Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...