Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...