Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...