Homeಫ್ಯಾಕ್ಟ್‌ಚೆಕ್FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು...

FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಯ ಫಲಾನುಭವಿಗಳು ಎಂದು ಪತ್ರಿಕೆಯಲ್ಲಿ ಜಾಹೀರಾತಿನ ರೂಪದಲ್ಲಿ ಪ್ರಕಟಗೊಂಡ ವಿದ್ಯಾರ್ಥಿಗಳ ಫೋಟೋವನ್ನು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದಾರೆ.

Bharathiya Citizen(@LawAcademics)  ಎಂಬ ಎಕ್ಸ್‌ ಬಳಕೆದಾರರು ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದು, “ಫೋಟೋದಲ್ಲಿರುವುದು ನೀಟ್ ಪ್ರವೇಶ ಪ್ರಶ್ನೆ ಪತ್ರಿಕೆ ಸೋರಿಕೆ ಫಲಾನುಭವಿಗಳು. ಇವರು ಯಾವ ಧರ್ಮದವರು ಎಂದು ಸುಮ್ನೆ ನೋಡಿ. ಎಲ್ಲರೂ ಮುಸ್ಲಿಮರು” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಮತ್ತು ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ (@sureshchavhanke)ಕೂಡ ಪತ್ರಿಕೆಯ ಜಾಹೀರಾತಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು” ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು/ಟಾಪರ್‌ಗಳ ಪಟ್ಟಿಯಲ್ಲಿರುವ ಫೋಟೋಗಳನ್ನು ನೋಡಿ. ನೀವು ಇದನ್ನು ಪರೀಕ್ಷಾ ಜಿಹಾದ್ ಎಂದೂ ಕರೆಯಬಹುದು” ಎಂದು ಬರೆದುಕೊಂಡಿದ್ದಾರೆ.

ತನ್ನನ್ನು ತಾನು ಇಂಜಿನಿಯರ್, ವಕೀಲ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿರುವ ಎಕ್ಸ್‌ ಪ್ರೀಮಿಯಂ ಬಳಕೆದಾರ ANUPAM MISHRA(@scribe9104)ಮೇಲೆ ಇಬ್ಬರು ಮಾಡಿದಂತೆ ಆರೋಪಿಸಿ ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ 2.67 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 4,900 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ಇನ್ನೂ ಅನೇಕರು ಇದೇ ರೀತಿಯ ಆರೋಪಗಳನ್ನು ಮಾಡಿ ಪತ್ರಿಕೆಯ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪತ್ರಿಕಾ ಜಾಹೀರಾತಿನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ನೀಟ್ ಟಾಪರ್‌ಗಳಿಗೆ ಅಭಿನಂದನೆ ಕೋರಿ ಕೇರಳದ ಕೋಚಿಂಗ್ ಸೆಂಟರ್‌ ಒಂದು ನೀಡಿರುವ ಜಾಹೀರಾತಿನ ಫೋಟೋ ಎಂದು ತಿಳಿದು ಬಂದಿದೆ.

ಜಾಹೀರಾತಿನಲ್ಲಿ ಹೆಚ್ಚಾಗಿ ಮುಸ್ಲಿಂ ವಿದ್ಯಾರ್ಥಿಗಳ ಫೋಟೋ, ಹೆಸರು ಇರುವುದರಿಂದ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, “ನೀಟ್ ಪ್ರಶ್ನೆ ಪತ್ರಿಕೆಯ ಫಲಾನುಭವಿಗಳು ಇವರೇ” ಎಂಬ ರೀತಿಯಲ್ಲಿ ಕೋಮು ದ್ವೇಷದ, ಸುಳ್ಳು ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

@LawAcademics ಹಾಕಿರುವ ಪೋಸ್ಟ್ ಅನ್ನು ಕೇರಳ ಪೊಲೀಸರಿಗೆ ಟ್ಯಾಗ್ ಮಾಡಿರುವ زماں(@Delhiite) ಎಂಬ ಬಳಕೆದಾರ” ಕೇರಳ ಪೊಲೀಸರೇ ನೋಡಿ, ಈ ಬಳಕೆದಾರ ನಿಮ್ಮ ರಾಜ್ಯವನ್ನು ಅವಮಾನಿಸುತ್ತಿದ್ದಾರೆ ಎಂದಿದ್ದಾರೆ.

“ಇದು ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ ನೀಡಿರುವ ಪತ್ರಿಕಾ ಜಾಹೀರಾತಾಗಿದೆ. ಪ್ರತಿ ವರ್ಷವೂ ಈ ಸಂಸ್ಥೆಯಿಂದ ವಿದ್ಯಾರ್ಥಿಗಳು ನೀಟ್‌ ಮತ್ತು ಜೆಇಇಯಲ್ಲಿ ಆಯ್ಕೆಯಾಗುತ್ತಿದ್ದಾರೆ. ನೀವು ಮೋದಿಯನ್ನು ಆಯ್ಕೆ ಮಾಡಿದ್ದೀರಿ, ಅವರು ಅಧ್ಯಯನವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಮತ್ಸರ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ಗೂ ಟ್ಯಾಗ್‌ ಮಾಡಿ “ನೋಡಿ ನಿಮ್ಮ ಸಂಸ್ಥೆಯನ್ನು ಅವಮಾನಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿ” ಎಂದು ಕೋರಿದ್ದಾರೆ.

