Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...