃಭೂಮಿ ಪತ್ರಿಕೆಯ ತಿರುವನಂತಪುರ ಆವೃತ್ತಿಯಲ್ಲಿ ಜಾಹೀರಾತು ಪ್ರಕಟಿಸಿರುವುದು ಕಂಡು ಬಂದಿದೆ. ಅದರ ಕೆಳಭಾಗದಲ್ಲಿ ‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಕೋಟಕಲ್’ ಎಂಬ ಉಲ್ಲೇಖವನ್ನು ನೋಡಬಹುದು. ಮೇಲ್ಭಾಗದಲ್ಲಿ, “ಕೊಟ್ಟಕಲ್ ಯೂನಿವರ್ಸಲ್ ಇನ್ಸ್ಟಿಟ್ಯೂಟ್ ರಜತ ಮಹೋತ್ಸವದ ಸಂದರ್ಭದಲ್ಲಿ ಕೇರಳದಲ್ಲಿ ಹೊಸ ಅಲೆ ಸೃಷ್ಟಿಸಿದೆ” ಎಂದು ಹೇಳಲಾಗಿದೆ.

‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್’ ನ ವೆಬ್‌ಸೈಟ್‌ನಲ್ಲೂ ನಾವು ಆ ಜಾಹೀರಾತನ್ನು ನೋಡಬಹುದು.

ಮಾತೃಭೂಮಿ ಪತ್ರಿಕೆಯ ಈ ಪೇಪರ್‌ನಲ್ಲೂ ಜಾಹೀರಾತು ಇದೆ. ಅದರ ಲಿಂಕ್ ಇಲ್ಲಿದೆ.

“ಯೂನಿರ್ವಸಲ್ ಇನ್‌ಸ್ಟಿಟ್ಯೂಟ್‌ನ ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಹಮೀದ್ ಅವರನ್ನು ನಾವು ಸಂಪರ್ಕಕಿಸಿದ್ದೇವೆ. ಈ ವೇಳೆ ಕೋಚಿಂಗ್ ಸೆಂಟರ್‌ನಿಂದ ನೀಟ್-2024 ಟಾಪರ್‌ಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಜಾಹೀರಾತಿನಲ್ಲಿ ಬಹುಪಾಲು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಇರಲು ಕಾರಣ “ಈ ಸಂಸ್ಥೆಯು ಮುಸ್ಲಿಂ ಬಾಹುಳ್ಯದ ಮಲಬಾರ್ ಪ್ರದೇಶದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಸಮುದಾಯಗಳ ವಿದ್ಯಾರ್ಥಿಗಳೂ ಕೂಟ ಟಾಪರ್‌ಗಳ ಪಟ್ಟಿಯಲ್ಲಿ ಇರುವುದನ್ನು ಅವರು ಎತ್ತಿ ತೋರಿಸಿದ್ದಾರೆ” ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ಪತ್ರಿಕೆಯ ಜಾಹೀರಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇರಳ ಪೊಲೀಸರಿಗೆ ದೂರು ನೀಡಿರುವುದಾಗಿ ಹಮೀದ್ ಹೇಳಿದ್ದಾರೆ ಎಂದಿದೆ.

ಒಟ್ಟಿನಲ್ಲಿ ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಈ ವರ್ಷದ ನೀಟ್ ಟಾಪರ್‌ಗಳಿಗೆ ಅಭಿನಂದನೆ ಸಲ್ಲಿಸಿ ಮಾತೃಭೂಮಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಅದರಲ್ಲಿ ಹೆಚ್ಚಿನವರು ಮುಸ್ಲಿಂ ವಿದ್ಯಾರ್ಥಿಗಳು ಇರುವುದನ್ನು ಗಮನಿಸಿದ ಕೋಮುವಾದಿಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಿಂದಲೇ ಇಷ್ಟು ಮಂದಿ ಟಾಪರ್‌ಗಳಾಗಿದ್ದಾರೆ ಎಂದು ಶಿಕ್ಷಣದ ವಿಷಯದಲ್ಲಿ ದ್ವೇಷ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಸಂಸತ್ ಅಧಿವೇಶನದ ವೇಳೆ ಟಿಎಂಸಿ ಸಂಸದರು ನಿದ್ದೆ ಮಾಡಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...