ನಾವು ಪತ್ರಿಕಾ ಜಾಹೀರಾತಿನ ಮೂಲ ಪ್ರತಿ ಹುಡುಕಿದಾಗ ಮಾತೃಭೂಮಿ ಪತ್ರಿಕೆಯ ತಿರುವನಂತಪುರ ಆವೃತ್ತಿಯಲ್ಲಿ ಜಾಹೀರಾತು ಪ್ರಕಟಿಸಿರುವುದು ಕಂಡು ಬಂದಿದೆ. ಅದರ ಕೆಳಭಾಗದಲ್ಲಿ ‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಕೋಟಕಲ್’ ಎಂಬ ಉಲ್ಲೇಖವನ್ನು ನೋಡಬಹುದು. ಮೇಲ್ಭಾಗದಲ್ಲಿ, “ಕೊಟ್ಟಕಲ್ ಯೂನಿವರ್ಸಲ್ ಇನ್ಸ್ಟಿಟ್ಯೂಟ್ ರಜತ ಮಹೋತ್ಸವದ ಸಂದರ್ಭದಲ್ಲಿ ಕೇರಳದಲ್ಲಿ ಹೊಸ ಅಲೆ ಸೃಷ್ಟಿಸಿದೆ” ಎಂದು ಹೇಳಲಾಗಿದೆ.

‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್’ ನ ವೆಬ್‌ಸೈಟ್‌ನಲ್ಲೂ ನಾವು ಆ ಜಾಹೀರಾತನ್ನು ನೋಡಬಹುದು.

ಮಾತೃಭೂಮಿ ಪತ್ರಿಕೆಯ ಈ ಪೇಪರ್‌ನಲ್ಲೂ ಜಾಹೀರಾತು ಇದೆ. ಅದರ ಲಿಂಕ್ ಇಲ್ಲಿದೆ.

“ಯೂನಿರ್ವಸಲ್ ಇನ್‌ಸ್ಟಿಟ್ಯೂಟ್‌ನ ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಹಮೀದ್ ಅವರನ್ನು ನಾವು ಸಂಪರ್ಕಕಿಸಿದ್ದೇವೆ. ಈ ವೇಳೆ ಕೋಚಿಂಗ್ ಸೆಂಟರ್‌ನಿಂದ ನೀಟ್-2024 ಟಾಪರ್‌ಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಜಾಹೀರಾತಿನಲ್ಲಿ ಬಹುಪಾಲು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಇರಲು ಕಾರಣ “ಈ ಸಂಸ್ಥೆಯು ಮುಸ್ಲಿಂ ಬಾಹುಳ್ಯದ ಮಲಬಾರ್ ಪ್ರದೇಶದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಸಮುದಾಯಗಳ ವಿದ್ಯಾರ್ಥಿಗಳೂ ಕೂಟ ಟಾಪರ್‌ಗಳ ಪಟ್ಟಿಯಲ್ಲಿ ಇರುವುದನ್ನು ಅವರು ಎತ್ತಿ ತೋರಿಸಿದ್ದಾರೆ” ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ಪತ್ರಿಕೆಯ ಜಾಹೀರಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇರಳ ಪೊಲೀಸರಿಗೆ ದೂರು ನೀಡಿರುವುದಾಗಿ ಹಮೀದ್ ಹೇಳಿದ್ದಾರೆ ಎಂದಿದೆ.

ಒಟ್ಟಿನಲ್ಲಿ ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಈ ವರ್ಷದ ನೀಟ್ ಟಾಪರ್‌ಗಳಿಗೆ ಅಭಿನಂದನೆ ಸಲ್ಲಿಸಿ ಮಾತೃಭೂಮಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಅದರಲ್ಲಿ ಹೆಚ್ಚಿನವರು ಮುಸ್ಲಿಂ ವಿದ್ಯಾರ್ಥಿಗಳು ಇರುವುದನ್ನು ಗಮನಿಸಿದ ಕೋಮುವಾದಿಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಿಂದಲೇ ಇಷ್ಟು ಮಂದಿ ಟಾಪರ್‌ಗಳಾಗಿದ್ದಾರೆ ಎಂದು ಶಿಕ್ಷಣದ ವಿಷಯದಲ್ಲಿ ದ್ವೇಷ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಸಂಸತ್ ಅಧಿವೇಶನದ ವೇಳೆ ಟಿಎಂಸಿ ಸಂಸದರು ನಿದ್ದೆ ಮಾಡಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...