Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...