Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...