Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...