Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...