Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...