Homeಫ್ಯಾಕ್ಟ್‌ಚೆಕ್FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು...

FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಯ ಫಲಾನುಭವಿಗಳು ಎಂದು ಪತ್ರಿಕೆಯಲ್ಲಿ ಜಾಹೀರಾತಿನ ರೂಪದಲ್ಲಿ ಪ್ರಕಟಗೊಂಡ ವಿದ್ಯಾರ್ಥಿಗಳ ಫೋಟೋವನ್ನು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದಾರೆ.

Bharathiya Citizen(@LawAcademics)  ಎಂಬ ಎಕ್ಸ್‌ ಬಳಕೆದಾರರು ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದು, “ಫೋಟೋದಲ್ಲಿರುವುದು ನೀಟ್ ಪ್ರವೇಶ ಪ್ರಶ್ನೆ ಪತ್ರಿಕೆ ಸೋರಿಕೆ ಫಲಾನುಭವಿಗಳು. ಇವರು ಯಾವ ಧರ್ಮದವರು ಎಂದು ಸುಮ್ನೆ ನೋಡಿ. ಎಲ್ಲರೂ ಮುಸ್ಲಿಮರು” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಮತ್ತು ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ (@sureshchavhanke)ಕೂಡ ಪತ್ರಿಕೆಯ ಜಾಹೀರಾತಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು” ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು/ಟಾಪರ್‌ಗಳ ಪಟ್ಟಿಯಲ್ಲಿರುವ ಫೋಟೋಗಳನ್ನು ನೋಡಿ. ನೀವು ಇದನ್ನು ಪರೀಕ್ಷಾ ಜಿಹಾದ್ ಎಂದೂ ಕರೆಯಬಹುದು” ಎಂದು ಬರೆದುಕೊಂಡಿದ್ದಾರೆ.

ತನ್ನನ್ನು ತಾನು ಇಂಜಿನಿಯರ್, ವಕೀಲ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿರುವ ಎಕ್ಸ್‌ ಪ್ರೀಮಿಯಂ ಬಳಕೆದಾರ ANUPAM MISHRA(@scribe9104)ಮೇಲೆ ಇಬ್ಬರು ಮಾಡಿದಂತೆ ಆರೋಪಿಸಿ ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ 2.67 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 4,900 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ಇನ್ನೂ ಅನೇಕರು ಇದೇ ರೀತಿಯ ಆರೋಪಗಳನ್ನು ಮಾಡಿ ಪತ್ರಿಕೆಯ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪತ್ರಿಕಾ ಜಾಹೀರಾತಿನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ನೀಟ್ ಟಾಪರ್‌ಗಳಿಗೆ ಅಭಿನಂದನೆ ಕೋರಿ ಕೇರಳದ ಕೋಚಿಂಗ್ ಸೆಂಟರ್‌ ಒಂದು ನೀಡಿರುವ ಜಾಹೀರಾತಿನ ಫೋಟೋ ಎಂದು ತಿಳಿದು ಬಂದಿದೆ.

ಜಾಹೀರಾತಿನಲ್ಲಿ ಹೆಚ್ಚಾಗಿ ಮುಸ್ಲಿಂ ವಿದ್ಯಾರ್ಥಿಗಳ ಫೋಟೋ, ಹೆಸರು ಇರುವುದರಿಂದ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, “ನೀಟ್ ಪ್ರಶ್ನೆ ಪತ್ರಿಕೆಯ ಫಲಾನುಭವಿಗಳು ಇವರೇ” ಎಂಬ ರೀತಿಯಲ್ಲಿ ಕೋಮು ದ್ವೇಷದ, ಸುಳ್ಳು ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

@LawAcademics ಹಾಕಿರುವ ಪೋಸ್ಟ್ ಅನ್ನು ಕೇರಳ ಪೊಲೀಸರಿಗೆ ಟ್ಯಾಗ್ ಮಾಡಿರುವ زماں(@Delhiite) ಎಂಬ ಬಳಕೆದಾರ” ಕೇರಳ ಪೊಲೀಸರೇ ನೋಡಿ, ಈ ಬಳಕೆದಾರ ನಿಮ್ಮ ರಾಜ್ಯವನ್ನು ಅವಮಾನಿಸುತ್ತಿದ್ದಾರೆ ಎಂದಿದ್ದಾರೆ.

“ಇದು ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ ನೀಡಿರುವ ಪತ್ರಿಕಾ ಜಾಹೀರಾತಾಗಿದೆ. ಪ್ರತಿ ವರ್ಷವೂ ಈ ಸಂಸ್ಥೆಯಿಂದ ವಿದ್ಯಾರ್ಥಿಗಳು ನೀಟ್‌ ಮತ್ತು ಜೆಇಇಯಲ್ಲಿ ಆಯ್ಕೆಯಾಗುತ್ತಿದ್ದಾರೆ. ನೀವು ಮೋದಿಯನ್ನು ಆಯ್ಕೆ ಮಾಡಿದ್ದೀರಿ, ಅವರು ಅಧ್ಯಯನವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಮತ್ಸರ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ಗೂ ಟ್ಯಾಗ್‌ ಮಾಡಿ “ನೋಡಿ ನಿಮ್ಮ ಸಂಸ್ಥೆಯನ್ನು ಅವಮಾನಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿ” ಎಂದು ಕೋರಿದ್ದಾರೆ.

