Homeಫ್ಯಾಕ್ಟ್‌ಚೆಕ್FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು...

FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಯ ಫಲಾನುಭವಿಗಳು ಎಂದು ಪತ್ರಿಕೆಯಲ್ಲಿ ಜಾಹೀರಾತಿನ ರೂಪದಲ್ಲಿ ಪ್ರಕಟಗೊಂಡ ವಿದ್ಯಾರ್ಥಿಗಳ ಫೋಟೋವನ್ನು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದಾರೆ.

Bharathiya Citizen(@LawAcademics)  ಎಂಬ ಎಕ್ಸ್‌ ಬಳಕೆದಾರರು ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದು, “ಫೋಟೋದಲ್ಲಿರುವುದು ನೀಟ್ ಪ್ರವೇಶ ಪ್ರಶ್ನೆ ಪತ್ರಿಕೆ ಸೋರಿಕೆ ಫಲಾನುಭವಿಗಳು. ಇವರು ಯಾವ ಧರ್ಮದವರು ಎಂದು ಸುಮ್ನೆ ನೋಡಿ. ಎಲ್ಲರೂ ಮುಸ್ಲಿಮರು” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಮತ್ತು ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ (@sureshchavhanke)ಕೂಡ ಪತ್ರಿಕೆಯ ಜಾಹೀರಾತಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು” ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು/ಟಾಪರ್‌ಗಳ ಪಟ್ಟಿಯಲ್ಲಿರುವ ಫೋಟೋಗಳನ್ನು ನೋಡಿ. ನೀವು ಇದನ್ನು ಪರೀಕ್ಷಾ ಜಿಹಾದ್ ಎಂದೂ ಕರೆಯಬಹುದು” ಎಂದು ಬರೆದುಕೊಂಡಿದ್ದಾರೆ.

ತನ್ನನ್ನು ತಾನು ಇಂಜಿನಿಯರ್, ವಕೀಲ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿರುವ ಎಕ್ಸ್‌ ಪ್ರೀಮಿಯಂ ಬಳಕೆದಾರ ANUPAM MISHRA(@scribe9104)ಮೇಲೆ ಇಬ್ಬರು ಮಾಡಿದಂತೆ ಆರೋಪಿಸಿ ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ 2.67 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 4,900 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ಇನ್ನೂ ಅನೇಕರು ಇದೇ ರೀತಿಯ ಆರೋಪಗಳನ್ನು ಮಾಡಿ ಪತ್ರಿಕೆಯ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪತ್ರಿಕಾ ಜಾಹೀರಾತಿನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ನೀಟ್ ಟಾಪರ್‌ಗಳಿಗೆ ಅಭಿನಂದನೆ ಕೋರಿ ಕೇರಳದ ಕೋಚಿಂಗ್ ಸೆಂಟರ್‌ ಒಂದು ನೀಡಿರುವ ಜಾಹೀರಾತಿನ ಫೋಟೋ ಎಂದು ತಿಳಿದು ಬಂದಿದೆ.

ಜಾಹೀರಾತಿನಲ್ಲಿ ಹೆಚ್ಚಾಗಿ ಮುಸ್ಲಿಂ ವಿದ್ಯಾರ್ಥಿಗಳ ಫೋಟೋ, ಹೆಸರು ಇರುವುದರಿಂದ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, “ನೀಟ್ ಪ್ರಶ್ನೆ ಪತ್ರಿಕೆಯ ಫಲಾನುಭವಿಗಳು ಇವರೇ” ಎಂಬ ರೀತಿಯಲ್ಲಿ ಕೋಮು ದ್ವೇಷದ, ಸುಳ್ಳು ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

@LawAcademics ಹಾಕಿರುವ ಪೋಸ್ಟ್ ಅನ್ನು ಕೇರಳ ಪೊಲೀಸರಿಗೆ ಟ್ಯಾಗ್ ಮಾಡಿರುವ زماں(@Delhiite) ಎಂಬ ಬಳಕೆದಾರ” ಕೇರಳ ಪೊಲೀಸರೇ ನೋಡಿ, ಈ ಬಳಕೆದಾರ ನಿಮ್ಮ ರಾಜ್ಯವನ್ನು ಅವಮಾನಿಸುತ್ತಿದ್ದಾರೆ ಎಂದಿದ್ದಾರೆ.

“ಇದು ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ ನೀಡಿರುವ ಪತ್ರಿಕಾ ಜಾಹೀರಾತಾಗಿದೆ. ಪ್ರತಿ ವರ್ಷವೂ ಈ ಸಂಸ್ಥೆಯಿಂದ ವಿದ್ಯಾರ್ಥಿಗಳು ನೀಟ್‌ ಮತ್ತು ಜೆಇಇಯಲ್ಲಿ ಆಯ್ಕೆಯಾಗುತ್ತಿದ್ದಾರೆ. ನೀವು ಮೋದಿಯನ್ನು ಆಯ್ಕೆ ಮಾಡಿದ್ದೀರಿ, ಅವರು ಅಧ್ಯಯನವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಮತ್ಸರ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ಗೂ ಟ್ಯಾಗ್‌ ಮಾಡಿ “ನೋಡಿ ನಿಮ್ಮ ಸಂಸ್ಥೆಯನ್ನು ಅವಮಾನಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿ” ಎಂದು ಕೋರಿದ್ದಾರೆ.

