Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...