Homeಫ್ಯಾಕ್ಟ್‌ಚೆಕ್FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು...

FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಯ ಫಲಾನುಭವಿಗಳು ಎಂದು ಪತ್ರಿಕೆಯಲ್ಲಿ ಜಾಹೀರಾತಿನ ರೂಪದಲ್ಲಿ ಪ್ರಕಟಗೊಂಡ ವಿದ್ಯಾರ್ಥಿಗಳ ಫೋಟೋವನ್ನು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದಾರೆ.

Bharathiya Citizen(@LawAcademics)  ಎಂಬ ಎಕ್ಸ್‌ ಬಳಕೆದಾರರು ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದು, “ಫೋಟೋದಲ್ಲಿರುವುದು ನೀಟ್ ಪ್ರವೇಶ ಪ್ರಶ್ನೆ ಪತ್ರಿಕೆ ಸೋರಿಕೆ ಫಲಾನುಭವಿಗಳು. ಇವರು ಯಾವ ಧರ್ಮದವರು ಎಂದು ಸುಮ್ನೆ ನೋಡಿ. ಎಲ್ಲರೂ ಮುಸ್ಲಿಮರು” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಮತ್ತು ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ (@sureshchavhanke)ಕೂಡ ಪತ್ರಿಕೆಯ ಜಾಹೀರಾತಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು” ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು/ಟಾಪರ್‌ಗಳ ಪಟ್ಟಿಯಲ್ಲಿರುವ ಫೋಟೋಗಳನ್ನು ನೋಡಿ. ನೀವು ಇದನ್ನು ಪರೀಕ್ಷಾ ಜಿಹಾದ್ ಎಂದೂ ಕರೆಯಬಹುದು” ಎಂದು ಬರೆದುಕೊಂಡಿದ್ದಾರೆ.

ತನ್ನನ್ನು ತಾನು ಇಂಜಿನಿಯರ್, ವಕೀಲ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿರುವ ಎಕ್ಸ್‌ ಪ್ರೀಮಿಯಂ ಬಳಕೆದಾರ ANUPAM MISHRA(@scribe9104)ಮೇಲೆ ಇಬ್ಬರು ಮಾಡಿದಂತೆ ಆರೋಪಿಸಿ ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ 2.67 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 4,900 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ಇನ್ನೂ ಅನೇಕರು ಇದೇ ರೀತಿಯ ಆರೋಪಗಳನ್ನು ಮಾಡಿ ಪತ್ರಿಕೆಯ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪತ್ರಿಕಾ ಜಾಹೀರಾತಿನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ನೀಟ್ ಟಾಪರ್‌ಗಳಿಗೆ ಅಭಿನಂದನೆ ಕೋರಿ ಕೇರಳದ ಕೋಚಿಂಗ್ ಸೆಂಟರ್‌ ಒಂದು ನೀಡಿರುವ ಜಾಹೀರಾತಿನ ಫೋಟೋ ಎಂದು ತಿಳಿದು ಬಂದಿದೆ.

ಜಾಹೀರಾತಿನಲ್ಲಿ ಹೆಚ್ಚಾಗಿ ಮುಸ್ಲಿಂ ವಿದ್ಯಾರ್ಥಿಗಳ ಫೋಟೋ, ಹೆಸರು ಇರುವುದರಿಂದ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, “ನೀಟ್ ಪ್ರಶ್ನೆ ಪತ್ರಿಕೆಯ ಫಲಾನುಭವಿಗಳು ಇವರೇ” ಎಂಬ ರೀತಿಯಲ್ಲಿ ಕೋಮು ದ್ವೇಷದ, ಸುಳ್ಳು ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

@LawAcademics ಹಾಕಿರುವ ಪೋಸ್ಟ್ ಅನ್ನು ಕೇರಳ ಪೊಲೀಸರಿಗೆ ಟ್ಯಾಗ್ ಮಾಡಿರುವ زماں(@Delhiite) ಎಂಬ ಬಳಕೆದಾರ” ಕೇರಳ ಪೊಲೀಸರೇ ನೋಡಿ, ಈ ಬಳಕೆದಾರ ನಿಮ್ಮ ರಾಜ್ಯವನ್ನು ಅವಮಾನಿಸುತ್ತಿದ್ದಾರೆ ಎಂದಿದ್ದಾರೆ.

“ಇದು ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ ನೀಡಿರುವ ಪತ್ರಿಕಾ ಜಾಹೀರಾತಾಗಿದೆ. ಪ್ರತಿ ವರ್ಷವೂ ಈ ಸಂಸ್ಥೆಯಿಂದ ವಿದ್ಯಾರ್ಥಿಗಳು ನೀಟ್‌ ಮತ್ತು ಜೆಇಇಯಲ್ಲಿ ಆಯ್ಕೆಯಾಗುತ್ತಿದ್ದಾರೆ. ನೀವು ಮೋದಿಯನ್ನು ಆಯ್ಕೆ ಮಾಡಿದ್ದೀರಿ, ಅವರು ಅಧ್ಯಯನವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಮತ್ಸರ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ಗೂ ಟ್ಯಾಗ್‌ ಮಾಡಿ “ನೋಡಿ ನಿಮ್ಮ ಸಂಸ್ಥೆಯನ್ನು ಅವಮಾನಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿ” ಎಂದು ಕೋರಿದ್ದಾರೆ.

