Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...