Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...