ನಾವು ಪತ್ರಿಕಾ ಜಾಹೀರಾತಿನ ಮೂಲ ಪ್ರತಿ ಹುಡುಕಿದಾಗ ಮಾತೃಭೂಮಿ ಪತ್ರಿಕೆಯ ತಿರುವನಂತಪುರ ಆವೃತ್ತಿಯಲ್ಲಿ ಜಾಹೀರಾತು ಪ್ರಕಟಿಸಿರುವುದು ಕಂಡು ಬಂದಿದೆ. ಅದರ ಕೆಳಭಾಗದಲ್ಲಿ ‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಕೋಟಕಲ್’ ಎಂಬ ಉಲ್ಲೇಖವನ್ನು ನೋಡಬಹುದು. ಮೇಲ್ಭಾಗದಲ್ಲಿ, “ಕೊಟ್ಟಕಲ್ ಯೂನಿವರ್ಸಲ್ ಇನ್ಸ್ಟಿಟ್ಯೂಟ್ ರಜತ ಮಹೋತ್ಸವದ ಸಂದರ್ಭದಲ್ಲಿ ಕೇರಳದಲ್ಲಿ ಹೊಸ ಅಲೆ ಸೃಷ್ಟಿಸಿದೆ” ಎಂದು ಹೇಳಲಾಗಿದೆ.

‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್’ ನ ವೆಬ್‌ಸೈಟ್‌ನಲ್ಲೂ ನಾವು ಆ ಜಾಹೀರಾತನ್ನು ನೋಡಬಹುದು.

ಮಾತೃಭೂಮಿ ಪತ್ರಿಕೆಯ ಈ ಪೇಪರ್‌ನಲ್ಲೂ ಜಾಹೀರಾತು ಇದೆ. ಅದರ ಲಿಂಕ್ ಇಲ್ಲಿದೆ.

“ಯೂನಿರ್ವಸಲ್ ಇನ್‌ಸ್ಟಿಟ್ಯೂಟ್‌ನ ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಹಮೀದ್ ಅವರನ್ನು ನಾವು ಸಂಪರ್ಕಕಿಸಿದ್ದೇವೆ. ಈ ವೇಳೆ ಕೋಚಿಂಗ್ ಸೆಂಟರ್‌ನಿಂದ ನೀಟ್-2024 ಟಾಪರ್‌ಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಜಾಹೀರಾತಿನಲ್ಲಿ ಬಹುಪಾಲು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಇರಲು ಕಾರಣ “ಈ ಸಂಸ್ಥೆಯು ಮುಸ್ಲಿಂ ಬಾಹುಳ್ಯದ ಮಲಬಾರ್ ಪ್ರದೇಶದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಸಮುದಾಯಗಳ ವಿದ್ಯಾರ್ಥಿಗಳೂ ಕೂಟ ಟಾಪರ್‌ಗಳ ಪಟ್ಟಿಯಲ್ಲಿ ಇರುವುದನ್ನು ಅವರು ಎತ್ತಿ ತೋರಿಸಿದ್ದಾರೆ” ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ಪತ್ರಿಕೆಯ ಜಾಹೀರಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇರಳ ಪೊಲೀಸರಿಗೆ ದೂರು ನೀಡಿರುವುದಾಗಿ ಹಮೀದ್ ಹೇಳಿದ್ದಾರೆ ಎಂದಿದೆ.

ಒಟ್ಟಿನಲ್ಲಿ ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಈ ವರ್ಷದ ನೀಟ್ ಟಾಪರ್‌ಗಳಿಗೆ ಅಭಿನಂದನೆ ಸಲ್ಲಿಸಿ ಮಾತೃಭೂಮಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಅದರಲ್ಲಿ ಹೆಚ್ಚಿನವರು ಮುಸ್ಲಿಂ ವಿದ್ಯಾರ್ಥಿಗಳು ಇರುವುದನ್ನು ಗಮನಿಸಿದ ಕೋಮುವಾದಿಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಿಂದಲೇ ಇಷ್ಟು ಮಂದಿ ಟಾಪರ್‌ಗಳಾಗಿದ್ದಾರೆ ಎಂದು ಶಿಕ್ಷಣದ ವಿಷಯದಲ್ಲಿ ದ್ವೇಷ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಸಂಸತ್ ಅಧಿವೇಶನದ ವೇಳೆ ಟಿಎಂಸಿ ಸಂಸದರು ನಿದ್ದೆ ಮಾಡಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...