ನಾವು ಪತ್ರಿಕಾ ಜಾಹೀರಾತಿನ ಮೂಲ ಪ್ರತಿ ಹುಡುಕಿದಾಗ ಮಾತೃಭೂಮಿ ಪತ್ರಿಕೆಯ ತಿರುವನಂತಪುರ ಆವೃತ್ತಿಯಲ್ಲಿ ಜಾಹೀರಾತು ಪ್ರಕಟಿಸಿರುವುದು ಕಂಡು ಬಂದಿದೆ. ಅದರ ಕೆಳಭಾಗದಲ್ಲಿ ‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಕೋಟಕಲ್’ ಎಂಬ ಉಲ್ಲೇಖವನ್ನು ನೋಡಬಹುದು. ಮೇಲ್ಭಾಗದಲ್ಲಿ, “ಕೊಟ್ಟಕಲ್ ಯೂನಿವರ್ಸಲ್ ಇನ್ಸ್ಟಿಟ್ಯೂಟ್ ರಜತ ಮಹೋತ್ಸವದ ಸಂದರ್ಭದಲ್ಲಿ ಕೇರಳದಲ್ಲಿ ಹೊಸ ಅಲೆ ಸೃಷ್ಟಿಸಿದೆ” ಎಂದು ಹೇಳಲಾಗಿದೆ.

‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್’ ನ ವೆಬ್‌ಸೈಟ್‌ನಲ್ಲೂ ನಾವು ಆ ಜಾಹೀರಾತನ್ನು ನೋಡಬಹುದು.

ಮಾತೃಭೂಮಿ ಪತ್ರಿಕೆಯ ಈ ಪೇಪರ್‌ನಲ್ಲೂ ಜಾಹೀರಾತು ಇದೆ. ಅದರ ಲಿಂಕ್ ಇಲ್ಲಿದೆ.

“ಯೂನಿರ್ವಸಲ್ ಇನ್‌ಸ್ಟಿಟ್ಯೂಟ್‌ನ ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಹಮೀದ್ ಅವರನ್ನು ನಾವು ಸಂಪರ್ಕಕಿಸಿದ್ದೇವೆ. ಈ ವೇಳೆ ಕೋಚಿಂಗ್ ಸೆಂಟರ್‌ನಿಂದ ನೀಟ್-2024 ಟಾಪರ್‌ಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಜಾಹೀರಾತಿನಲ್ಲಿ ಬಹುಪಾಲು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಇರಲು ಕಾರಣ “ಈ ಸಂಸ್ಥೆಯು ಮುಸ್ಲಿಂ ಬಾಹುಳ್ಯದ ಮಲಬಾರ್ ಪ್ರದೇಶದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಸಮುದಾಯಗಳ ವಿದ್ಯಾರ್ಥಿಗಳೂ ಕೂಟ ಟಾಪರ್‌ಗಳ ಪಟ್ಟಿಯಲ್ಲಿ ಇರುವುದನ್ನು ಅವರು ಎತ್ತಿ ತೋರಿಸಿದ್ದಾರೆ” ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ಪತ್ರಿಕೆಯ ಜಾಹೀರಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇರಳ ಪೊಲೀಸರಿಗೆ ದೂರು ನೀಡಿರುವುದಾಗಿ ಹಮೀದ್ ಹೇಳಿದ್ದಾರೆ ಎಂದಿದೆ.

ಒಟ್ಟಿನಲ್ಲಿ ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಈ ವರ್ಷದ ನೀಟ್ ಟಾಪರ್‌ಗಳಿಗೆ ಅಭಿನಂದನೆ ಸಲ್ಲಿಸಿ ಮಾತೃಭೂಮಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಅದರಲ್ಲಿ ಹೆಚ್ಚಿನವರು ಮುಸ್ಲಿಂ ವಿದ್ಯಾರ್ಥಿಗಳು ಇರುವುದನ್ನು ಗಮನಿಸಿದ ಕೋಮುವಾದಿಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಿಂದಲೇ ಇಷ್ಟು ಮಂದಿ ಟಾಪರ್‌ಗಳಾಗಿದ್ದಾರೆ ಎಂದು ಶಿಕ್ಷಣದ ವಿಷಯದಲ್ಲಿ ದ್ವೇಷ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಸಂಸತ್ ಅಧಿವೇಶನದ ವೇಳೆ ಟಿಎಂಸಿ ಸಂಸದರು ನಿದ್ದೆ ಮಾಡಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...