ನಾವು ಪತ್ರಿಕಾ ಜಾಹೀರಾತಿನ ಮೂಲ ಪ್ರತಿ ಹುಡುಕಿದಾಗ ಮಾತೃಭೂಮಿ ಪತ್ರಿಕೆಯ ತಿರುವನಂತಪುರ ಆವೃತ್ತಿಯಲ್ಲಿ ಜಾಹೀರಾತು ಪ್ರಕಟಿಸಿರುವುದು ಕಂಡು ಬಂದಿದೆ. ಅದರ ಕೆಳಭಾಗದಲ್ಲಿ ‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಕೋಟಕಲ್’ ಎಂಬ ಉಲ್ಲೇಖವನ್ನು ನೋಡಬಹುದು. ಮೇಲ್ಭಾಗದಲ್ಲಿ, “ಕೊಟ್ಟಕಲ್ ಯೂನಿವರ್ಸಲ್ ಇನ್ಸ್ಟಿಟ್ಯೂಟ್ ರಜತ ಮಹೋತ್ಸವದ ಸಂದರ್ಭದಲ್ಲಿ ಕೇರಳದಲ್ಲಿ ಹೊಸ ಅಲೆ ಸೃಷ್ಟಿಸಿದೆ” ಎಂದು ಹೇಳಲಾಗಿದೆ.

‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್’ ನ ವೆಬ್‌ಸೈಟ್‌ನಲ್ಲೂ ನಾವು ಆ ಜಾಹೀರಾತನ್ನು ನೋಡಬಹುದು.

ಮಾತೃಭೂಮಿ ಪತ್ರಿಕೆಯ ಈ ಪೇಪರ್‌ನಲ್ಲೂ ಜಾಹೀರಾತು ಇದೆ. ಅದರ ಲಿಂಕ್ ಇಲ್ಲಿದೆ.

“ಯೂನಿರ್ವಸಲ್ ಇನ್‌ಸ್ಟಿಟ್ಯೂಟ್‌ನ ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಹಮೀದ್ ಅವರನ್ನು ನಾವು ಸಂಪರ್ಕಕಿಸಿದ್ದೇವೆ. ಈ ವೇಳೆ ಕೋಚಿಂಗ್ ಸೆಂಟರ್‌ನಿಂದ ನೀಟ್-2024 ಟಾಪರ್‌ಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಜಾಹೀರಾತಿನಲ್ಲಿ ಬಹುಪಾಲು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಇರಲು ಕಾರಣ “ಈ ಸಂಸ್ಥೆಯು ಮುಸ್ಲಿಂ ಬಾಹುಳ್ಯದ ಮಲಬಾರ್ ಪ್ರದೇಶದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಸಮುದಾಯಗಳ ವಿದ್ಯಾರ್ಥಿಗಳೂ ಕೂಟ ಟಾಪರ್‌ಗಳ ಪಟ್ಟಿಯಲ್ಲಿ ಇರುವುದನ್ನು ಅವರು ಎತ್ತಿ ತೋರಿಸಿದ್ದಾರೆ” ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ಪತ್ರಿಕೆಯ ಜಾಹೀರಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇರಳ ಪೊಲೀಸರಿಗೆ ದೂರು ನೀಡಿರುವುದಾಗಿ ಹಮೀದ್ ಹೇಳಿದ್ದಾರೆ ಎಂದಿದೆ.

ಒಟ್ಟಿನಲ್ಲಿ ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಈ ವರ್ಷದ ನೀಟ್ ಟಾಪರ್‌ಗಳಿಗೆ ಅಭಿನಂದನೆ ಸಲ್ಲಿಸಿ ಮಾತೃಭೂಮಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಅದರಲ್ಲಿ ಹೆಚ್ಚಿನವರು ಮುಸ್ಲಿಂ ವಿದ್ಯಾರ್ಥಿಗಳು ಇರುವುದನ್ನು ಗಮನಿಸಿದ ಕೋಮುವಾದಿಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಿಂದಲೇ ಇಷ್ಟು ಮಂದಿ ಟಾಪರ್‌ಗಳಾಗಿದ್ದಾರೆ ಎಂದು ಶಿಕ್ಷಣದ ವಿಷಯದಲ್ಲಿ ದ್ವೇಷ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಸಂಸತ್ ಅಧಿವೇಶನದ ವೇಳೆ ಟಿಎಂಸಿ ಸಂಸದರು ನಿದ್ದೆ ಮಾಡಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...