Homeಫ್ಯಾಕ್ಟ್‌ಚೆಕ್FACT CHECK : ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ...

FACT CHECK : ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪ ಹೊತ್ತಿರುವ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜೂನ್ 4ರಂದು ಹೊರಬಿದ್ದ ಫಲಿತಾಂಶದಲ್ಲಿ ಜಯಗಳಿಸಿದ್ದರು. ಈ ಬೆನ್ನಲ್ಲೇ ಜೂನ್ 6ರಂದು ಕಂಗನಾ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

“ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ವರ್ಗಾಯಿಸಲಾಗಿದೆ. ಅವರ ಅಮಾನತನ್ನು ಹಿಂತೆಗೆದುಕೊಳ್ಳಲಾಗಿದೆ, ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ” ಎಂದು ಹಲವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಫಸ್ಟ್‌ಪೋಸ್ಟ್‌ಇಂಡಿಯನ್ ಎಕ್ಸ್‌ಪ್ರೆಸ್‌ ಮತ್ತು ವಾರ್ತಾಭಾರತಿ ಸೇರಿದಂತೆ ಕೆಲ ಮಾಧ್ಯಮಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿ ಸುಳ್ಳು ಎಂದು ಸಿಎಸ್ಐಎಫ್ ಸ್ಪಷ್ಟನೆ ನೀಡಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.

“ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಇನ್ನೂ ಅಮಾನತಿನಲ್ಲಿರಿಸಲಾಗಿದೆ. ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ” ಎಂದು ಸಿಎಸ್ಐಎಫ್ ಹೇಳಿರುವುದಾಗಿ ಎಎನ್ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಮತ್ತು ಬೆಂಗಳೂರಿನಲ್ಲಿ ನಿಯೋಜಿಸಲಾಗಿದೆ ಎಂದು ಪತ್ರಕರ್ತ ಗಗನ್‌ದೀಪ್ ಸಿಂಗ್ ಸುಳ್ಳು ಸುದ್ದಿ ಹಂಚಿಕೊಂಡಿದ್ದಾರೆ” ಎಂದು ಓನ್ಲಿ ಫ್ಯಾಕ್ಟ್‌ ಇಂಡಿಯಾ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

ಟೈಮ್ಸ್ ಆಫ್ ಇಂಡಿಯಾ, ಫ್ರೀ ಪ್ರೆಸ್ ಜರ್ನಲ್ ಸೇರಿದಂತೆ ಪ್ರಮುಖ ಮಾಧ್ಯಮಗಳು ಕೂಡ “ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಇನ್ನೂ ಅಮಾನತಿನಲ್ಲಿದ್ದಾರೆ. ಅವರನ್ನು ಬೆಂಗಳೂರಿಗೆ ವರ್ಗಾಯಿಸಿಲ್ಲ” ಎಂದು ವರದಿ ಮಾಡಿವೆ.

ಕೆಲ ಮಾಧ್ಯಮಗಳು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಆಧಾರವಾಗಿಟ್ಟುಕೊಂಡು ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ವಿಮಾನ ನಿಲ್ಧಾಣಕ್ಕೆ ವರ್ಗಾಯಿಸಲಾಗಿದೆ ಎಂದು ತಪ್ಪಾದ ಸುದ್ದಿ ಪ್ರಕಟಿಸಿರುವುದು ನಮ್ಮ ಪರಿಶೀಲನೆಯಲ್ಲಿ ಕಂಡು ಬಂದಿದೆ.

ಇದನ್ನೂ ಓದಿ : FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...