Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...